ಗುಬ್ಬಿ | ಜುಲೈ 27 ರಂದು ಶ್ರೀ ಭೂತರಾಯ ಸ್ವಾಮಿ ದೇವಾಲಯ ಉದ್ಘಾಟನೆ

Date:

Advertisements

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ನೆಟ್ಟೆಕೆರೆ ಮಜರೆ ಕರಿಯಣ್ಣನಪಾಳ್ಯ ಗ್ರಾಮದಲ್ಲಿ ಜುಲೈ 27 ರಂದು ಶ್ರೀ ಭೂತರಾಯಸ್ವಾಮಿ ನೂತನ ದೇವಾಲಯ ಉದ್ಘಾಟನೆ ನಡೆಯಲಿದೆ ಎಂದು ದೇವಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಎಲ್.ಕರೇಗೌಡ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಆದಿ ಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಆರಂಭಿಸಿದ ದೇವಾಲಯ ನಿರ್ಮಾಣ ಕೆಲಸ ಸುಸೂತ್ರವಾಗಿ ಸಿದ್ಧವಾಗಿದೆ. ಜುಲೈ 27 ಬೆಳಿಗ್ಗೆ ಎಲ್ಲಾ ವಿಧಿವಿಧಾನದಲ್ಲಿ ಲೋಕಾರ್ಪಣೆ ಗೊಳ್ಳಲಿದೆ ಎಂದರು.

ಬೆಳಿಗ್ಗೆ ಗಣಪತಿ ಪೂಜೆ ಮೂಲಕ ಆರಂಭವಾಗಿ ಬೆಳಿಗ್ಗೆ 9 ಗಂಟೆಗೆ ಭೂತರಾಯಸ್ವಾಮಿ ಪ್ರತಿಷ್ಠಾಪನೆ ನಂತರ ಪ್ರತಿಷ್ಟಾಂಗ ಪುಣ್ಯಾಹ, ಕಲಾವೃದ್ಧಿ ಹೋಮ, ಪೂರ್ಣಾಹುತಿ, ಕಲಾ ಕಳಸಾಭಿಷೇಕ ನಡೆದು ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದರು.

Advertisements

ಚಿಕ್ಕಬಳ್ಳಾಪುರ ಶಾಖ ಮಠದ ಶ್ರೀ ಮಂಗಳನಾಥ ಸ್ವಾಮೀಜಿ, ತುಮಕೂರು ಹಿರೇಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಅಧ್ಯಕ್ಷತೆ ಶಾಸಕ ಎಂ.ಟಿ.ಕೃಷ್ಣಪ್ಪ ವಹಿಸಲಿದ್ದು, ದೇವಾಲಯ ಉದ್ಘಾಟನೆ ಶಾಸಕ ಎಸ್.ಆರ್.ಶ್ರೀನಿವಾಸ್ ನಡೆಸಲಿದ್ದಾರೆ. ಕಾರ್ಯಕ್ರಮ ಉದ್ಘಾಟನೆ ಮಾಜಿ ಶಾಸಕ ಮಸಾಲಾ ಜಯರಾಮ್ ಮಾಡಲಿದ್ದಾರೆ. ಈ ಜೊತೆಗೆ ಹೋಬಳಿಯ ಎಲ್ಲಾ ಪಕ್ಷದ ಮುಖಂಡರು, ಚುನಾಯಿತ ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X