ಉಡುಪಿಯ ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಹಲಸು ಮತ್ತು ಹಣ್ಣು ಮೇಳವನ್ನು ಇಂದು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್ನಲ್ಲಿ ಕೆಮ್ಮಣ್ಣು ಚರ್ಚ್ ನ ಉಪಾಧ್ಯಕ್ಷರಾದ ಥಾಮಸ್ ಡಿಸೋಜಾ ಹಲಸು ಮೇಳವನ್ನು ಉದ್ಘಾಟಿಸಿದರು.
ಇಂದು ಮತ್ತು ನಾಳೆ ನಡೆಯಲಿರುವ ಈ ಹಲಸು ಮೇಳದಲ್ಲಿ ಮುಖ್ಯವಾಗಿ ಆಂಧ್ರದಿಂದ ತರಿಸಲಾದ ಏಕದಶಿ, ರುದ್ರಾಕ್ಷಿ, ಕೇಸರ್, ಚಂದ್ರ ಹಲಸು ವಿಶೇಷವಾಗಿದೆ. ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಮತ್ತು ಹಲಸಿನ ಹಾಗೂ ಇತರ ಉತ್ಪನ್ನಗಳ ಖಾದ್ಯಗಳ ನೂರಾರು ಮಳಿಗೆಗಳಿದ್ದು, ಬಟರ್ಫ್ರೂಟ್, ನೇರಳೆ ಸೇರಿದಂತೆ ವಿವಿಧ ಹಣ್ಣುಗಳು ಮೇಳದಲ್ಲಿ ಎಲ್ಲರನ್ನೂ ಆಕರ್ಷಿಸುತ್ತಿದೆ.

ಹಲಸು ಮೇಳದ ಸಂಯೊಜಕರಾದ ಮಹಮ್ಮದ್ ಮುಕ್ತಾರ್ ಹುಸೈನ್ ಮಾತನಾಡಿ, ಎರಡು ದಿನ ಹಲಸು ಮೇಳ ನಡೆಯಲಿದ್ದು ಈಗಾಗಲೇ ದೂರ ದೂರದಿಂದ ಜನರು ಮೇಳಕ್ಕೆ ಆಗಮಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ನೂರಾರು ಜನರು ಹಲಸು ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಾಳೆ ಸಂಜೆ ಈ ಮೇಳದ ಸಮಾರೋಪ ನಡೆಯಲಿದ್ದು, ಹಿರಿಯ ಉದ್ಯಮಿ ಹಾಗೂ ಕೃಷಿಕರನ್ನು ಸನ್ಮಾನಿಸಲಾಗುವುದು. ಮೇಳದಲ್ಲಿ ಏಳು ವರ್ಷದೊಳಗಿನ ಮಕ್ಕಳು ಹಲಸು ತಿನ್ನುವ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯೆ ಜ್ಯೋತಿ ಬರೆಟ್ಟೋ ಕೆಮ್ಮಣ್ಣು ಚರ್ಚ್ ಪಾಲನ ಮಂಡಳಿಯ ಸದಸ್ಯ ಸುಝೀ ಫರ್ನಾಡಿಸ್ ಉಪಸ್ಥಿತರಿದ್ದರು.



