ರಾಮನಗರ | ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರ: ಸೌಲಭ್ಯ ಪಡೆಯುವ ಅರಿವಿನ ಜಾಗೃತಿ

Date:

Advertisements

ಹಲವಾರು ಕಾರ್ಮಿಕರು ಹದಿನೈದು, ಇಪ್ಪತ್ತು ವರ್ಷಗಳಿಂದ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಕಾರ್ಮಿಕರ ಕಾರ್ಡ್‌ ಮಾಡಿಸಿಲ್ಲ. ಅಲ್ಲದೆ ಯಾವುದೇ ರೀತಿಯ ಸೌಲಭ್ಯವನ್ನೂ ಪಡೆದುಕೊಂಡಿಲ್ಲ. ಸೌಲಭ್ಯಗಳ ಕುರಿತು ಮಾಹಿತಿ ಇಲ್ಲದೇ ಇರುವುದೇ ಇದಕ್ಕೆ ಕಾರಣ ಎಂದು ಕಟ್ಟಡ ಕಾರ್ಮಿಕರ ಸಂಘದ ಸಹ ಕಾರ್ಯದರ್ಶಿ ಶಿವಕುಮಾರ್‌ ತಿಳಿಸಿದರು.

ರಾಮನಗರದ ಸ್ಪೂರ್ತಿನಗರದಲ್ಲಿರುವ ಸ್ಪಂದನ ಸಂಸ್ಥೆಯಲ್ಲಿ ಭಾನುವಾರ ನಡೆದ ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರದಲ್ಲಿ ಮಾತನಾಡಿ, ಕಾರ್ಮಿಕರಿಗೆ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.

“ರಾಮನಗರದ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಕಾರ್ಮಿಕರ ಕಾರ್ಡ್‌ ಮಾಡಿಸಬೇಕೆಂದಿದ್ದರೂ ಕೂಡ ಅವರಿಗೆ ಉಚಿತವಾಗಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂಬುದು ಸ್ಪಂದನ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಈ ಕಾರಣದಿಂದಾಗಿ ಕಟ್ಟಡ ಕಾರ್ಮಿಕರಿಗೆ ಅರಿವು ಮೂಡಿಸುವ ಸಲುವಾಗಿ ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರವನ್ನು ಏರ್ಪಡಿಸಲಾಗಿದ್ದು, ಸರ್ಕಾರದಿಂದ ಕಾರ್ಮಿಕರಿಗೆ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾದ ವಿಧಾನ, ಬೇಕಾಗಿರುವ ದಾಖಲೆಗಳ ಕುರಿತು ಕಾರ್ಮಿಕರು ತಿಳಿದುಕೊಳ್ಳಬೇಕು” ಎಂದರು.

Advertisements
ಕಟ್ಟಡ ಕಾರ್ಮಿಕರ ಹಕ್ಕು

“ಕಾರ್ಮಿಕರಿಗೆ ಹಲವಾರು ಯೋಜನೆಗಳು ಇದ್ದು, ಇದನ್ನು ಕಾರ್ಮಿಕರಿಗಿಂತ ಹೆಚ್ಚಾಗಿ ಇತರರು ಬಳಸುತ್ತಿದ್ದಾರೆ. ಆದ್ದರಿಂದ ಕಾರ್ಮಿಕರು ಒಟ್ಟುಗೂಡಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಬೇಕು ಹಾಗೂ ತಮಗಿರುವ ಹಕ್ಕುಗಳ ಕುರಿತು ಅರಿತುಕೊಳ್ಳಬೇಕು. ಜತೆಗೆ ಕಟ್ಟಡ ನಿರ್ಮಾಣ ಕಾರ್ಮಿಕರಲ್ಲಿ ʼಸಮಾನ ಕೆಲಸಕ್ಕೆ ಸಮಾನ ವೇತನʼ ಎಂಬ ಕಲ್ಪನೆಯೇ ಇಲ್ಲ, ಮಹಿಳೆ ಮತ್ತು ಪುರುಷರಿಗೆ ಸಮಾನ ವೇತನ ದೊರೆಯುವಂತಾಗಬೇಕು. ಇದಕ್ಕಾಗಿ ನಾವೆಲ್ಲರೂ ಜೊತೆಯಾಗಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅರಸೀಕೆರೆ | ದೇಶದಲ್ಲೇ ರಾಜ್ಯದ ತಲಾ ಆದಾಯ ಹೆಚ್ಚಳಕ್ಕೆ ಪಂಚ ಗ್ಯಾರೆಂಟಿಗಳೇ ಕಾರಣ: ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಸ್ಪಂದನ ಸಂಸ್ಥೆಯ ಮಾಲಿನಿ ಅಂತರ್ಜನಂ, ಸುಪ್ರಿತಾ, ಕಾವ್ಯ, ಯಶೋಧ, ಜಯಶ್ರೀ, ಮಹಾಲಕ್ಷ್ಮಿ, ಮೇಘನಾ, ರಂಗಕರ್ಮಿ ಶ್ರೀನಿವಾಸ್‌ ಹಾಗೂ ರಾಮನಗರದ ವಿವಿಧ ಭಾಗಗಳಿಂದ ಬಂದಿದ್ದ ಐವತ್ತಕ್ಕೂ ಹೆಚ್ಚು ಕಟ್ಟಡ ನಿರ್ಮಾಣ ಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X