ಹಾವೇರಿ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ವಿರುದ್ಧ ಹೋರಾಟಕ್ಕೆ ಎಸ್ಎಫ್ಐ ಕರೆ

Date:

Advertisements

ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ತಾಲೂಕು ಸಮಿತಿಯಿಂದ ಸಭೆ ನಡೆಸಿದ್ದು, ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಕರೆ ನೀಡಿದೆ.

ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಕೃಷ್ಣ ನಾಯ್ಕ ಮಾತನಾಡಿ, “ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಜಿಲ್ಲೆಯಲ್ಲಿ ಹಾಸ್ಟೆಲ್‌ಗಳು, ಬಸ್ಸಿನ ಸಮಸ್ಯೆಗಳು ಪರಿಹಾರವಾಗಿಲ್ಲ. ವಿದ್ಯಾರ್ಥಿಗಳಿಗೆ ಅನುಕೂಲಕ್ಕೆ ತಕ್ಕಂತೆ ಬಸ್‌ಗಳಿಲ್ಲ, ಸಮಯಕ್ಕೆ ಬಸ್ ಬರುವುದಿಲ್ಲವೆಂದು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ವಿದ್ಯಾರ್ಥಿನಿಯರ ಉಚಿತ ಬಸ್ ಪಾಸ್ ಜತೆಗೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

“ಹಾಸ್ಟೆಲ್‌ಗೆ ಅರ್ಜಿ ಹಾಕಿದ ವಿದ್ಯಾರ್ಥಿಗಳಿಗೆ ಇನ್ನೂ ಹಾಸ್ಟೆಲ್ ಪ್ರಾರಂಭವಾಗಿಲ್ಲದಿರುವುದು ದುರಂತವಾಗಿದೆ. ಈ ಹಿಂದೆ ಸರ್ಕಾರದ ವಿರುದ್ಧ ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಹಾಗೂ ನೂತನ ಹಾಸ್ಟೆಲ್ ಮಂಜೂರು ಮಾಡಬೇಕೆಂದು ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ರಾಜ್ಯಾದ್ಯಂತ ನೆಡೆದ ವಿದ್ಯಾರ್ಥಿಗಳ ಪ್ರತಿಭಟನೆ ಪರಿಣಾಮವಾಗಿ ಇಡೀ ರಾಜ್ಯದಲ್ಲಿ ಹೆಚ್ಚುವರಿಯಾಗಿ ಹಾಸ್ಟೆಲ್‌ಗಳು ಮಂಜೂರಾಗಿವೆ. ಆದರೂ ರಾಜ್ಯ ಸರ್ಕಾರ, ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲು ಮುಂದಾಗಿಲ್ಲ” ಎಂದು ಆರೋಪಿಸಿದರು.

“ಕಳೆದ ವರ್ಷದಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಲವರಿಗೆ ಬಂದಿಲ್ಲ. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ವಿಪರೀತವಾಗಿದ್ದು, ಇದನ್ನು ತಡೆಯುವಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ವಿಫಲವಾಗಿದೆ. ಡೊನೇಷನ್ ಹಾವಳಿ ವಿರುದ್ಧ ಹೋರಾಟ ಮಾಡಲು ಹಾಗೂ ಡೊನೇಷನ್ ಹಾವಳಿ ನಿಯಂತ್ರಣ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಒತ್ತಾಯಿಸಬೇಕು” ಎಂದು ತೀರ್ಮಾನಿಸಲಾಯಿತು.

“ಪ್ರಸಕ್ತ ವರ್ಷದಿಂದಲೇ ಕಾನೂನು ಮಹಾವಿದ್ಯಾಲಯ 3 ಮತ್ತು 5 ವರ್ಷದ ಕೋರ್ಸ್ ಪ್ರಾರಂಭಿಸಬೇಕು. ಜಿಲ್ಲಾ ಕೇಂದ್ರದ ನಗರದಲ್ಲೇ ಮುನ್ಸಿಪಲ್ ಮೈದಾನದಲ್ಲಿರುವ ಕಾಲೇಜು ಕಟ್ಟಡದಲ್ಲಿ ತರಗತಿಗಳನ್ನು ಪ್ರಾರಂಭ ಮಾಡಬೇಕು. ನೂತನ ಹಾವೇರಿ ವಿಶ್ವವಿದ್ಯಾಲಯ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಮಾಡಲು ಮುಂದಾಗಬೇಕು. ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಬಸ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ನಗರ ಸಾರಿಗೆ ವ್ಯವಸ್ಥೆ ಪ್ರಾರಂಭಿಸಬೇಕು” ಎನ್ನುವಂತಹ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ರೂಪಿಸಲು ಎಸ್ಎಫ್ಐ ಕಾರ್ಯಕರ್ತರು ಚರ್ಚೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಬೈಂದೂರು ಸೋಮೇಶ್ವರ, ದೊಂಬೆ ಕರಾವಳಿ ಮಾರ್ಗ ಕೆಎಸ್ಸಾರ್ಟಿಸಿ ಬಸ್ಸಿಗಾಗಿ ಪ್ರತಿಭಟನೆ

“ಹಾಸ್ಟೆಲ್ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳ ಕೊರತೆ, ಶೈಕ್ಷಣಿಕ ಸಮಸ್ಯೆಗಳ ಹಾಗೂ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜು ಪ್ರವೇಶದ ಜತೆಗೆ ಏಕಕಾಲಕ್ಕೆ ವಸತಿ ನಿಲಯಗಳನ್ನು ಪ್ರಾರಂಭಿಸುವುದು ಸೇರಿದಂತೆ ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್ಎಫ್ಐ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕಾಲೇಜು-ಹಾಸ್ಟೆಲ್‌ ಮುಖಂಡರು ಸುದೀರ್ಘ ಚರ್ಚೆ ನಡೆಸಿ ಹೋರಾಟಕ್ಕೆ ಕರೆ ನೀಡಲಾಗಿದೆ” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಮುಖಂಡ ಅರುಣ ಕುಮಾರ ಎನ್, ವೈಶಾಲಿ ಎನ್, ಲಕ್ಷ್ಮೀ, ಅಕ್ಷತಾ ಹೆಚ್, ಸೌಮ್ಯಾ ಪೂಜಾರ್, ಚೈತ್ರ ಕೊರವರ್, ಸ್ಪೂರ್ತಿ ಮಾಳಗಿ, ಅನಿತಾ ಎಂ, ಸೀಮಾ ಬೂದಿಹಾಳ, ಹಜ್ರತ್ ವಿ, ವಿಕಾಸ್ ಗೌಡ, ವಿಮಲ್ ನಾಥ್, ಸಂಪದ ಜಿ, ನಝಮೀನ್ ಎನ್ ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X