ಶಿವಮೊಗ್ಗ | 110 ಜನರಿಗೆ ಕಳೆದುಕೊಂಡ ಮೊಬೈಲ್ ಸಿಕ್ಕ ಖುಷಿ ; ಮೊಬೈಲ್ ಕಳೆದುಕೊಂಡರೆ ಏನು ಮಾಡಬೇಕು : ಎಸ್ಪಿ ಮಾಹಿತಿ

Date:

Advertisements

ಶಿವಮೊಗ್ಗ, CEIR ಪೋರ್ಟಲ್ ಬಳಸಿ ಕಳೆದು ಹೋದಮೊಬೈಲ್ ಫೋನ್ ಗಳನ್ನ ಪೊಲೀಸರು ಪತ್ತೆ ಮಾಡಿದ್ದಾರೆ. ಒಟ್ಟು ಪೋರ್ಟಲ್ ಗಳಲ್ಲಿ 1 ಸಾವಿರ ಮೊಬೈಲ್ ಕಳವು ಪ್ರಕರಣ ಪೋರ್ಟಲ್ ನಲ್ಲಿ ದಾಖಲಾಗಿದ್ದು ಅದರಲ್ಲಿ 110 ಮೊಬೈಲ್ ಗಳನ್ನ ಇಲಾಖೆ ಹುಡುಕಿಕೊಡುವುದರಲ್ಲಿ ಯಶಸ್ವಿಯಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದರು.

1001975840

ಎಸ್ಪಿ ಮಿಥುನ್ ಕುಮಾರ್, ಅಡಿಷನಲ್ ಎಸ್ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ, ಇವರ ಮಾರ್ಗದರ್ಶನದಲ್ಲಿ CEN ಠಾಣೆಯ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ, ಪಿಐ ಮಂಜುನಾಥ್ ಮತ್ತು ಸಿಬ್ಬಂದಿಗಳನ್ನ ಒಳಗೊಂಡ ತಂಡವನ್ನ ರಚಿಸಲಾಗಿತ್ತು.ಕಳೆದ ಮೂರು ತಿಂಗಳಲ್ಲಿ 16,35,000/- ಒಟ್ಟು 110 ಮೊಬೈಲ್ ಗಳನ್ನ ಪತ್ತೆ ಮಾಡಲಾಗಿದೆ.

ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳೆದು ಹೋದರೆ ಠಾಣೆಗೆ ಭೇಟಿ ನೀಡದೆ ಸ್ವತಹ ತಾವೇ ಕೆಎಸ್ಪಿ ಅಪ್ಲಿಕೇಶನ್ ನ ಈ ಲಾಸ್ಟ್ ಆಪ್ ಮೂಲಕ ದೂರು ದಾಖಲಿಸಿ ಸ್ವೀಕೃತಿಯನ್ನು ಪಡೆದು https://www.ceir.gov.in ವೆಬ್ ಪೋರ್ಟಲ್ ಭೇಟಿ ನೀಡಿ block stolen/Lost Mobile ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ ಫಾರಂನಲ್ಲಿ ಕಳೆದು ಹೋದ ಮೊಬೈಲ್ ಫೋನಿನ IMEI ನಂಬರ್ ಮೊಬೈಲ್ ನಂಬರ್ ಮತ್ತು ಅಗತ್ಯ ವಿವರಗಳನ್ನು ಭರ್ತಿ ಮಾಡಿ ಸಬ್ಮಿಟ್ ಮಾಡುವ ಮೂಲಕ ದೂರನ್ನು ದಾಖಲಿಸಬಹುದಾಗಿದೆ.ದೂರು ದಾಖಲಾದ 24 ಗಂಟೆಯ ಒಳಗಾಗಿ ಕಳೆದುಹೋದ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ ಇದರಿಂದಾಗಿ ನಿಮ್ಮ ಮೊಬೈಲ್ ಫೋನ್ ದುರ್ಬಳಕೆಯಾಗದಂತೆ ತಡೆಯಬಹುದಾಗಿದೆ ತಮ್ಮ ಮೊಬೈಲ್ ಫೋನನ್ನು ಯಾರಾದರೂ ಬಳಕೆ ಮಾಡಲು ಪ್ರಯತ್ನಿಸಿದ್ದಲ್ಲಿ ಅವರ ವಿವರವೂ ದೊರಕುತ್ತದೆ ಇದರಿಂದ ಸುಲಭವಾಗಿ ತಮ್ಮ ಕಳೆದು ಹೋದ ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಲು ಸಾಧ್ಯವಾಗಿದೆ ಎಂದರು.

1001975498
oplus_0

ಆದ್ದರಿಂದ ಎಲ್ಲಾ ಸಾರ್ವಜನಿಕರು ಪೋರ್ಟಲ್ ನ್ನು ಉಪಯೋಗವನ್ನು ಪಡೆದುಕೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X