ಬೀದರ್‌ | ನಾಳೆ ಬಸವಕಲ್ಯಾಣದಲ್ಲಿ ʼಶರಣ ತತ್ವ ಶಿಬಿರʼ

Date:

Advertisements

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನಾಳೆ (ಜುಲೈ 27) ರಂದು ಒಂದು ದಿನದ ಶರಣ ತತ್ವ ಶಿಬಿರ ನಡೆಯಲಿದೆ.

ಅನುಭವ ಮಂಟಪ ಬಸವಕಲ್ಯಾಣ ಹಾಗೂ ಶರಣ ಸಂಸ್ಕೃತಿ ವಿಚಾರ ವೇದಿಕೆ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದ್ದು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸಲಿದ್ದಾರೆ. ಆಳಂದ ತಾಲೂಕಿನ ಉಸ್ತುರಿ ವಿರಕ್ತ ಮಠದ ಕೋರಣೇಶ್ವರ ಮಹಾಸ್ವಾಮೀಜಿ ನೇತ್ರತ್ವ ವಹಿಸಲಿದ್ದಾರೆ.

ವಿಜಯಪುರದ ಶರಣತತ್ವ ಚಿಂತಕ ಡಾ.ಜೆ.ಎಸ್.ಪಾಟೀಲ್‌ ಅವರು ʼಲಿಂಗಾಯತ ಧರ್ಮದ ಉದಯ ಮತ್ತು ಪ್ರಸ್ತುತ ಸ್ಥಿತಿಗತಿʼ ವಿಷಯ ಮಂಡನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಮುಖರಾದ ಶ್ರೀಕಾಂತ ಸ್ವಾಮಿ, ಬಸವರಾಜ ಕೊರಕೆ, ಬಸವರಾಜ ತೊಂಡಾರೆ, ಸಿದ್ರಾಮ ಕಾಮಣ್ಣಾ, ಸಂಜುಕುಮಾರ ಸುಗುರೆ, ಪ್ರವೀಣ ಕಾಡಾದಿ, ಶಿವಶರಣಪ್ಪ ಸಂತಾಜಿ, ಸುಭಾಷ ಕುದುರೆ, ಹಣಮಂತ ಧನಶೆಟ್ಟಿ, ಕಾಶಿನಾಥ ಹೋಳಕಡೆ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

Advertisements

ಬಸವಾದಿ ಶರಣರ ನೈಜಿ ಇತಿಹಾಸ ಕುರಿತು ತಿಳಿದುಕೊಳ್ಳಲು, ಲಿಂಗಾಯತ ಧರ್ಮದ ಪ್ರಸ್ತುತ ಸ್ಥಿತಿಗತಿ ಕುರಿತು ಸಂವಾದ ನಡೆಸಲು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಯೋಜಕರಾದ ರವೀಂದ್ರ ಕೋಳಕೂರ, ಆಕಾಶ ಖಂಡಾಳೆ ಹಾಗೂ ಶಿವಕುಮಾರ ಶೆಟಗಾರ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳಕ್ಕೆ 29 ಅಂಶಗಳ ಕಾರ್ಯಕ್ರಮ ಕಡ್ಡಾಯ : ಡಿಸಿ ಶಿಲ್ಪಾ ಶರ್ಮಾ

WhatsApp Image 2025 07 26 at 1.29.57 PM
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X