ಬೀದರ್‌ | ʼಈದಿನʼ ವರದಿಗೆ ಸ್ಪಂದನೆ : ಚಟ್ನಾಳ ಗ್ರಾಮಕ್ಕೆ ಜಿಪಂ ಸಿಇಒ ಭೇಟಿ, ಜೆಜೆಎಂ ಕಾಮಗಾರಿ ಪರಿಶೀಲನೆ

Date:

Advertisements

ಔರಾದ್‌ ತಾಲೂಕಿನ ಶೆಂಬೆಳ್ಳೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಚಟ್ನಾಳ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಮಂಗಳವಾರ ಭೇಟಿ ನೀಡಿ ಜಲ ಜೀವನ್‌ ಮಿಷನ್‌ ಕಾಮಗಾರಿ ಪರಿಶೀಲಿಸಿದರು.

ಚಟ್ನಾಳ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಜೆಜೆಎಂ ಕಾಮಗಾರಿ ನಡೆಯುತ್ತಿದ್ದು ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಬೇಸಿಗೆ ಸಂದರ್ಭದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿತು. ಮಳೆ ಆರಂಭವಾದರೂ ಗ್ರಾಮಸ್ಥರಿಗೆ ಸಮರ್ಪಕವಾಗಿ ನೀರು ಪೂರೈಕೆ ಆಗುತ್ತಿಲ್ಲ. ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಕೊಳವೆ ಬಾವಿಯೊಂದರ ನೀರು ಕಲುಷಿತಗೊಂಡಿರುವ ಬಗ್ಗೆ ಪಂಚಾಯಿತಿ ಅಧಿಕಾರಿಗಳೇ ಖುದ್ದು ವರದಿ ನೀಡಿದ್ದಾರೆ. ಸಮಸ್ಯೆ ಕುರಿತು ಜುಲೈ 24ರಂದು ʼಈದಿನʼನಲ್ಲಿ ʼಜೆಜೆಎಂ ಅಪೂರ್ಣ : ಕೆಸರು ಗದ್ದೆಯಂತಾದ ರಸ್ತೆ, ಚರಂಡಿಗಳು; ಸ್ವಚ್ಛತೆ ಮರೀಚಿಕೆ!ʼ ತಲೆಬರಹದಲ್ಲಿ ವರದಿ ಪ್ರಕಟವಾಗಿತ್ತು.

WhatsApp Image 2025 07 29 at 5.27.51 PM
ಬಲ್ಲೂರ(ಜೆ) ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಂಡ ಬಗ್ಗೆ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ವರದಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಜೆಜೆಎಂ ಕಾಮಗಾರಿ, ಅಂಗನವಾಡಿ ಕೋಣೆ ಕಾಮಗಾರಿ ವೀಕ್ಷಿಸಿದರು. ಜೆಜೆಎಂ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ತ್ವರಿತವಾಗಿ ಕಾಮಗಾರಿ ಮುಗಿಸಿ ಪೈಪ್‌ಲೈನ್ ಅಗೆದಿರುವ ರಸ್ತೆ ಗುಂಡಿಗಳನ್ನು ಶೀಘ್ರದಲ್ಲಿ ಮುಚ್ಚಬೇಕುʼ ಎಂದು ಹೇಳಿದರು.

ಇನ್ನು ಗ್ರಾಮದ ಮುಖ್ಯರಸ್ತೆಯಲ್ಲಿ ಚರಂಡಿ, ರಸ್ತೆ ಅವ್ಯವಸ್ಥೆ ಕಂಡು ಅಸಮಧಾನ ವ್ಯಕ್ತಪಡಿಸಿದ ಅವರು, ʼಸೂಕ್ತ ಚರಂಡಿ ವ್ಯವಸ್ಥೆ, ಸ್ವಚ್ಛತೆ ಯಾಕಿಲ್ಲʼ ಎಂದು ಗ್ರಾಮ ಪಂಚಾಯತ್‌ ಅಧಿಕಾರಿಗಳಿಗೆ ಪ್ರಶ್ನಿಸಿದರು. ಆಗ ಅಧಿಕಾರಿಗಳು ಹತ್ತು ದಿನದ ಒಳಗಾಗಿ ಜೆಜೆಎಂ ಕಾಮಗಾರಿ ಪೂರ್ಣಗೊಳಿಸುವುದಾಗಿ ಹೇಳಿದರು. ಇನ್ನು ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಇತರೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಬೇಡಿಕೆಯಿಟ್ಟರು.

WhatsApp Image 2025 07 29 at 5.33.12 PM
ಸಂತಪೂರ ಗ್ರಾಮದಲ್ಲಿ ಕಾಮಗಾರಿ ನಡೆಯುತ್ತಿರುವ ತೆರೆದ ಬಾವಿಗೆ ಭೇಟಿ ನೀಡಿ ವೀಕ್ಷಿಸಿದರು.

ತಾಲ್ಲೂಕಿನ ಕೌಠಾ(ಬಿ) ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಲ್ಲೂರ(ಜೆ) ಭೇಟಿ ನೀಡಿ ಜೆಜೆಎಂ ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ಪರಿಶೀಲಿಸಿ ನಲ್ಲಿಗಳಿಗೆ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಮಾಹಿತಿ ಪಡೆದರು. ಇನ್ನು ಸಂತಪೂರ ಹಾಗೂ ಬೆಳಕುಣಿ(ಚೌ) ಗ್ರಾಮಗಳಿಗೆ ಭೇಟಿ ನೀಡಿದ ಸಿಇಒ ಅವರು ಜಲ ಜೀವನ್‌ ಮಿಷನ್‌ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಪರಿಶೀಲಿಸಿದರು.

ಇದನ್ನೂ ಓದಿ : ಔರಾದ್ | ಜೆಜೆಎಂ ಅಪೂರ್ಣ : ಕೆಸರು ಗದ್ದೆಯಂತಾದ ರಸ್ತೆ, ಚರಂಡಿಗಳು; ಸ್ವಚ್ಛತೆ ಮರೀಚಿಕೆ!

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ರಾಮಲಿಂಗ ಬಿರಾದರ್‌, ಔರಾದ್‌ ತಾಲೂಕು ಪಂಚಾಯತ್‌ ಇಒ ಶಿವಕುಮಾರ್‌ ಘಾಟೆ ಸೇರಿದಂತೆ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಾದ ನಾಗೇಶ ಮುಕರಂಬೆ, ಸಂತೋಷ ಪಾಟೀಲ್‌, ಆತ್ಮರಾಮ, ರಘುನಾಥ ರೆಡ್ಡಿ ಹಾಗೂ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X