ಬೀದರ್‌ | ಲೇಖಕರು ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಲಿ : ಗುರುಬಸವ ಪಟ್ಟದ್ದೇವರು

Date:

Advertisements

ಯುವ ಲೇಖಕರು ತಮ್ಮ ಪ್ರತಿಭೆ ಬಳಸಿಕೊಂಡು ಆಸಕ್ತಿಯ ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಬೇಕು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಕಮಲನಗರ ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆಯಲ್ಲಿ ಸೋಮವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಸಾಹಿತಿ ಸಂಗಮೇಶ್ವರ ಮುರ್ಕೆ ಬರೆದ ʼಬೀದರ ಜಿಲ್ಲೆಯ ಸಂಸ್ಕೃತಿ ಪರಂಪರೆʼ ಕೃತಿ ಲೋಕಾರ್ಪಣೆ, ಪತ್ರಿಕಾ ಹಾಗೂ ವೈದ್ಯ ದಿನಾಚರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ʼಯುವ ಸಾಹಿತಿಗಳು ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡರೆ ಸಾಹಿತ್ಯ ಕ್ಷೇತ್ರ ಸಮೃದ್ಧವಾಗಿ ಬೆಳೆಯಲು ಸಾಧ್ಯ. ಬರಹಗಾರರು ಮಾನವೀಯ ಕಳಕಳಿಯೊಂದಿಗೆ ಸೂಕ್ಷ್ಮ ಸಂವೇದನಾಶೀಲರಾಗಿ ಸಾಹಿತ್ಯ ರಚಿಸಿ ವರ್ತಮಾನದ ವಾರಸುದಾರರಿಗೆ ಮಾರ್ಗದರ್ಶನ ಮಾಡುವಂತಾಗಬೇಕು. ಎಲ್ಲ ಕೃತಿಗಳ ಆಶಯ ಸತ್ಯದ ಅನ್ವೇಷಣೆಯಾದರೆ ಮಾತ್ರ ವೈಚಾರಿಕ, ಸಾಮಾಜಿಕ ಮೌಲ್ಯಗಳ ಚಿಂತನೆ ಬೆಳೆಸಲು ಸಾಧ್ಯ. ಉತ್ತಮ ಸಾಹಿತ್ಯ ಕೃತಿ ರಚನೆಗೆ ಅನುಭವ ಬೇಕು. ಲೇಖಕರು ಗಟ್ಟಿ ಸಾಹಿತ್ಯ ರಚನೆಗೆ ಹೆಚ್ಚು ಒತ್ತು ನೀಡಬೇಕುʼ ಎಂದು ಸಲಹೆ ನೀಡಿದರು.

ತಾಲೂಕು ಪಂಚಾಯಿತಿ ಇಒ ಹಣಮಂತರಾಯ ಕೌಟಗೆ ಮಾತನಾಡಿ, ʼಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಮಾಧ್ಯಮ ರಂಗ ಅಗತ್ಯ. ಸಮಾಜದ ಪರಿಶುದ್ಧತೆಯಲ್ಲಿ ಮಾಧ್ಯಮ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ. ಸಕರಾತ್ಮಕ ವಿಚಾರಗಳಿಗೆ ಪ್ರಾಮುಖ್ಯ ನೀಡುತ್ತಿರುವ ಪತ್ರಿಕೆಗಳಿಂದ ಸಶಕ್ತ ಭಾರತ ನಿರ್ಮಾಣ ಸಾಧ್ಯʼ ಎಂದರು.

28kmr1
ಕಾರ್ಯಕ್ರಮದಲ್ಲಿ ವೈದರು, ಪತ್ರಕರ್ತರಿಗೆ ವಿಶೇಷವಾಗಿ ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ʼಗಡಿ ಭಾಗದಲ್ಲಿ ಕನ್ನಡ ನಾಡು-ನುಡಿ ಬೆಳವಣಿಗೆಗೆ
ಪತ್ರಕರ್ತರ ಸೇವೆ ಅನನ್ಯ. ಚನ್ನಬಸವ ಪಟ್ಟದ್ದೇವರು ಜನಿಸಿದ ನೆಲ ಕಮಲನಗರದಲ್ಲಿ ಕಸಾಪ ತಾಲೂಕು ಘಟಕ
ಕೈಗೊಳ್ಳುತ್ತಿರುವ ವಿವಿಧ ರಚನಾತ್ಮಕ ಕಾರ್ಯಗಳು ಇತರರಿಗೆ ಮಾದರಿಯಾಗಿದೆʼ ಎಂದರು.

