ಮಗಳನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ ತಂದೆಗೆ ಆರೋಪಿ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಚಾಕು ಹಾಕಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಂದಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.
ಕೊರಟಗೆರೆ ತಾಲ್ಲೂಕಿನ ಸಿ ಎನ್ ದುರ್ಗಾ ಹೋಬಳಿ ಬೋರಪ್ಪನಹಳ್ಳಿ ಗ್ರಾಮದಲ್ಲಿ ದುರ್ಘಟನೆ ಜರುಗಿದ್ದು, ಶಾಲಾ ವಿದ್ಯಾರ್ಥಿನಿಯನ್ನ ಅನಾವಶ್ಯಕವಾಗಿ ರೇಗಿಸುತ್ತಿದ್ದ ಯುವಕ ನನ್ನ ಪ್ರಶ್ನಿಸಿದ ತಂದೆ ಗಿರೀಶ್ ಎಂಬುವರ ಮೇಲೆ ಮೂರು ಜನ ದಾಳಿ ನಡೆಸಿ ಕ್ರಿಕೆಟ್ ಬ್ಯಾಟ್ನಿಂದ ತಲೆಗೆ ಮಾರಣಾಂತಿಕವಾಗಿ ಹಲ್ಲೇ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡುವ ಯತ್ನ ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ
8 ನೇ ತರಗತಿಯ ವಿದ್ಯಾರ್ಥಿಯನ್ನು ಇದೇ ಗ್ರಾಮದ ಪೃಥ್ವಿರಾಜ್ ಎಂಬ ಯುವಕ ಪದೇ ಪದೇ ಚುಡಾಯಿಸುವುದನ್ನು ಪ್ರಶ್ನಿಸಿದ ತಂದೆ ಗಿರೀಶ್ ನನ್ನ ಆರೋಪಿ ಪೃಥ್ವಿರಾಜ್, ಅಣ್ಣ ತಿಮ್ಮೇಗೌಡ ಹಾಗೂ ತಂದೆ ಹನುಮಂತರಾಯ ಎಂಬುವರು ಏಕಾಏಕಿ ಕ್ರಿಕೆಟ್ ಬ್ಯಾಟ್ ನಿಂದ ತಲೆಗೆ ಹೊಡೆದು ನಂತರ ಚಾಕುವಿನಿಂದ ಭುಜ ಭಾಗ ಹಾಗೂ ತೊಡೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಲು ಪ್ರಯತ್ನ ಪಟ್ಟರು ಎಂದು ದೂರಿನಲ್ಲಿ ತಿಳಿಸಲಾಗಿ ಊರಿನ ಗ್ರಾಮಸ್ಥರು ನನ್ನ ಕಿರಿಚಾಟದಿಂದ ಸಾರ್ವಜನಿಕರು ಸೇರಿ ನನ್ನನ್ನು ಬಚಾವ್ ಮಾಡಲಾಗಿದ್ದು ತುಮಕೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇವೆ ಎಂದು ದೂರಿನಲ್ಲಿ ವಿವರಿಸಿದ್ದಾರೆ
ಇದೇ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಅನಿಲ್ ಹಾಗೂ ಪಿಎಸ್ಐ ತೀರ್ಥೇಶ್ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.