ಉಡುಪಿ | ಲೈಂಗಿಕ ಕಿರುಕುಳ ಆರೋಪ, ಜಿಲ್ಲಾ ಸರ್ಜನ್ ತಕ್ಷಣ ವರ್ಗಾವಣೆಗೆ ದ.ಸಂ.ಸ. ಅಂಬೇಡ್ಕರ್ ವಾದ ಆಗ್ರಹ

Date:

Advertisements

ಲೈಂಗಿಕ ಕಿರುಕುಳದ ಆರೋಪಗಳಲ್ಲಿ ಉಡುಪಿ ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್‌ರವರನ್ನು ತಪ್ಪಿತಸ್ಥರಾಗಿ ಸರ್ಕಾರದ ಆದೇಶ ಸಂಖ್ಯೆ: ಆಕುಕ117/MSA/2022 ದಿನಾಂಕ 03.02.2024ರಂದು ಐದು ಇನ್‌ಕ್ರಿಮೆಂಟ್ ಕಡಿತಗೊಳಿಸುವ ಶಿಕ್ಷೆಗೆ ಒಳಪಡಿಸಿ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಹುದ್ದೆಯಿಂದ ಹಿಂತೆಗೆದು ಬೆಂಗಳೂರಿನ ಕಮಿಷನರ್ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು.

ಸರ್ಜನ್‌ರವರ ವರ್ಗಾವಣೆಯನ್ನು ರದ್ದತಿಗಾಗಿ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿಯಲ್ಲಿ ಪ್ರಶ್ನಿಸಿದರೂ ನ್ಯಾಯಮಂಡಳಿ ಪ್ರಕರಣ ಸಂಖ್ಯೆ: 619/2025ರಂತೆ ಇದೇ ತಿಂಗಳಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿದೆ. ಯಾವುದೇ ಪದೋನ್ನತಿಗೆ ಅರ್ಹರಲ್ಲದ ಇವರು ವರ್ಗಾವಣೆಗೊಂಡಿದ್ದರೂ, ಅದೇ ಹುದ್ದೆಯಲ್ಲಿ ಮುಂದುವರಿಯುತ್ತಿರುವುದನ್ನು ಕರ್ನಾಟಕ ದಲಿತ ಸಂಘಟನಾ ಸಮಿತಿ ಅಂಬೇಡ್ಕರವಾದ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ್ ಮಾಸ್ತರ್ ತೀವ್ರವಾಗಿ ಖಂಡಿಸಿದ್ದಾರೆ.

ಸರ್ಜನ್ ಡಾ| ಅಶೋಕ್‌ರವರು ಉಡುಪಿಯ ಆಸ್ಪತ್ರೆಯಲ್ಲೂ ಈ ರೀತಿ ಮಹಿಳಾ ಪೀಡಿತರಾಗಿದ್ದು, ಈ ಬಗ್ಗೆ ಅವರ ಮೇಲೆ ಸಂಬಂಧಪಟ್ಟ ಇಲಾಖೆ, ಸಂಘಟನೆಗಳಿಗೂ ದೂರು ಬಂದಿರುತ್ತದೆ. ಜಿಲ್ಲಾ ಶಸ್ತ್ರಚಿಕಿತ್ಸಕ ಹುದ್ದೆಗೆ ಯಾವುದೇ ಅರ್ಹತೆ ಹೊಂದಿರದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ತಪ್ಪಿತಸ್ಥರೆಂದು ಸಾಬೀತಾಗಿ ವರ್ಗಾವಣೆಗೊಂಡಿರುವ ಹಾಗೂ ಕೆ.ಎ.ಟಿಯಲ್ಲಿ ಅವರ ಪ್ರಕರಣ ತಿರಸ್ಕೃತಗೊಂಡಿರುವುದರಿಂದ ಅವರನ್ನು ತಕ್ಷಣದಿಂದ ಜಿಲ್ಲಾ ಸರ್ಜನ್ ಹುದ್ದೆಯಿಂದ ತಕ್ಷಣ ವರ್ಗಾವಣೆಗೊಳಿಸಬೇಕು. ಈ ಬಗ್ಗೆ ಸರ್ಕಾರ ವಿಳಂಬ ತೋರಿದಲ್ಲಿ ಜಿಲ್ಲಾಸ್ಪತ್ರೆಯ ಎದುರು ಬೃಹತ್ ಪ್ರತಿಭಟನೆಯ ಮೂಲಕ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ್ ಮಾಸ್ತರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X