ಬಿಬಿಎಂಪಿ ಬಾಕಿ ಬಿಲ್ | ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ: ಗುತ್ತಿಗೆದಾರರ ಸಂಘ

Date:

Advertisements
  • ಸಾಲದ ಸುಳಿಗೆ ಸಿಲುಕುತ್ತಿರುವ ಗುತ್ತಿಗೆದಾರರು
  • ಬಿಲ್ ಪಾವತಿ ಮಾಡದಿದ್ದರೆ ಉಗ್ರ ಹೋರಾಟ

“ಪ್ರಸಕ್ತ ಸಾಲಿನಲ್ಲಿ ತೆರಿಗೆ ಹಣ ಸುಮಾರು ₹2 ಸಾವಿರ ಕೋಟಿ ಲಭ್ಯವಿದ್ದರೂ ಸಹ ಬಾಕಿ ಬಿಲ್ ಪಾವತಿ ಮಾಡಲು ಬಿಬಿಎಂಪಿ ಮೀನಾಮೇಷ ಮಾಡುತ್ತಿದೆ. ಇದರ ಬಗ್ಗೆ ಗುತ್ತಿಗೆದಾರರಿಗೆ ಸ್ಪಷ್ಟನೆ ನೀಡಬೇಕು” ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಆರೋಪಿಸಿದರು.

ಬೆಂಗಳೂರಿನ ಪ್ರೆಸ್‌ಕ್ಲಬ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರಸಕ್ತ ಸಾಲಿನಲ್ಲಿಯೇ (2023-24) ಬಿಬಿಎಂಪಿಗೆ ಸುಮಾರು 2 ಸಾವಿರ ಕೋಟಿ ತೆರಿಗೆ ಹಣ ಬಂದಿದೆ. ಗುತ್ತಿಗೆದಾರರು ಕಳೆದ 26 ತಿಂಗಳಿನಿಂದ ನಿರ್ವಹಿಸಿದ ಕಾಮಗಾರಿಗಳಿಗೆ ಇನ್ನೂ ಹಣ ಪಾವತಿ ಮಾಡಿಲ್ಲ. ತೆರಿಗೆ ಹಣ ಇದ್ದರೂ ಯಾಕೆ ಹಣ ಬಿಡುಗಡೆ ಮಾಡಿಲ್ಲ ಎಂಬ ಬಗ್ಗೆ ಸ್ಪಷ್ಟನೆ ನೀಡಬೇಕು” ಎಂದರು.  

“ಪಾಲಿಕೆಗೆ ರಾಜ್ಯ ಸರ್ಕಾರದ ಅನುದಾನ ₹675 ಕೋಟಿ ಸಂದಾಯವಾಗಿ ಮೂರು ತಿಂಗಳು ಕಳೆದಿವೆ. ನಡೆದ ಕಾಮಗಾರಿಗಳಿಗೆ ಇನ್ನೂ ಹಣ ಪಾವತಿಯಾಗಿಲ್ಲ. ಇದರ ಹಿಂದೆ ಏನೋ ಷಡ್ಯಂತ್ರವಿದೆ. ಗುತ್ತಿಗೆದಾರರಿಗೆ ಬಿಲ್ ಪಾವತಿಯಾಗದ ಕಾರಣ ಸಾಲದ ಸುಳಿಗೆ ಸಿಲುಕುವಂತಾಗಿದೆ. ಹಾಗಾಗಿ, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಪತ್ರ ಬರೆದಿದ್ದೇವೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಎಲ್ಲ ವಿಧದ ಔಷಧಿ ಎಲ್ಲರಿಗೂ ಉಚಿತವಾಗಿ ಸಿಗಬೇಕು: ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕ

“ಗುತ್ತಿಗೆದಾರರಿಗೆ ಆದಷ್ಟು ಬೇಗ ಬಾಕಿ ಬಿಲ್ ಪಾವತಿ ಮಾಡಬೇಕು. ಇಲ್ಲದಿದ್ದರೆ, ಉಗ್ರ ಹೋರಾಟ ನಡೆಸಲಾಗುವುದು. ಹಣಕಾಸು ಮುಗ್ಗಟ್ಟಿನಿಂದ ಗುತ್ತಿಗೆದಾರರಿಗೆ ಅನಾಹುತ ಸಂಭವಿಸಿದರೆ, ಇದರ ಜವಾಬ್ದಾರಿಯನ್ನು ಮುಖ್ಯ ಆಯುಕ್ತರು ಹೊಣೆ ಹೊರಬೇಕಾಗುತ್ತದೆ” ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X