ವಿದೇಶದಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ: ಮಂಗಳೂರಿನಲ್ಲಿ ಯೂಟ್ಯೂಬರ್‌ ಶಾಲು ಬಂಧನ

Date:

Advertisements

ವಿದೇಶದಲ್ಲಿ ಅಪ್ರಾಪ್ತಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿ ಯೂಟ್ಯೂಬರ್ ಶಾಲು ಕಿಂಗ್ ಯಾನೆ ಮುಹಮ್ಮದ್ ಸಾಲಿಯನ್ನು ಕೇರಳದ ಪೊಲೀಸರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಮದುವೆಯ ಭರವಸೆ ನೀಡಿ, ವಿದೇಶದಲ್ಲಿ ಅಪ್ರಾಪ್ತಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಎನ್ನಲಾಗಿದ್ದು, ಪೊಲೀಸರು ಆರೋಪಿ ಶಾಲು ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಕೇರಳದ ಕೊಯಿಲಾಂಡಿ ಪೊಲೀಸರು ಆತನನ್ನು ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಸಂದರ್ಭದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಕೊಯಿಲಾಂಡಿಯ ಅಪ್ರಾಪ್ತ ನೀಡಿದ ದೂರಿನ ಆಧಾರದ ಮೇಲೆ ಪೋಕೋ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ

Advertisements

2016 ರಲ್ಲಿ ವಿವಾಹವಾದ ಈತನಿಗೆ ಮೂವರು ಮಕ್ಕಳಿದ್ದಾರೆ. ಅಪ್ರಾಪ್ತ ಮತ್ತು ಆರೋಪಿ ಸಾಮಾಜಿಕ ಜಾಲತಾಣಗಳ ಮೂಲಕ ಆಪ್ತರಾಗಿದ್ದರು. ಬಳಿಕ, ಮದುವೆಯಾಗುವುದಾಗಿ ನಂಬಿಸಿ ವಿದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಮುಹಮ್ಮದ್ ಸಾಲಿ ಶಾಲು ಕಿಂಗ್ಸ್ ಮೀಡಿಯಾ ಮತ್ತು ಶಾಲು ಕಿಂಗ್ಸ್ ಬ್ಲಾಗ್ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ಗಳನ್ನು ನಡೆಸುತ್ತಿದ್ದ.

ಇದನ್ನೂ ಓದಿ: ದ.ಕ. | ಪೆರಾಜೆ, ಕಡಬ ಭಾಗದಲ್ಲಿ ಕಾಡಾನೆಗಳ ಹಾವಳಿ; ರೈತರಲ್ಲಿ ಆತಂಕ

ಕಾರ್ಯಾಚರಣೆ ತಂಡದಲ್ಲಿ ಕೊಯಿಲಾಂಡಿ ಸ್ಟೇಷನ್ ಹೌಸ್ ಆಫೀಸರ್ ಶ್ರೀಲಾಲ್ ಚಂದ್ರಶೇಖರನ್, ಎಸ್‌ಐ ಆರ್‌ಸಿ ಬಿಜು, ಸಂತೋಷ್ ಲಾಲ್, ಕೆಪಿ ಗಿರೀಶ್, ಎಎಸ್‌ಐ, ವಿಜುವಾನಿಯಂಕುಲಂ, ಶ್ರೀಲತಾ ಸೇರಿದಂತೆ ಮತ್ತಿತರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X