ಗ್ರಾಮೀಣ ಗ್ರಂಥಾಲಯಗಳು ‘ಅರಿವು ಕೇಂದ್ರ’ಗಳಾಗಿ ಮೇಲ್ದರ್ಜೆಗೆ : ಸಚಿವ ಪ್ರಿಯಾಂಕ್ ಖರ್ಗೆ

Date:

Advertisements
  • ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ವಾರಾಂತ್ಯದಲ್ಲಿಯೂ ತೆರೆಯಲು ಅನುವು
  • ಐಎಎಸ್, ಕೆಎಎಸ್ ಸೇರಿದಂತೆ ಇತರೆ ಪರೀಕ್ಷೆಗಳಿಗೆ ಪೂರಕವಾಗುವ ವ್ಯವಸ್ಥೆ

ಪ್ರಬುದ್ಧ ಸಮಾಜ ನಿರ್ಮಾಣದ ಗುರಿಯೊಂದಿಗೆ ಗ್ರಾಮೀಣ ಗ್ರಂಥಾಲಯಗಳನ್ನು ಆಧುನೀಕರಣಗೊಳಿಸಿ ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಸಾರ್ವಜನಿಕರಲ್ಲಿ ವಿದ್ಯೆ, ಜ್ಞಾನ, ಓದಿನ ಬಗೆಗೆ ಅಭಿರುಚಿ ಬೆಳೆಸಲು ಮುಕ್ತ ಸಾರ್ವಜನಿಕ ವ್ಯವಸ್ಥೆಯಾದ ಗ್ರಾಮ ಪಂಚಾಯತಿ ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳಾಗಿ ಸಮಾಜದ ಜ್ಞಾನಾರ್ಜನೆಗೆ ಅರ್ಥಪೂರ್ಣ ಸಾಧನಗಳಾಗಿ ಕಾರ್ಯ ನಿರ್ವಹಿಸುತ್ತಿದೆ. ಇವುಗಳನ್ನು ಆಧುನೀಕರಣಗೊಳಿಸಿ ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದಿದ್ದಾರೆ.

ಬಸವಣ್ಣನವರ ‘ಅರಿವೇ ಗುರು’ ತತ್ವ ನಮ್ಮ ಸಮಾಜದ ಪ್ರತಿಯೊಬ್ಬರಲ್ಲೂ ಮಾರ್ದನಿಸಬೇಕು. ಅರಿವಿನೆಡಗಿನ ಸಮಾಜದ ಪ್ರತಿಯೊಬ್ಬರ ಪ್ರಯಾಣದ ಸಾಥಿಯಾಗಿ ನಮ್ಮ ಇಲಾಖೆ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಆ ಮೂಲಕ ಡಿಜಿಟಲ್ ಕಲಿಕಾ ಸಾಮಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯಗಳನ್ನು ಒದಗಿಸಲು ವಿಶೇಷ ಕಾರ್ಯಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ ಎಂದು ಸಚಿವ ಖರ್ಗೆ ತಿಳಿಸಿದ್ದಾರೆ.

Advertisements

ಸಾರ್ವಜನಿಕರಿಗೆ ಸಹಾಯವಾಗುವಂತೆ ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ವಾರಾಂತ್ಯದಲ್ಲಿಯೂ ತೆರೆಯಲು ಅನುವು ಮಾಡಿಕೊಡಲಾಗುವುದು. ಇದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಪ್ರಬುದ್ಧ ಸಮಾಜ ನಿರ್ಮಾಣದತ್ತ ಇರಿಸಿರುವ ಪ್ರಮುಖ ಹೆಜ್ಜೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಇನ್ನೊಮ್ಮೆ ಹೀಗಾದ್ರೆ, ವಾರ್ಡನ್‌ಗೆ ಚೆನ್ನಾಗಿ ಬಾರಿಸಿ : ಚಿತ್ರದುರ್ಗ ಶಾಸಕರ ಪ್ರಚೋದನೆ; ವಿಡಿಯೋ ವೈರಲ್

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಈ ಕಾರ್ಯದ ಜೊತೆಯಾಗಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಮಂಡಳಿ (KRIDL) ತನ್ನ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ (CSR) ಅನುದಾನದಡಿ ಕಲಬುರಗಿ ಜಿಲ್ಲೆಯ ಎಲ್ಲಾ 261 ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವಂತಹ ತಲಾ 41 ಕಲಿಕಾ ಪುಸ್ತಕಗಳನ್ನು ಒದಗಿಸಲು ಮುಂದೆ ಬಂದಿದೆ. ಇದಕ್ಕಾಗಿ 26 ಲಕ್ಷ ರೂ.ಗಳನ್ನು ಕಲಬುರಗಿ ಜಿಲ್ಲಾ ಪಂಚಾಯತಿಗೆ ನೀಡುತ್ತಿದೆ. ಅಧ್ಯಯನ ಪುಸ್ತಕಗಳು ಐಎಎಸ್, ಕೆಎಎಸ್ ಸೇರಿದಂತೆ ಪೊಲೀಸ್ ಕಾನ್ಸ್‌ಟೆಬಲ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಪ್ರಥಮ ಹಾಗೂ ದ್ವಿತೀಯ ದರ್ಜೆ ಸಹಾಯಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರೂಪ್ ಸಿ, ಎಸ್ ಎಸ್ ಸಿ, ಐಬಿಪಿಎಸ್, ಆರ್ ಆರ್ ಬಿ ಪರೀಕ್ಷೆಗಳಿಗೆ ಪೂರಕವಾಗಲಿವೆ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X