ಮೈಸೂರು | ದಲಿತ ಯುವ ಚಿಂತಕ ಸಿ ನರೇಂದ್ರ ನಾಗಾವಾಲರಿಗೆ ದ.ಸಾ.ಪ ರಾಜ್ಯ ಗೌರವ ಪ್ರಶಸ್ತಿ

Date:

Advertisements

ದಲಿತ ಸಾಹಿತ್ಯ ಪರಿಷತ್‌ ರಾಜ್ಯ ಘಟಕವು ನಡೆಸಿದ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳದಲ್ಲಿ ಸಮಾಜ ಸೇವಾ ಕ್ಷೇತ್ರಕ್ಕೆ ಕೊಡಮಾಡುವ ರಾಜ್ಯ ಗೌರವ ಪ್ರಶಸ್ತಿಗೆ ಸಿ ನರೇಂದ್ರ ನಾಗವಾಲರವರ ಹೆಸರನ್ನು ರಾಜ್ಯ ಸಮಿತಿಗೆ ಶಿಫಾರಸು ಮಾಡಿ, ರಾಜ್ಯ ಗೌರವ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿ ಗೌರವಿಸಿರುವುದು ರಾಜ್ಯ ಹಾಗೂ ಜಿಲ್ಲೆಯ ಹೆಮ್ಮೆ ಎಂದು ದಲಿತ ಸಾಹಿತ್ಯ ಪರಿಷತ್‌ ಜಿಲ್ಲಾ ಸಂಯೋಜಕ ಡಾ. ಚಂದ್ರಗುಪ್ತ ಅಭಿಪ್ರಾಯಪಟ್ಟರು.

ದಲಿತ ಸಾಹಿತ್ಯ ಪರಿಷತ್‌ ಮೈಸೂರು ಜಿಲ್ಲಾ ಘಟಕದ ಕಾರ್ಯಕರ್ತರು ಹಮ್ಮಿಕೊಂಡಿದ್ದ ರಾಜ್ಯ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ವಿಜಯಪುರದ ರಂಗಮಂದಿರದಲ್ಲಿ ಜುಲೈ 29 ಮತ್ತು 30 ರಂದು ಎರಡು ದಿನಗಳ ಕಾಲ ದಲಿತ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಖಿಲ ಭಾರತ 10ನೇ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯ ಗೌರವ ಪ್ರಶಸ್ತಿ ಪುರಸ್ಕೃತರಾಗಿ ಸಿ.ನರೇಂದ್ರ ನಾಗವಾಲ ಅವರನ್ನು ಆಯ್ಕೆ ಮಾಡಲಾಗಿತ್ತು” ಎಂದು ತಿಳಿಸಿದರು.

Advertisements

“ಬುದ್ಧ, ಬಸವ, ಅಂಬೇಡ್ಕರ್‌ ಅವರ ಚಿಂತನೆ ಮತ್ತು ಹೋರಾಟವನ್ನು ಮೈಗೂಡಿಸಿಕೊಂಡಿರುವ ಎಐಸಿಸಿ ಅಧ್ಯಕ್ಷ ಡಾ. ಎಂ ಮಲ್ಲಿಕಾರ್ಜುನ ಖರ್ಗೆಯವರ ಮಾನಸಪುತ್ರರೆಂದೇ ಹೆಸರುವಾಸಿಯಾಗಿರುವ ಇವರು ಪ್ರಸ್ತುತದಲ್ಲಿ ಡಾ. ಎಂ ಮಲ್ಲಿಕಾರ್ಜುನ ಖರ್ಗೆ ಅಭಿಮಾನಿಗಳ ಬಳಗದ ರಾಜ್ಯಾಧ್ಯಕ್ಷರಾಗಿ, ಕೆಪಿಸಿಸಿ ಕಾರ್ಯದರ್ಶಿಗಳಾಗಿ ಮತ್ತು ನಾಗವಾಲ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾಗಿದ್ದಾರೆ” ಎಂದರು.

