ಮೈಸೂರು | ಗ್ರಾಮ ಪಂಚಾಯತಿ ಸ್ವಚ್ಛತಾಗಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

Advertisements

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ , ಐಟಿಸಿ ಮತ್ತು ಮೈರಾಡ ಕಾವೇರಿ ಪ್ರಾದೇಶಿಕ ಸಂಸ್ಥೆ, ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ, ಗ್ರಾಮ ಪಂಚಾಯಿತಿ ಸ್ವಚ್ಛತಾಗಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಧರಣೇಶ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಉದ್ಘಾಟಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ ” ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತಾಗಾರರ ಪಾತ್ರವೂ ಬಹಳ ಮುಖ್ಯವಾಗಿರುತ್ತದೆ. ಆದುದರಿಂದ, ಅವರ ಆರೋಗ್ಯವು ಮುಖ್ಯ. ನೀವುಗಳು ಆರೋಗ್ಯವಾಗಿದ್ದರೆ ಗ್ರಾಮ ಸ್ವಚ್ಛವಾಗಿರುತ್ತದೆ. ಆದುದರಿಂದ, ಎಲ್ಲರೂ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಿ ಹಾಗೂ ಚಿಕಿತ್ಸೆಯನ್ನು ಪಡೆಯಿರಿ ” ಎಂದು ತಿಳಿಸಿದರು.

ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಧರಣೇಶ್ ಮಾತನಾಡಿ ‘ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛತಾಗಾರರ ‌ ಕೆಲಸವು ಬಹಳ ಮುಖ್ಯವಾಗಿದೆ. ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸುವುದರಲ್ಲಿ ಇವರ ಪಾತ್ರ ಮುಖ್ಯವಾಗಿದೆ. ಇವರು ಗ್ರಾಮಗಳನ್ನು ಸ್ವಚ್ಛತೆ ಮಾಡುತ್ತಾರೆ. ಹಾಗೂ ಮನೆ ಮನೆಗೆ ಹೋಗಿ ಕಸವನ್ನು ಸಂಗ್ರಹಿಸುತ್ತಾರೆ, ಆದ್ದರಿಂದ, ಈ ದಿನ ಎಲ್ಲರಿಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಂಡಿದ್ದೇವೆ. ಈ ಕಾರ್ಯಕ್ರಮವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ‘ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಆಗಸ್ಟ್. 3 ರಂದು ಬನವಾಸಿ ತೋಟದಲ್ಲಿ ‘ ಬೆಳಕಿನ ಬೇಸಾಯ ‘ ಕಾರ್ಯಗಾರ

ವೈದ್ಯಾಧಿಕಾರಿ ಮಹಾಲಕ್ಷ್ಮಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅಶೋಕ, ಅರಳಪ್ಪ, ರವಿರಾಜ್, ಸಮುದಾಯ ಆರೋಗ್ಯ ಅಧಿಕಾರಿ ರೀಣಾ ಲೋಬೋ, ವಿದ್ಯಾ, ಆಶಾ ಚಕ್ರವರ್ತಿ, ತಾಲ್ಲೂಕು ಪಂಚಾಯಿತಿ ಕಚೇರಿಯ, ಪುರುಷೋತ್ತಮ್ ಎನ್ ಆರ್ ಎಲ್ , ಸುಹಾಸ್ , ರವೀಶ್, ಸ್ವಚ್ಛತಗಾರರು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X