ಚಿಕ್ಕಮಗಳೂರು | ಚರ್ಚ್ ನಿರ್ಮಾಣಕ್ಕೆ ಹಿಂದೂಪರ ಸಂಘಟನೆಗಳ ವಿರೋಧ

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣ ಕಾರ್ಯ ನಡೆಯುತ್ತಿರುವುದಕ್ಕೆ ಹಿಂದೂಪರ ಸಂಘಟನೆಗಳು ಮತ್ತು ಗ್ರಾಮದ ಕೆಲವು ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಚರ್ಚ್‌ ನಿರ್ಮಿಸಬಾರದು ಎಂದು ಪಟ್ಟು ಹಿಡಿದಿದ್ದಾರೆ.

“ಮೂಡಿಗೆರೆ ಸಮೀಪದ ಹಾಂದಿ ಗ್ರಾಮದ ರಂಗ ಎಂಬುವವರ ಜಮೀನಿನಲ್ಲಿ ಚರ್ಚ್ ನಿರ್ಮಾಣ ಕಾರ್ಯ ನಡೆಯುತ್ತಿದೆ. ಧಾರ್ಮಿಕ ಮತಾಂತರಗಳನ್ನು ನಡೆಸಲು ಚರ್ಚ್ ನಿರ್ಮಿಸಲಾಗುತ್ತಿದೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಮೂಡಿಗೆರೆ ಸಮೀಪದ ಹಾಂದಿ ಗ್ರಾಮದ ರಂಗ ಎಂಬ ವ್ಯಕ್ತಿ ಕ್ರಿಶ್ಚಿಯನ್ ಕುಟುಂಬಗಳೇ ಇಲ್ಲದ ಲೋಕವಳ್ಳಿ ಗ್ರಾಮದಲ್ಲಿ ಚರ್ಚ್ ನಿರ್ಮಾಣಕ್ಕೆ ಮುಂದಾಗಿದ್ದಾರೆ. ರಂಗ ಎಂಬುವವರೂ ಕೂಡ ಮತಾಂತರ ಹೊಂದಿದವರಾಗಿದ್ದು, ಸರ್ಕಾರದಿಂದ ಮನೆ ಕಟ್ಟಿಸಲು ಮಂಜೂರಾಗಿರುವ ಜಾಗದಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ” ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೀದರ್ | ಗ್ರಾಮ ಪಂಚಾಯಿತಿಗಳಲ್ಲಿ ಅವ್ಯವಹಾರ; ತನಿಖೆಗೆ ಕರವೇ ಆಗ್ರಹ

ಲೋಕವಳ್ಳಿ ಗ್ರಾಮಕ್ಕೆ‌ ಹಳೆ ಮೂಡಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಭೇಟಿ ನೀಡಿದ್ದಾರೆ. ಚರ್ಚ್ ನಿರ್ಮಾಣ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಗ್ರಾಮಸ್ಥರು ದೂರು ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X