ಕೋಲಾರ | ಗ್ರಾಪಂ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಪಂ ಮುಂದೆ ಪ್ರತಿಭಟನೆ

Date:

Advertisements

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ನೌಕರರು ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, “ಗ್ರಾಮ ಪಂಚಾಯಿತಿ ನೌಕರರಿಗೆ 36,000 ಕನಿಷ್ಠ ವೇತನ, ಪಿಂಚಣಿ ಕನಿಷ್ಠ 6,000ಕ್ಕೆ ನಿಗದಿಪಡಿಸುವುದು, ಎಲ್ಲ ಗ್ರಾಮ ಪಂಚಾಯಿತಿಗಳಿಗೆ ದ್ವಿತೀಯ ದರ್ಜೆ ಗುಮಾಸ್ತರ ನೇಮಕ, ಹಳೆ ಪಿಂಚಣಿ ಯೋಜನೆ ಜಾರಿ, ಗ್ರಾಚ್ಯುಟಿ ಪರಿಹಾರ 90 ದಿನಕ್ಕೆ ಹೆಚ್ಚಿಸುವುದು ಸೇರಿದಂತೆ ಎಲ್ಲಾ ಬೇಡಿಕೆಗಳ ಈಡೇರಿಸಬೇಕು. ಗ್ರಾಮ ಪಂಚಾಯಿತಿಗಳಿಗೆ ಎರಡನೇ ಡಾಟಾ ಎಂಟ್ರಿ ಆಪರೇಟರ್‌ ಹುದ್ದೆಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ ಈಗಾಗಲೇ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರ ಕಂಪ್ಯೂಟರ್‌ ಜ್ಞಾನ ಹಾಗೂ ವಿದ್ಯಾರ್ಹತೆ ಹೊಂದಿದ್ದರೆ ಅವರಿಗೆ ಅವಕಾಶ ನೀಡಬೇಕು. ನೌಕರರಿಗೆ ವರ್ಗಾವಣೆಗೆ ಅವಕಾಶ ನೀಡಬೇಕು. ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆ ನಿಗದಿಗೊಳಿಸಬೇಕು” ಎಂದು ಆಗ್ರಹಿಸಿದರು.

WhatsApp Image 2025 07 28 at 8.02.20 PM 1

“ಗ್ರಾಮ ಪಂಚಾಯಿತಿಗಳಲ್ಲಿ ಲೆಕ್ಕ ಸಹಾಯಕ ಹುದ್ದೆ ಸ್ಥಾಪಿಸಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಎಲ್ಲಾ ನೌಕರರಿಗೆ ಕೋವಿಡ್ ಪರಿಹಾರ ನಿಧಿ, ಬಾಕಿ ವೇತನ, ಅನುಕಂಪ ಆಧಾರಿತ ಕೆಲಸ, ತೆರಿಗೆ ಸಂಗ್ರಹ ಗುರಿ ಉಪಧನ ಕೊಡಿಸಲು ಜಿಲ್ಲಾ ಪಂಚಾಯಿತಿ ಕ್ರಮವಹಿಸಬೇಕು” ಎಂದು ಒತ್ತಾಯಿಸಿದರು.

Advertisements

ಇದನ್ನೂ ಓದಿ: ಕೋಲಾರ | ಸರ್ಕಾರಗಳು ರೈತರ ಕಾಲು ಹಿಡಿಯುವ ಪರಿಸ್ಥಿತಿ ಬರಲಿದೆ: ಶಾಸಕ ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಮುಖಂಡರಾದ ಅಮರನಾರಾಯಣ ಕೇಶವರಾವ್, ರಾಮಕೃಷ್ಣಪ್ಪ, ಮೋಹನ್, ಚಂದ್ರಪ್ಪ ವೆಂಕಟರಾಮೇಗೌಡ, ನಾಗೇಶ್, ರೆಡ್ಡೆಪ್ಪ, ಶಿವ, ರಾಮಚಂದ್ರಪ್ಪ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X