ರಷ್ಯಾ ಕರಾವಳಿಯಲ್ಲಿ ಪ್ರಬಲ ಭೂಕಂಪ; ಅಲಸ್ಕಾದಲ್ಲಿ ಸುನಾಮಿ ಆತಂಕ

Date:

Advertisements

ರಷ್ಯಾದ ಕರಾವಳಿಯಲ್ಲಿ 8.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪೆಸಿಫಿಕ್ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಅಮೆರಿಕದ ಜಿಯಾಲಾಜಿಕಲ್ ಸರ್ವೇ (ಯುಎಸ್‌ಜಿಎಸ್) ತಿಳಿಸಿದೆ.

ರಷ್ಯಾದ ಕಮ್ಚಕ್ತಾ ಪರ್ಯಾಯ ದ್ವೀಪದ ಪೆಟ್ರೋಪವಲೋಸ್ಕ್‌ನಿಂದ ಪೂರ್ವಕ್ಕೆ 136 ಕಿಲೋಮೀಟರ್ ದೂರದಲ್ಲಿ ಈ ಭೂಕಂಪ ಸಂಭವಿಸಿದೆ. ಕಂಪನವು 19 ಕಿಲೋಮೀಟರ್ ಆಳದಲ್ಲಿ ಉಂಟಾಗಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ.

ಪೆಸಿಫಿಕ್ ಸಾಗರದಲ್ಲಿ ಸುನಾಮಿ ಉಂಟಾಗುವ ಸಾಧ್ಯತೆಯಿಂದಾಗಿ ಅಲಸ್ಕಾ ಸೇರಿದಂತೆ ಹಲವು ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ. ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ರಷ್ಯಾದ ಬಳಿ ಭೂಕಂಪ ವರದಿಯಾದ ಬೆನ್ನಲ್ಲೇ ಜಪಾನ್‌ನ ಹವಾಮಾನ ಇಲಾಖೆಯು ಕೂಡ ಸುನಾಮಿ ಎಚ್ಚರಿಕೆಯನ್ನು ಜಾರಿಗೊಳಿಸಿದೆ. ಜಪಾನ್‌ನ ಪೆಸಿಫಿಕ್ ತೀರದಲ್ಲಿ ಒಂದು ಮೀಟರ್ ಎತ್ತರದ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಹೊಕ್ಕಾಯಿಡೊದಿಂದ 250 ಕಿಲೋಮೀಟರ್ ದೂರದಲ್ಲಿ ಕಂಪನ ಸಂಭವಿಸಿದ್ದು, ಲಘು ಕಂಪನ ಅನುಭವಕ್ಕೆ ಬಂದಿದೆ ಎಂದು ಎನ್‌ಎಚ್‌ಕೆ ಟಿವಿ ವರದಿ ಮಾಡಿದೆ. ಆಳದಲ್ಲಿ ಸಂಭವಿಸಿದ ಈ ಭೂಕಂಪವು ಜಪಾನ್‌ನಲ್ಲಿ ಸುನಾಮಿಗೆ ಕಾರಣವಾಗಬಹುದು ಎಂದು ಟೋಕಿಯೊ ವಿಶ್ವವಿದ್ಯಾನಿಲಯದ ಭೂಕಂಪ ಮಾಪನ ಶಾಸ್ತ್ರಜ್ಞ ಶಿನಿಚಿ ಸಕಾಯ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

Download Eedina App Android / iOS

X