ತುಮಕೂರು | ಮಕ್ಕಳ ದೌರ್ಜನ್ಯ, ಅಪಹರಣ ತಡೆಗಟ್ಟಲು ಸಾರ್ವಜನಿಕರು ಸಹಕರಿಸಿ : ತ್ರಿವಿಕ್ರಮ್

Date:

Advertisements

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಮಕ್ಕಳ ಅಪಹರಣ, ಕಳ್ಳ ಸಾಗಾಣಿಕೆಗಳನ್ನು ತಡೆಗಟ್ಟುವಿಕೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ರೈಲ್ವೆ ವಲಯ ಪೊಲೀಸ್ ಠಾಣೆಯ ಎಎಸ್ಪಿಎಪ್ ತ್ರಿವಿಕ್ರಮ್ ತಿಳಿಸಿದರು.

ತುಮಕೂರು ನಗರದ ರೈಲ್ವೆ ನಿಲ್ದಾಣದಲ್ಲಿ ಜಸ್ಟ್ ರೈಟ್ಸ್ ಮತ್ತು ರೀಡ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಮಾನವ ಮತ್ತು ಮಕ್ಕಳ ಮಾರಾಟ ಹಾಗೂ ದೌರ್ಜನ್ಯ ತಡೆಗಟ್ಟುವಿಕೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಬೇಕು. ಮಕ್ಕಳನ್ನು ಅಪಹರಿಸುವ ಮತ್ತು ಅವರ ಮೇಲೆ ದೌರ್ಜನ್ಯವೆಸೆಗುವ ದೊಡ್ಡ ಜಾಲವೇ ಇದ್ದು, ಸಾರ್ವಜನಿಕರು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಘಟನೆಗಳು ಕಂಡು ಬಂದರೆ ಕೂಡಲೇ ಹತ್ತಿರದ ಪೊಲೀಸ್ ಠಾಣೆ, ಮಕ್ಕಳ ಸಹಾಯವಾಣಿ, ಸಂಘ ಸಂಸ್ಥೆಗಳು ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸುವ ಮೂಲಕ ಮಕ್ಕಳನ್ನು ರಕ್ಷಿಸಬೇಕು ಎಂದು ಅವರು ತಿಳಿಸಿದರು.

ನಂತರ ಮಾತನಾಡಿದ ರೀಡ್ ಸಂಸ್ಥೆಯ ಜಿಲ್ಲಾ ಸಂಯೋಜಕ ಮಂಜುನಾಥ್ ಎನ್. ಅವರು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಅಪಹರಣ ಮತ್ತು ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರೀಡ್ ಸಂಸ್ಥೆ ಸಹಯೋಗದಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದ್ದು, ಎಲ್ಲಿಯಾದರೂ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಕಂಡುಬಂದರೆ ಮಕ್ಕಳ ಸಹಾಯವಾಣಿಯನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಿದರು.

Advertisements

ಇದೇ ಸಂದರ್ಭದಲ್ಲಿ ರೈಲ್ವೆ ವಲಯ ಪೊಲೀಸ್ ಠಾಣೆಯ ಎಎಸ್ಪಿಎಪ್ ನಿರ್ಮಲ,ಬಪ್ಪನ್ ಕುಮಾರ್ ನಾಯಕ್, ರೀಡ್ ಸಂಸ್ಥೆಯ ಸಮುದಾಯ ಸಂಘಟಕರಾದ  ಉಮೇರಾಖಾನ್, ರಂಗದಾಮಯ್ಯ ಸೇರಿದಂತೆ ರೈಲ್ವೇ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X