“ದಲಿತ ಯುವ ಮುಖಂಡರಾದ ಇವರು ದಲಿತ ಚಳವಳಿ, ದಲಿತ ವಿದ್ಯಾರ್ಥಿಗಳ ಚಳವಳಿಗಳಲ್ಲಿ ಭಾಗವಹಿಸಿ, ದಲಿತರ ನೋವು ನಲಿವುಗಳಿಗೆ ಸ್ಪಂದಿಸುವ ಯುವ ನೇತಾರರಾಗಿದ್ದಾರೆ. ಸಾಮಾಜಿಕವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಇವರು ಗ್ರಾಮಾಂತರ ಪ್ರದೇಶಗಳಲ್ಲಿ ದಲಿತರ ಮೇಲೆ ನಡೆಯುತ್ತಿರುವ ಶೋಷಣೆ, ದಬ್ಬಾಳಿಕೆ, ದೌರ್ಜನ್ಯ, ಅಸಮಾನತೆಯ ವಿರುದ್ಧ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಯುವ ದಲಿತ ಸಮೂಹಕ್ಕೆ ಧ್ವನಿಯಾಗಿದ್ದಾರೆ” ಎಂದು ಹೇಳಿದರು.

“ಸಮಾಜ ಸೇವೆ ಮತ್ತು ಅಭಿವೃದ್ಧಿ ಪರವಾದ ಕಾರ್ಯಚಟುವಟಿಕೆಗಳು, ಹೋರಾಟಗಳು, ಸಮಾಜ ಕಟ್ಟುವ ಯುವ ಚಿಂತನೆಗಳನ್ನು ದಲಿತ ಸಾಹಿತ್ಯ ಪರಿಷತ್‌ ಮೈಸೂರು ಜಿಲ್ಲಾ ಘಟಕ ಮತ್ತು ರಾಜ್ಯ ಘಟಕವು ಇವರನ್ನು ಗುರುತಿಸಿದೆ. ಇದೇ ರೀತಿ ಸಮಾಜ ಸೇವಾ ಕಾರ್ಯಗಳಲ್ಲಿ ಇನ್ನೂ ಹೆಚ್ಚು ಕೆಲಸ ಮಾಡಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಉನ್ನತ ಪ್ರಶಸ್ತಿಗಳು ಸಿಗಲಿ, ಉನ್ನತ ಸ್ಥಾನಮಾನಗಳನ್ನು ಅಲಂಕರಿ ಉತ್ತಮ ನಾಯಕರಾಗಲಿ” ಎಂದು ಆಶಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಮೊಗೇರ ಸಮುದಾಯವನ್ನು ಪ್ರವರ್ಗ-1ರ ಪಟ್ಟಿಯಿಂದ ಕೈಬಿಡದಂತೆ ದಸಂಸ ಆಗ್ರಹ

ಪ್ರಶಸ್ತಿ ಪುರಸ್ಕೃತ ಸಿ ನರೇಂದ್ರ ನಾಗಾವಾಲ ಅವರು ಮಾತನಾಡಿ, ಪ್ರಶಸ್ತಿ ಪ್ರದಾನ ಮಾಡಿದ ಸಂಘಟನೆಯ ಕಾರ್ಯಕರ್ತರಿಗೆ ವಂದಿಸಿದರು.

ಈ ವೇಳೆ ದಲಿತ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಘಟಕ ಅಧ್ಯಕ್ಷ ಡಾ. ರಂಗಸ್ವಾಮಿ ಕಾಳಹುಂಡಿ, ಉಪಾಧ್ಯಕ್ಷೆ ಡಾ. ಜಯಶೀಲ ಎಸ್‌, ಕಾರ್ಯದರ್ಶಿ ಡಾ. ಟಿ. ಮಂಜು ಸತ್ತಿಗೆಹುಂಡಿ, ಖಜಾಂಚಿ ಡಾ. ಶಿವಶಂಕರ ಬಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X