ʼಸರ್ಕಾರ ಹಾಗೂ ಸಮಾಜದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಜನರ ಧ್ವನಿಯನ್ನು ಆಡಳಿತ ವರ್ಗಕ್ಕೆ ಹಾಗೂ ಜನಪ್ರತಿನಿಧಿಗಳ ಕಿವಿಗೆ ತಲುಪಿಸುವ ಸಂದೇಶ ವಾಹಕ ಕೆಲಸ ಮಾಡುತ್ತಿದೆ. ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ಪತ್ರಕರ್ತರು ಹಾಗೂ ವೈದ್ಯರು, ಪೊಲೀಸರ ಜತೆಗೆ ಕೋವಿಡ್ ವಾರಿಯರ್ಸ್‌ ಗಳಾಗಿ ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸಿದ್ದು ಮರೆಯಲಾಗದುʼ ಎಂದು ತಿಳಿಸಿದರು.

ಹಿರಿಯ ಪತ್ರಕರ್ತರ ಡಾ.ಎಸ್.ಎಸ್.ಮೈನಾಳೆ ಕೃತಿ ಪರಿಚಯ ಮಾಡಿಕೊಟ್ಟರು. ಸಿಪಿಐ ಶ್ರೀಕಾಂತ ಅಲ್ಲಾಪುರ, ಸಾಹಿತಿ ಸಂಗಮೇಶ್ವರ ಮುರ್ಕೆ ಮಾತನಾಡಿದರು. ಮಹಾಲಿಂಗ ಸ್ವಾಮೀಜಿ ನೇತೃತ್ವ ವಹಿಸಿದ್ದರು. ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಕಮಲನಗರ ತಾಲೂಕಿನ ಪತ್ರಕರ್ತರು ಹಾಗೂ ವೈದ್ಯರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್ | ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳನ್ನು ನಿರ್ಲಕ್ಷಿಸಬೇಡಿ: ಎಸ್ಪಿ ಪ್ರದೀಪ ಗುಂಟಿ

ಗ್ರಾಪಂ ಅಧ್ಯಕ್ಷೆ ಸುಶೀಲಾ ಸಜ್ಜನ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸುನೀಲ ಕಸ್ತೂರೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಪಾಟೀಲ್, ಆಡಳಿತ ವೈದ್ಯಾಧಿಕಾರಿ ಡಾ.ಶ್ರೀಮಂತ ಮಡಿವಾಳ ಸೇರಿದಂತೆ ಪ್ರಮುಖರಾದ ಶಿವಶಂಕರ ಟೋಕರೆ, ಪಂಡರಿ ಆಡೆ, ಡಾ.ಅಶೋಕುಮಾರ ಮಳಗೆ, ಚನ್ನಬಸವ ಘಾಳೆ, ಸತೀಶ ಜೀರ್ಗೆ, ಧನರಾಜ ಸೊಲ್ಲಾಪುರೆ, ನಾಗಯ್ಯ ಸ್ವಾಮಿ, ಶಿವಾನಂದ ವಡ್ಡೆ, ಅನೀಲಕುಮಾರ ದೇಶಮುಖ, ಜಗನ್ನಾಥ ಜೀರ್ಗೆ, ಧನರಾಜ ಭವರಾ, ಉಮೇಶ ಜೀರ್ಗೆ, ಸಂತೋಷ ಸುಲಾಕೆ, ಅವಿನಾಶ ಶಿವಣಕರ, ರಾಜಕುಮಾರ ಬಿರಾದಾರ, ಬಾಲಾಜಿ ಬಿರಾದಾರ ಇತರರಿದ್ದರು. ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ ಸ್ವಾಗತಿಸಿದರು. ಹಾವಗಿರಾವ ಮಠಪತಿ ನಿರೂಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X