ಮೈಸೂರು | ಧರ್ಮ ನಿರಪೇಕ್ಷ – ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್ ರವರ 134 ನೇ ಸ್ಮರಣ ದಿನ

Date:

Advertisements

ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಧರ್ಮ ನಿರಪೇಕ್ಷ – ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರವರ 134ನೇ ಸ್ಮರಣ ದಿನವನ್ನು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯಿಂದ ಆಚರಿಸುವುದರ ಜೊತೆಗೆ, ಸರ್ಕಾರಿ ಶಾಲೆಗಳನ್ನು ರಕ್ಷಿಸಿ, ಬಲಪಡಿಸಲು ಆಗ್ರಹಿಸಿ ಸಹಿ ಸಂಗ್ರಹಣ ಅಭಿಯಾನ ನಡೆಸಿದರು.

ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ ಮಾತನಾಡಿ ” ಉಳಿಗಮಾನ್ಯ ಆಳ್ವಿಕೆಯಡಿ ಬಹುಕಾಲದವರೆಗೆ ಅಜ್ಞಾನ ಹಾಗೂ ಮೌಡ್ಯದ ಅಂಧಕಾರದಲ್ಲಿ ಮುಳುಗಿ ಬಳಲುತ್ತಿದ್ದ ಭಾರತದ ನೆಲಕ್ಕೆ, ಆಧುನಿಕ ಜ್ಞಾನದ ಬೆಳಕನ್ನು ಹೊತ್ತು ತಂದ ಸೂರ್ಯನಂತೆ ಉದಯಿಸಿದವರು ಮಹಾನ್ ಧರ್ಮ ನಿರಪೇಕ್ಷ ಮಾನವತಾವಾದಿ ಈಶ್ವರಚಂದ್ರ ವಿದ್ಯಾಸಾಗರ್. ಶತಮಾನಗಳವರೆಗೂ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು ಮತ್ತು ಕೆಳವರ್ಗದ ಸಮುದಾಯಗಳಿಗೆ ವಿದ್ಯೆಯನ್ನು ನೀಡಲು ಮತ್ತು ಬಾಲ್ಯದಲ್ಲೇ ವಿಧವೆಯರಾಗಿ ನರಕದ ಬದುಕು ಸವೆಸುತ್ತಿದ್ದ ಹೆಣ್ಣು ಮಕ್ಕಳ ಮರು ವಿವಾಹಕ್ಕಾಗಿ ಅವಿರತ ಶ್ರಮಿಸಿದರು. “

ಜೊತೆಗೆ, ಹಳೆಯ ಗೊಡ್ಡು ಸಂಪ್ರದಾಯಗಳ ಸಂಕುಚಿತ ಚಿಂತನೆಗಳ ವಿರುದ್ಧ ಹೋರಾಡಿದ ವಿದ್ಯಾಸಾಗರರು, ನವೋದಯ ಚಳುವಳಿಯ ಪತಾಕೆಯನ್ನು ಭಾರತದ ಆಗಸದಲ್ಲಿ ಹಾರಿಸಿದವರು. ಇಂದು ಶಿಕ್ಷಣವು ಖಾಸಗೀಕರಣಗೊಂಡು ಮಾರಾಟವಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ.

ರಾಜ್ಯದಲ್ಲಿ 6000ಕ್ಕೂ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ. 3500ಕ್ಕೂ ಹೆಚ್ಚು ಶಾಲೆಗಳಲ್ಲಿ ಬಳಕೆಗೆ ಯೋಗ್ಯ ಶೌಚಾಲಯ ವ್ಯವಸ್ಥೆ ಇಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಹಲವು ಶಾಲೆಗಳ ಕಟ್ಟಡಗಳು ವರ್ಷಗಳಿಂದ ದುರಸ್ತಿ ಕಾಣದೆ ಚಾವಣಿಗಳು ಸೋರುತ್ತಿವೆ. ಎಲ್ಲದಕ್ಕಿಂತ ಮುಖ್ಯವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 59,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. 29 ಸಾವಿರಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಗೊಂಡು ಬೀಳುವ ಹಂತದಲ್ಲಿವೆ. ಅಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದದಿಂದ ವಂಚಿತರಾಗುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಗ್ರಾಮ ಪಂಚಾಯತಿ ಸ್ವಚ್ಛತಾಗಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ನಿರುದ್ಯೋಗ, ಬಡತನ, ಹಸಿವು ದೇಶದಾದ್ಯಂತ ತಾಂಡವವಾಡುತ್ತಿದೆ. ಬಡ ರೈತ ಕಾರ್ಮಿಕರು, ಮಧ್ಯಮವರ್ಗದ‌ ಜನತೆ ತುಳಿತಕ್ಕೊಳಪಡುತ್ತಿದ್ದಾರೆ. ಕುಸಂಸ್ಕೃತಿ ತೀವ್ರವಾಗಿದ್ದು, ಚಿಕ್ಕ ಮಕ್ಕಳಿಂದ ಹಿಡಿದು ವಯೋವೃದ್ಧರ ಮೇಲೆ ಅತ್ಯಾಚಾರದ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಎಂಥದ್ದೇ ಅನ್ಯಾಯವನ್ನೂ ಪ್ರಶ್ನಿಸುತ್ತಿದ್ದ ವಿದ್ಯಾಸಾಗರರ ಆದರ್ಶಗಳನ್ನು ಮೈಗೂಡಿಸಿಕೊಂಡು ಇಂದಿನ ಸಾಮಾಜಿಕ ಪಿಡುಗುಗಳ ವಿರುದ್ಧ ಬಲಿಷ್ಠ ಚಳುವಳಿ ಕಟ್ಟಲು ಮುನ್ನುಗ್ಗಬೇಕಿದೆ. ಆಗ ಮಾತ್ರ ನಾವು ವಿದ್ಯಾಸಾಗರರಿಗೆ ನೈಜ ಗೌರವವನ್ನು ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X