ಯಾದಗಿರಿ | ಸಿಬ್ಬಂದಿಗಳ ನಿರ್ಲಕ್ಷ್ಯ; ಕಸದ ತೊಟ್ಟಿಯಂತಾದ ಬಾಲಕರ ವಸತಿ ನಿಲಯ

Date:

Advertisements

ಯಾದಗಿರಿ ನಗರದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯವು ಮೂಲ ಸೌಕರ್ಯಗಳ ಕೊರತೆಯ ಜತೆಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆಯಿಲ್ಲದೆ ಕಸದ ತೊಟ್ಟಿಯಂತಾಗಿದೆ ಎಂದು ಆರೋಪಿಸಲಾಗುತ್ತಿದೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತ ರಾಹುಲ್ ಕೊಲ್ಲೂರಕರ್ ಈದಿನದೊಂದಿಗೆ ಮಾತನಾಡಿ, “ವಸತಿ ನಿಲಯದಲ್ಲಿ ಮೂಲ ಸೌಕರ್ಯಗಳೇ ಇಲ್ಲ. ನಿಲಯದ ವಿದ್ಯಾರ್ಥಿಗಳಿಗೆ ಮದ್ಯಾಹ್ನದ ಊಟವನ್ನೂ ಸಮಯಕ್ಕೆ ಸರಿಯಾಗಿ ಕೊಡುತ್ತಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಸಂಬಂಧಪಟ್ಟವರು ಈ ಸಂಬಂಧ ಕ್ರಮ ಕೈಗೊಳ್ಳಬೇಕು” ಎಂದರು.

“ವಸತಿ ನಿಲಯದ ಕೆಲ ವಿದ್ಯಾರ್ಥಿಗಳು ಗುಟ್ಕಾ, ಧೂಮಪಾನ, ಮದ್ಯಪಾನದಂತ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಇದು ಗನಮನದಲ್ಲಿದ್ದರೂ ಹಾಸ್ಟೆಲ್‌ ವಾರ್ಡನ್ ಮಾತ್ರ ಕಂಡೂ ಕಾಣದಂತೆ ಇದ್ದಾರೆ. ವಸತಿ ನಿಲಯದ ಆವರಣವು ಅವ್ಯವಸ್ಥೆಯ ಆಗರವಾಗಿದೆ. ವಸತಿ ನಿಲಯದ ತುಂಬೆಲ್ಲಾ ಅನ್ನ, ಸಾಂಬಾರ್ ಚೆಲ್ಲಾಪಿಲ್ಲಿಯಾಗಿರುವ ದೃಶ್ಯ ಕಾಣಿಸುತ್ತದೆ” ಎಂದು ದೂರಿದರು.

Advertisements
WhatsApp Image 2025 07 30 at 8.57.04 PM

“ವಸತಿ ನಿಲಯಕ್ಕೆ ಊಟದ ಹಾಲ್, ಕಾರ್ಟ್ ಗಾದಿಗೆ, ಸಮರ್ಪಕ ಲೈಟ್, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿಕೋಡಬೇಕೆಂದು” ಆಗ್ರಹಿಸಿದರು.

ಇದನ್ನೂ ಓದಿ: ಯಾದಗಿರಿ | ಈಶ್ವರಚಂದ್ರ ವಿದ್ಯಾಸಾಗರ್ 134ನೇ ಸ್ಮರಣ ದಿನಾಚರಣೆ

“ಹಾಸ್ಟೆಲ್‌ನಲ್ಲಿ ಇಷ್ಟೆಲ್ಲಾ ಅನಾಚಾರಗಳು ನಡೆಯುತ್ತಿದ್ದರೂ ತನಗೆ ಸಂಬಂಧವಿಲ್ಲವೆನ್ನುವಂತೆ ಇರುವ ವಾರ್ಡನ್ನನ್ನು ಕೂಡಲೇ ಅಮಾನತು ಮಾಡಬೇಕು” ಮನವಿ ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚನ್ನಬಸಪ್ಪ ಮಾತನಾಡಿ, “ಮಾಹಿತಿ ತಿಳಿದಿದೆ. ವಾರ್ಡನ್ ಅವರಿಗೆ ಸ್ವಚ್ಛತೆ ಕಾಪಾಡಿಕೊಳ್ಳಲು ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ಸೂಚಿಸಿರುವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X