ಕೊರಟಗೆರೆ | ರೈತನ ಗುಡಿಸಲಿಗೆ ಬೆಂಕಿ : ಬಿತ್ತನೆ ಬೀಜ, ರಸಗೊಬ್ಬರ ಭಸ್ಮ

Date:

Advertisements

ರೈತನ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ದವಸ ಧಾನ್ಯ, ಬಿತ್ತನೆ ಬೀಜ, ರಸಗೊಬ್ಬರ ದಿ‌ನಸಿ ಪದಾರ್ಥಗಳು ನಷ್ಟವಾಗಿರುವ ಘಟನೆ ಸಂಭವಿಸಿದೆ.

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮದ ವಾಸಿಯಾದ ರೈತ ನಾಗರಾಜು, ಗುಡಿಸಲುಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬಿತ್ತನೆ ಬೀಜ, ರಸಗೊಬ್ಬರ, ದಿನಬಳಕೆ ವಸ್ತುಗಳು ಸೇರಿದಂತೆ ಸುಮಾರು ₹1 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

1001803991

ಬೆಂಕಿ ಕಾಣಿಸಿಕೊಂಡಾಗ ಸಾರ್ವಜನಿಕರು ನೀರು ಹರಿಸಿ ನಂದಿಸಲು ಯತ್ನಿಸಿದರೂ ಪ್ರಯೋಜನವಾಗಿಲ್ಲ. ದಿನಸಿ ಸಾಮಗ್ರಿಗಳು, ಬಟ್ಟೆ, ಮನೆ ಬಳಕೆಯ ವಸ್ತುಗಳು ಸಹ ಸಂಪೂರ್ಣ ಸುಟ್ಟಿದ್ದರಿಂದ ರೈತ ನಾಗರಾಜು ತೀವ್ರ ಅಳಲು ವ್ಯಕ್ತಪಡಿಸಿದರು.

1001803998

ಪ್ರಾಣಹಾನಿ ತಪ್ಪಿದ್ದರೂ ಆರ್ಥಿಕ ಹಾನಿ ಮಾತ್ರ ಭಾರಿಯಾಗಿದೆ ಎಂದು ಸ್ಥಳೀಯರು, ರೈತನಿಗೆ ತಕ್ಷಣ ಪರಿಹಾರ ನೀಡುವಂತೆ ಸರ್ಕಾರ ಹಾಗೂ ಕೃಷಿ ಇಲಾಖೆಗಳಿಗೆ ಮನವಿ ಮಾಡಿದರು.

ಬೆಂಕಿಗೆ ಆಹುತಿಯಾಗಿ ಅವರು ವಾಸಿಸುತ್ತಿದ್ದ ಗುಡಿಸಿಲಿನಲ್ಲಿ ಶೇಂಗಾ, ಜೋಳ, ರಾಗಿ, ಅಳಸಂಡೆ ಸೇರಿದಂತೆ ಹಲವು ಬೆಳೆಗಳ ಬೀಜಗಳು ಹಾಗೂ ಕೃಷಿಗೆ ಉಪಯೋಗವಾಗುವ ಪರಿಕರಗಳು ಇಡಲಾಗಿದ್ದು ,ಆಕಸ್ಮಿಕ ಬೆಂಕಿಯಿಂದ ಎಲ್ಲವೂ ಸುಟ್ಟು ಹೋಗಿರುವ ಈ ದುರ್ಘಟನೆಯಿಂದ ರೈತ ಜೀವನದಲ್ಲಿ ಕಂಗಾಲಾಗಿದ್ದಾರೆ.

ರೈತನ ಕಷ್ಟಕ್ಕೆ ಸ್ಪಂದಿಸಿ ಧೈರ್ಯ ತುಂಬಿದ ಗ್ರಾಮಪಂಚಾಯಿತಿ

ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸ್ಥಳಕ್ಕೆ ಭೇಟಿ ನೀಡಿದ ಪಿಡಿಒ ರವಿ ಜಾಮಗೊಂಡ, ಪಂಚಾಯಿತಿ ಅಧ್ಯಕ್ಷೆ ಸೌಮ್ಯ ಜಗನ್ನಾಥ್, ಸದಸ್ಯೆ ಸಿದ್ದಗಂಗಮ್ಮ ಮತ್ತು ರವೀಶ್ ಕುಮಾರ್ ಅವರು ರೈತ ನಾಗರಾಜು ಅವರಿಗೆ ತಾತ್ಕಾಲಿಕ ಪರಿಹಾರವಾಗಿ ಚೆಕ್ ವಿತರಿಸಿ ಧೈರ್ಯ ತುಂಬಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X