ಹಾಸನ | ಗ್ರಾ.ಪಂ. ನೌಕರರಿಗೆ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸುವಂತೆ ಸಿಐಟಿಯು ಆಗ್ರಹ

Date:

Advertisements

ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗ ಉದ್ದಿಮೆಗಳಲ್ಲಿ ದುಡಿಯುವ ನೌಕರರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದಿಂದ ಹಾಸನ ಜಿಲ್ಲಾ ಕಾರ್ಮಿಕ ಇಲಾಖೆ ಎದುರು ಪ್ರತಿಭಟನೆ ನಡೆಸಿ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮಾತನಾಡಿ, “ಕರ್ನಾಟಕ ಸರ್ಕಾರವು ʼಪಂಚಾಯತ್ ರಾಜ್ʼ ಸಂಸ್ಥೆಯಲ್ಲಿ ಉದ್ಯೋಗ ಉದ್ದಿಮೆ ಮಾಡುವ ನೌಕರರಿಗೆ 2021 ನವೆಂಬರ್ ತಿಂಗಳಲ್ಲಿ ಅವೈಜ್ಞಾನಿಕವಾಗಿ ಜಾರಿ ಮಾಡಿರುವ ಕನಿಷ್ಠ ವೇತನವನ್ನು ಕರ್ನಾಟಕ ಗೌರವಾನ್ವಿತ ಉಚ್ಚನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿ ಸಂಘವು ರಿಟ್ ದಾಖಲೆ ಮಾಡಿದ ನಂತರ ನ್ಯಾಯಾಲಯದಲ್ಲಿ ವಾದ-ವಿವಾದಗಳು 2023 ಸೆಪ್ಟಂಬರ್‌ನಿಂದ ಆರಂಭವಾಗಿ 2024ರಲ್ಲಿ ಮಾನ್ಯ ನ್ಯಾಯಾಲಯದ ಏಕಸದಸ್ಯ ಪೀಠವು ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ಕನಿಷ್ಠ ವೇತನ ನಿಗದಿ ಪಡಿಸಲು 10 ವಾರಗಳ ಗಡುವು ನೀಡಿದ ಮೇಲೆ ಮೂರು ವರ್ಷ ನಾಲ್ಕು ತಿಂಗಳ ನಂತರ 2025ರಂದು ಸರ್ಕಾರ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು” ಎಂದರು.

“ಕರವಸೂಲಿಗಾರ, ಗುಮಾಸ್ತ, ಕ್ಲರ್ಕ್, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಅತ್ತಿ ಕುಶಲರಾಗಿ ಪರಿಗಣಿಸಿ ಮೂಲ ವೇತನ ₹38,021.86 ನಿಗದಿಪಡಿಸಬೇಕು. ವಾಟರ್‌ಮ್ಯಾನ್‌(ನೀರುಗಂಟಿ), ಪಂಪ್ ಆಪರೇಟರ್ ಕಂ ಮೆಕ್ಯಾನಿಕ್ ಹುದ್ದೆಗಳನ್ನು ʼಕುಶಲʼರಾಗಿ ಪರಿಗಣಿಸಿ’ ಮೂಲ ವೇತನ ₹33,062.50 ನಿಗದಿಪಡಿಸಬೇಕು. ಅಟೆಂಡರ್, ಜವಾನರು ʼಅರೆ ಕುಶಲʼರಾಗಿ ಪರಿಗಣಿಸಿ ಮೂಲ ವೇತನ ₹28750 ನಿಗದಿಪಡಿಸಬೇಕು. ಕಸಗುಡಿಸುವವರು/ಸ್ವಚ್ಛಾತಾಗಾರರು ʼಅಕುಶಲʼರಾಗಿ ಪರಿಗಣಿಸಿ ಮೂಲ ವೇತನ ₹25,000 ನಿಗದಿಪಡಿಸಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಪ್ರತಿಭಟನೆ

“ಕನಿಷ್ಠ ವೇತನದ ಜಾರಿಯನ್ನು 2025ರಿಂದ ಅನ್ವಯವಾಗುವಂತೆ ಜಾರಿ ಮಾಡಬೇಕು ಜತೆಗೆ 9,469 ಅಂಶಗಳಿಗಿಂತ ಹೆಚ್ಚಾಗುವ ಪ್ರತಿ ಅಂಶಕ್ಕೆ ದಿನಕ್ಕೆ ಆರು ಪೈಸೆ ನಿಗದಿಯಾಗಬೇಕು. ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುವ ಸಿಬ್ಬಂದಿಗಳಿಗೆ ʼಸೇವಾ ಹಿರಿತನದʼ ಮಾನ್ಯತೆ ನೀಡಿ ಮೂಲ ವೇತನಕ್ಕೆ ಶೇ.2ರಷ್ಟು ಹೆಚ್ಚಳವನ್ನು ಪ್ರತಿ ವರ್ಷ ಪರಿಗಣಿಸಿ ಹೆಚ್ಚುವರಿ ಭತ್ಯೆ ನೀವುವಂತಹ ಬೇಡಿಕೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಾಂತ ಎಲ್ಲ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆ ಪ್ರಧಾನ ಕಾರ್ಯದರ್ಶಿ ಕೆ ಟಿ ಹೊನ್ನೇಗೌಡ, ಖಜಾಂಚಿ ಕುಮಾರಸ್ವಾಮಿ, ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ಕರಿಯಪ್ಪ, ಅರಕಲಗೂಡು ಕಾರ್ಯದರ್ಶಿ ಅಶೋಕ್, ಬೇಲೂರು ತಾಲೂಕು ಕಾರ್ಯದರ್ಶಿ ನಂದೀಶ್, ಅರಸೀಕೆರೆ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಡಿವೈಎಫ್‌ವೈ ಜಿಲ್ಲಾ ಕಾರ್ಯದರ್ಶಿ ಎಂ ಜಿ ಪೃಥ್ವಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಅರವಿಂದ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X