13 ವರ್ಷಗಳ ನಂತರ ಉದ್ಧವ್ ಠಾಕ್ರೆ ನಿವಾಸ ‘ಮಾತೋಶ್ರೀ’ಗೆ ರಾಜ್ ಭೇಟಿ

Date:

Advertisements

ಹಿಂದಿ ಹೇರಿಕೆ ವಿರುದ್ಧ, ಮರಾಠಿ ಭಾಷೆ ಉಳಿವು ಅಭಿಯಾನದ ಮೂಲಕ ಇತ್ತೀಚೆಗೆ ಠಾಕ್ರೆ ಸೋದರಸಂಬಂಧಿಗಳು ಒಂದಾಗಿದ್ದಾರೆ. ಇದೀಗ ಸುಮಾರು 13 ವರ್ಷಗಳ ಬಳಿಕ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಮುಂಬೈನಲ್ಲಿರುವ ಠಾಕ್ರೆಗಳ ಅಂತಸ್ತಿನ ನಿವಾಸವಾದ ಮಾತೋಶ್ರೀಗೆ ಆಗಮಿಸಿದ್ದಾರೆ. ತಮ್ಮ ಸೋದರಸಂಬಂಧಿ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಜನ್ಮದಿನ ಆಚರಣೆಗೆ ರಾಜ್ ಜೊತೆಯಾಗಿದ್ದಾರೆ.

ರಾಜ್ ಕೊನೆಯ ಬಾರಿಗೆ 2012ರಲ್ಲಿ ಬಾಳಾಸಾಹೇಬ್ ಠಾಕ್ರೆ ಅವರ ಮರಣದ ಸಮಯದಲ್ಲಿ ಉದ್ಧವ್ ನಿವಾಸವನ್ನು ಪ್ರವೇಶಿಸಿದ್ದರು. ಅದಾದ 13 ವರ್ಷಗಳ ನಂತರ ಈಗ ಮತ್ತೆ ಭೇಟಿ ನೀಡಿದ್ದಾರೆ. ರಾಜ್ ಜೊತೆಗೆ ಎಂಎನ್‌ಎಸ್ ನಾಯಕರಾದ ಬಾಲಾ ನಂದಗಾಂವ್ಕರ್ ಮತ್ತು ನಿತಿನ್ ಸರ್ದೇಸಾಯಿ ಇದ್ದರು.

ಇದನ್ನು ಓದಿದ್ದೀರಾ? ರಾಜಕೀಯ ಮೈತ್ರಿ ಬಗ್ಗೆ ರಾಜ್‌ ಠಾಕ್ರೆ ಜೊತೆ ಉದ್ಧವ್ ಮಾತುಕತೆ

Advertisements

ಇಬ್ಬರು ಸೋದರಸಂಬಂಧಿಗಳಾದ ರಾಜ್ ಮತ್ತು ಉದ್ಧವ್, ಮಾತೋಶ್ರೀ ಒಳಗೆ ಬಾಳಾಸಾಹೇಬ್ ಅವರ ಭಾವಚಿತ್ರದ ಬಳಿಕ ನಿಂತು ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಹಾಗೆಯೇ ಇನ್ನೊಂದು ಚಿತ್ರದಲ್ಲಿ ಉದ್ಧವ್‌ಗೆ ರಾಜ್ ಹೂಗುಚ್ಛ ನೀಡುವುದು ಕಂಡುಬಂದಿದೆ. ಸದ್ಯ ಎರಡೂ ಚಿತ್ರಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಉದ್ಧವ್ ತಮ್ಮ ಕುಟುಂಬಸ್ಥರೊಂದಿಗೆ ಕೇಕ್ ಕತ್ತರಿಸುತ್ತಿರುವುದನ್ನು ಮತ್ತು ಶಿವಸೇನೆ ನಾಯಕರು ಹುಟ್ಟುಹಬ್ಬದ ಶುಭಾಶಯ ಕೋರುವ ವಿಡಿಯೋ ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಆದರೆ ಈ ವಿಡಿಯೋದಲ್ಲಿ ರಾಜ್ ಕಾಣಿಸಿಕೊಂಡಿಲ್ಲ.

ಈ ಹಿಂದೆ ಮರಾಠಿ ವಿಜಯ ಕಾರ್ಯಕ್ರಮದಲ್ಲಿ ಠಾಕ್ರೆ ಸೋದರಸಂಬಂಧಿಗಳು ಒಂದೇ ವೇದಿಕೆಯನ್ನು ಸುಮಾರು ಎರಡು ದಶಕಗಳ ನಂತರ ಹಂಚಿಕೊಂಡಿದ್ದರು. ಈ ವೇಳೆ ಮಾತನಾಡಿದ್ದ ಉದ್ಧವ್ ಮುಂಬರುವ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುಳಿವು ನೀಡಿದ್ದರು.

ರಾಜ್ ಉದ್ಧವ್1

“ನಾವು ಜೊತೆಯಾಗಿರಲು ಜೊತೆಗೆ ಬಂದಿದ್ದೇವೆ. ಮುಂಬೈ ನಾಗರಿಕ ಸಂಸ್ಥೆ ಮತ್ತು ಮಹಾರಾಷ್ಟ್ರದಲ್ಲಿ ನಾವು ಒಟ್ಟಾಗಿ ಅಧಿಕಾರವನ್ನು ಪಡೆಯುತ್ತೇವೆ” ಎಂದು ಮಾಜಿ ಸಿಎಂ ಉದ್ದವ್ ಹೇಳಿದ್ದರು. ಇನ್ನೊಂದೆಡೆ ಶಿವಸೇನೆ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆಗೆ ಆಗದ ಕೆಲಸವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾಡಿದ್ದಾರೆ ಎಂದು ರಾಜ್ ಠಾಕ್ರೆ ವ್ಯಂಗ್ಯವಾಡಿದ್ದರು.

2005ರಲ್ಲಿ ಮಾಲ್ವನ್ ವಿಧಾನಸಭಾ ಉಪಚುನಾವಣೆ ಪ್ರಚಾರದ ಸಮಯದಲ್ಲಿ ರಾಜ್ ಮತ್ತು ಉದ್ಧವ್ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಬಳಿಕ ಆಂತರಿಕ ಭಿನ್ನಾಭಿಪ್ರಾಯಗಳ ಕಾರಣ ರಾಜ್ ಠಾಕ್ರೆ ಶಿವಸೇನೆಯನ್ನು ತೊರೆದರು. 2005ರ ನವೆಂಬರ್‌ನ ಶಿವಾಜಿ ಪಾರ್ಕ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ ತಮ್ಮ ಚಿಕ್ಕಪ್ಪ ಸ್ಥಾಪಿಸಿದ ಶಿವಸೇನೆಗೆ ರಾಜೀನಾಮೆ ನೀಡುವುದಾಗಿ ಭಾವನಾತ್ಮಕವಾಗಿ ಹೇಳಿದ್ದರು. “ನಾನು ಕೇಳಿದ್ದು ಗೌರವ ಮಾತ್ರ. ನನಗೆ ಸಿಕ್ಕಿದ್ದು ಅವಮಾನ ಮಾತ್ರ” ಎಂದು ಠಾಕ್ರೆ ಹೇಳಿದ್ದರು. ಇದೀಗ ಮತ್ತೆ ರಾಜ್, ಉದ್ಧವ್ ಜೊತೆಯಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X