ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ: ರೈತಪರ ನಿರ್ಣಯಕ್ಕೆ ನಾಯಕರೊಂದಿಗೆ ಚರ್ಚೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸ್ಪಷ್ಟನೆ

Date:

Advertisements

ಡಿಸಿಸಿ (ಜಿಲ್ಲಾ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ) ಬ್ಯಾಂಕ್‌ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಗಂಭೀರ ಚರ್ಚೆ ನಡೆಸುತ್ತಿದ್ದು, ರೈತಪರವಾಗಿ ನಿರ್ಣಯ ಕೈಗೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ನೇರ ಉತ್ತರ ನೀಡದೇ, “ರಾಜ್ಯದಲ್ಲಿ ಅಪೆಕ್ಸ್‌ ಬ್ಯಾಂಕ್ ಬಿಟ್ಟರೆ, ಡಿಸಿಸಿ ಬ್ಯಾಂಕ್ ದೊಡ್ಡದು. ಈ ಕುರಿತು ಸಚಿವ ಸತೀಶ ಜಾರಕಿಹೊಳಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಮತ್ತಿತರ ನಾಯಕರೊಂದಿಗೆ ಚರ್ಚಿಸಿ, ಮುಂದಿನ ಹೆಜ್ಜೆ ಇಡಲಾಗುವುದು. ನಮ್ಮ ನಿಲುವು ಸಂಪೂರ್ಣವಾಗಿ ರೈತಪರವಾಗಿರಲಿದೆ,” ಎಂದು ಹೇಳಿದರು.

ಸುರ್ಜೇವಾಲಾ ಸಭೆ ಕುರಿತು ಸ್ಪಷ್ಟನೆ

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅವರು ಯಾವುದೇ ಇಲಾಖೆ ಅಧಿಕಾರಿಗಳ ಸಭೆ ನಡೆಸಿಲ್ಲ. ಎಲ್ಲ ಶಾಸಕ ಮತ್ತು ಮಂತ್ರಿಗಳನ್ನು ಕರೆದು ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಚರ್ಚಿಸಿದರು. ಅನುದಾನದ ಬಳಕೆ, ಕಾಮಗಾರಿಗಳ ಉಸ್ತುವಾರಿ ಕುರಿತು ಪ್ರಶ್ನಿಸಿದರು. ಇದು ಮೂರು ತಿಂಗಳಿಗೆ ಒಂದು ಬಾರಿ ನಡೆಯುವ ರೂಟೀನ್ ಕಾರ್ಯವಷ್ಟೇ,” ಎಂದರು.

‘ಕ್ರಾಂತಿ’ ಹೇಳಿಕೆಗೆ ಪ್ರತಿಕ್ರಿಯೆ

ಸಚಿವ ರಾಜಣ್ಣ ನೀಡಿದ್ದ “ಸೆಪ್ಟೆಂಬರ್‌ನಲ್ಲಿ ರಾಜಕೀಯ ಕ್ರಾಂತಿ” ಸಂಭವಿಸುತ್ತದೆ ಎಂಬ ಹೇಳಿಕೆಯನ್ನು ಪ್ರಸ್ತಾಪಿಸಿದಾಗ, ಸಚಿವೆ ಹೇಳಿದರು, “ನಮ್ಮ ಪಕ್ಷವು ಹೈಕಮಾಂಡ್ ಹೇಳಿದಂತೆ ನಡೆಯುತ್ತದೆ. ಈ ಕುರಿತು ಮುಖ್ಯಮಂತ್ರಿ ಸಿಧ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ.”

ಮಹದಾಯಿ ಕುರಿತು ಬಿಜೆಪಿ ಮೇಲೆ ವಾಗ್ದಾಳಿ

ಮಹದಾಯಿ ನದೀ ಜಲ ಯೋಜನೆ ಕುರಿತು ಮಾತನಾಡಿದ ಅವರು, “ಈ ಯೋಜನೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆದಿದೆ. ನಾವು ಕುಡಿಯುವ ನೀರಿಗಾಗಿ ಕೇಳುತ್ತಿದ್ದೇವೆ, ನೀರಾವರಿಗಾಗಿ ಅಲ್ಲ. ಈ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಬಿಜೆಪಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಸಿಹಿ ಹಂಚಿತು. ಈಗ ಈ ಬಗ್ಗೆ ಮಾತನಾಡುತ್ತಿಲ್ಲ,” ಎಂದು ಬಿಜೆಪಿಯ ಆಚರಣೆ ಮೇಲೆ ಟೀಕೆ ಮಾಡಿದ ಸಚಿವೆ, “ಈ ಯೋಜನೆಯನ್ನು ಚುನಾವಣೆ ಅಸ್ತ್ರವಾಗಿ ಉಪಯೋಗಿಸಿದರು, ಆದರೆ ಅನುಷ್ಠಾನ ಬಗೆಗೆ ಕತ್ತಲೆಯೇ ಇದೆ” ಎಂದರು.

ಉತ್ತರ ಕರ್ನಾಟಕದ ಚಿತ್ರರಂಗಕ್ಕೆ ಹೊಸ ಆಶಾಕಿರಣ

ಸಿನಿಮಾ ಕ್ಷೇತ್ರದಲ್ಲಿ ಹೊಸ ಪ್ರಯತ್ನವನ್ನೂ ಪ್ರಸ್ತಾಪಿಸಿದ ಅವರು, “ಐರಾ ಪ್ರೊಡಕ್ಷನ್ ವರ್ಕ್ಸ್ ಅಡಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಡಾಲಿ ಧನಂಜಯ್ ನಾಯಕತ್ವದಲ್ಲಿ ಎರಡು ಚಿತ್ರಗಳನ್ನು ನಿರ್ಮಿಸುತ್ತಿದ್ದೇವೆ. ಈ ಸಿನಿಮಾಗಳಿಂದ ಉತ್ತರ ಕರ್ನಾಟಕವಷ್ಟೇ ಅಲ್ಲದೆ, ಇಡೀ ರಾಜ್ಯದ ಕಲಾವಿದರಿಗೆ ಅವಕಾಶ ಲಭ್ಯವಾಗಲಿದೆ,” ಎಂದು ಹೇಳಿದರು.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಾರಕಿಹೊಳಿ ಸಹೋದರರಿಂದ ಹುಕ್ಕೇರಿಯಲ್ಲಿ ಮದ್ಯ–ಮಾಂಸ ಬಾಡೂಟ : ರಮೇಶ ಕತ್ತಿ ಆರೋಪ

ಬೆಳಗಾವಿ ಜಿಲ್ಲೆಯ ಸಹಕಾರಿ ಸಂಘಗಳ ಚುನಾವಣಾ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ಹಲವು...

ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ...

ಬೆಳಗಾವಿ : ಸಭೆಯಲ್ಲಿ ಕಣ್ಣೀರು ಹಾಕಿದ ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಮಾಜಿ ಸಚಿವ...

ಬೆಳಗಾವಿ : ನಗರದಲ್ಲಿ ರೈತರ ಪ್ರತಿಭಟನೆ ಎಫ್‌ಐಆರ್ ದಾಖಲು

ಜೈ ಕಿಸಾನ್ ತರಕಾರಿ ಮಾರುಕಟ್ಟೆ ಓಪನ್ ಮಾಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ...

Download Eedina App Android / iOS

X