ಚಿಕ್ಕಬಳ್ಳಾಪುರ | ಕಾರ್ಗಿಲ್ ಯುದ್ಧದಲ್ಲಿ ಅಂಗವೈಕಲ್ಯ: ಜಮೀನಿಗಾಗಿ ಮಾಜಿ ಸೈನಿಕರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

Date:

Advertisements

ಕಾರ್ಗಿಲ್ ಯುದ್ಧದಲ್ಲಿ ಕಾಲು ಕಳೆದುಕೊಂಡಿರುವ ಮಾಜಿ ಸೈನಿಕರೊಬ್ಬರು ಸರ್ಕಾರದಿಂದ ಜಮೀನು ನೀಡುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ತಮ್ಮ ಪತ್ನಿ, ಮಕ್ಕಳ ಸಹಿತ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸ ಸತ್ಯಾಗ್ರಹಕ್ಕೆ ಮಾಜಿ ಸೈನಿಕರ ಸಂಘವೂ ಸಾಥ್ ನೀಡಿ ಅವರೂ ಕೂಡಾ ಧರಣಿ ಕುಳಿತಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿಯ ರಾಯಪಲ್ಲಿ ಗ್ರಾಮದ ಶಿವಾನಂದರೆಡ್ಡಿ ಸುಮಾರು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಗಡಿ ಭಾಗದಲ್ಲಿ ನಡೆದ ಅಪಘಾತದಿಂದಾಗಿ ಅವರು ಅಂಗವಿಕಲರಾಗಿದ್ದು, ಕಾಲಿಗೆ ತೀವ್ರ ಪೆಟ್ಟಾಗಿ ಸೇನೆಯಿಂದ ಕಡ್ಡಾಯ ನಿವೃತ್ತಿ ಪಡೆದ ಮಾಜಿ ಯೋಧ. ಇವರು ಕಾಲಿಗೆ ಪೆಟ್ಟುಬಿದ್ದು, ನಿವೃತ್ತಿಯಾದ ಹಿನ್ನೆಲೆಯಲ್ಲಿ ಸೇನೆಯಿಂದಲೇ ಜಮೀನು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹಾಗೆ ಸೂಚಿಸಿ ಎರಡೂವರೆ ದಶಕವೇ ಕಳೆದರೂ ಕೂಡ ಇವರಿಗೆ ಸರ್ಕಾರದಿಂದ ಸಿಗಬೇಕಾದ ಜಮೀನು ಸಿಕ್ಕಿಲ್ಲ. ಇದು ನಮ್ಮ ದೇಶದ ಮಾಜಿ ಯೋಧರೊಬ್ಬರಿಗೆ ನಮ್ಮ ಆಡಳಿತ ನೀಡಿರುವ ಗೌರವ.

“ತನಗೆ ಸರ್ಕಾರದಿಂದ ಸಿಗಬೇಕಾದ ಜಮೀನಿಗಾಗಿ ಕಳೆದ 24 ವರ್ಷಗಳಿಂದ ಹೋರಾಟ ನಡೆಸಿದ್ದು, ಮುಖ್ಯಮಂತ್ರಿ, ಸಚಿವರು, ಜಿಲ್ಲಾಧಿಕಾರಿಗಳು ಸ್ಥಳೀಯ ಅಧಿಕಾರಿಗಳ ಗಮನಕ್ಕೂ ತಂದಿದ್ದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಇದರಿಂದ ಬೇಸತ್ತಿದ್ದು, ಉಪವಾಸ ಸತ್ಯಾಗ್ರಹವನ್ನು ಆರಂಭಿಸಲಾಗಿದೆ. ತಾಲೂಕು ದಂಡಾಧಿಕಾರಿ ಸುದರ್ಶನ್ ಯಾದವ್ ಅವರು ಧರಣಿ ಸ್ಥಳಕ್ಕೆ ಆಗಮಿಸಿದ್ದು, ಮಾಜಿ ಸೈನಿಕರೊಂದಿಗೆ ಮಾತುಕತೆ ನಡೆಸಿ ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಮನವಿ ಮಾಡಿದರು. ಆದರೆ ಮೊದಲು ಜಮೀನು ಮಂಜೂರು ಮಾಡಿರುವ ಆದೇಶ ಪತ್ರವನ್ನು ಕೊಡಿ ಬಳಿಕ ಉಪವಾಸ ಸತ್ಯಾಗ್ರಹ ಕೈಬಿಡುತ್ತೇವೆ” ಎಂದು ಮಾಜಿ ಸೈನಿಕರು ಪಟ್ಟು ಹಿಡಿದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕೋಲಾರ | ಆ.17ರಂದು ವೇಮಗಲ್‌, ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ: ಜಿಲ್ಲಾಧಿಕಾರಿ ಎಂ ಆರ್‌ ರವಿ

ದಂಡಾಧಿಕಾರಿಗಳು ಪ್ರತಿಕ್ರಿಯಿಸಿದ್ದು, ಈಗಾಗಲೇ ಜಮೀನು ಮಂಜೂರು ಮಾಡಿಕೊಡಲು ಚಿಕ್ಕಬಳ್ಳಾಪುರ ಜಿಲ್ಲಾ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಂದ ಪ್ರಸ್ತಾವನೆ ಬಂದಿಲ್ಲವೆಂದು ಹೇಳಿದಾಗ, ಮಾಜಿ ಸೈನಿಕರು ಜಿಲ್ಲಾಧಿಕಾರಿಗಳೇ ಇಲ್ಲಿಗೆ ಬರಲಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ನಿರ್ಣಯ ತೆಗೆದುಕೊಳ್ಳುತ್ತೇವೆಂದು ಹೇಳಿ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X