‘ಎಲ್ಲರ ಬೆಂಗಳೂರು’ ಆಗಲು ಸವಾಲು, ಸಾಧ್ಯತೆಗಳೇನು? ಆ.2ರಂದು ಜಾಗೃತ ಕರ್ನಾಟಕದಿಂದ ಕಾನ್‌ಕ್ಲೇವ್‌

Date:

Advertisements

ಬೆಂಗಳೂರು ನಗರವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ನಗರದಲ್ಲಿ ಹಲವಾರು ವರ್ಗಗಳು, ಸಮುದಾಯಗಳು ಒಟ್ಟಿಗೆ ಬದುಕು ಕಟ್ಟಿಕೊಳ್ಳುತ್ತಿವೆ. ಆದರೆ, ನಗರದಲ್ಲಿರುವ ಎಲ್ಲರಿಗೂ ಬೆಂಗಳೂರು ನಮ್ಮದು ಅನ್ನಿಸಬಹುದೇ? ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳೇನು- ಅವುಗಳ ಪರಿಹಾರಕ್ಕೆ ಇರುವ ಸಾಧ್ಯತೆಗಳು ಯಾವುದು ಎಂಬುದನ್ನು ಚರ್ಚಿಸಲು ‘ಜಾಗೃತ ಕರ್ನಾಟಕ’ ಸಂಘಟನೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಜಾಗೃತ ಕರ್ನಾಟಕದ ಮುಖಂಡ ರಾಜಶೇಖರ್ ಅಕ್ಕಿ, “‘ಎಲ್ಲರಿಗೂ ಇದು ನಮ್ಮ ಬೆಂಗಳೂರು ಆಗಲು ಇರುವ ಸವಾಲುಗಳು ಮತ್ತು ಸಾಧ್ಯತೆಗಳು’ ಎಂಬ ವಿಷಯ ಕುರಿತ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು ಆಗಸ್ಟ್‌ 2ರ ಶನಿವಾರ ಮಧ್ಯಾಹ್ನ 2.30ರಿಂದ 6.30ವರೆಗೆ, ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆ, Institute of Agricultural Technologies (IAT)ಯಲ್ಲಿ ನಡೆಯಲಿದೆ” ಎಂದು ತಿಳಿಸಿದ್ದಾರೆ.

“ಬೆಂಗಳೂರಿನಲ್ಲಿ ಹಲವಾರು ವರ್ಗಗಳು, ಸಮುದಾಯಗಳು ಎದುರಿಸುತ್ತಿರುವ ನಿಜವಾದ ಸಮಸ್ಯೆಗಳೇನು? ಇಲ್ಲಿ ಬದುಕು ಕಟ್ಟಿಕೊಳ್ಳಲು ಯಾರಿಗೆ ಎಷ್ಟು ಸಾಧ್ಯವಾಗುತ್ತಿದೆ? ಬೆಂಗಳೂರು ಒಂದು ಸಮುದಾಯವಾಗಿದೆಯೇ? ಈ ನಗರಕ್ಕೊಂದು ವ್ಯಕ್ತಿತ್ವವಿದೆಯೇ? ಇಲ್ಲಿ ಖಿನ್ನತೆ, ಅನಾಥಭಾವ, ಅನ್ಯ ಭಾವಗಳು ಹೆಚ್ಚಾಗುತ್ತಿವೆಯೇ, ಕಡಿಮೆಯಾಗುತ್ತಿವೆಯೇ? ಮುಂತಾದ ಮೂಲಭೂತ ಸಮಸ್ಯೆಗಳು. ಸವಾಲುಗಳು ಹಾಗೂ ಸಂಭಾವ್ಯ ಉತ್ತರಗಳ ಬಗ್ಗೆ ಗಹನವಾದ ಚರ್ಚೆಯನ್ನು ನಡೆಸಲಿದ್ದೇವೆ” ಎಂದು ವಿವರಿಸಿದ್ದಾರೆ.

Advertisements
ಬೆಂಗಳೂರು121

“ಕಾರ್ಯಕ್ರಮದಲ್ಲಿ ಮೂರು ಗೋಷ್ಠಿಗಳು ನಡೆಯಲಿದ್ದು, ಮೊದಲ ಗೋಷ್ಠಿಯಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ವಿವಿಧ ಸಮುದಾಯಗಳ ಕುರಿತ ಚರ್ಚೆ ನಡೆಯಲಿದೆ. ಗೋಷ್ಠಿಯಲ್ಲಿ ವಕೀಲ ವಿನಯ್ ಶ್ರೀನಿವಾಸ್, ಸ್ಲಂ ಜನಾಂದೋಲನ ಕರ್ನಾಟಕದ ನರಸಿಂಹಮೂರ್ತಿ, ಒಳಮೀಸಲಾತಿ ಹೋರಾಟಗಾರ ಬಸವರಾಜ ಕೌತಾಳ, ವಿಷನ್ ಟ್ರಸ್ಟ್‌ನ ಶಾನ್ ಅಹದ್ ವಿಷಯ ಮಂಡನೆ ಮಾಡಲಿದ್ದಾರೆ” ಎಂದು ಅಕ್ಕಿ ತಿಳಿಸಿದ್ದಾರೆ.

“2ನೇ ಗೋಷ್ಠಿಯಲ್ಲಿ ‘ಬೆಂಗಳೂರಿನ ಮಾನಸಿಕ ಆರೋಗ್ಯ, ಸವಾಲುಗಳು ಮತ್ತು ಸಾಧ್ಯತೆಗಳು’ ವಿಷಯದ ಮೇಲೆ ಮಾನಸಿಕ ಆರೋಗ್ಯ ತಜ್ಞರಾದ ಪಾದಸ್ ಶರ್ಮ ವಿಚಾರ ಮಂಡನೆ ಮಾಡಲಿದ್ದಾರೆ. ‘ನಗರ ಯೋಜನೆ ಮತ್ತು ಆಡಳಿತದ ತಜ್ಞರು ನಗರ ಯೋಜನೆ ಹೇಗಿರಬಹುದು’ ಎಂಬುದನ್ನು ಚಂಪಕ ರಾಜಗೋಪಾಲ್ ಮಂಡಿಸಲಿದ್ದಾರೆ. ‘ಎಲ್ಲರಿಗೂ ಆಗುವ ಅಭಿವೃದ್ಧಿ’ ವಿಷಯದ ಮೇಲೆ ನಗರ ನೀತಿ ತಜ್ಞರು ಮತ್ತು ಸಂಶೋಧಕರಾದ ಮ್ಯಾಥ್ ಇಡಿಕುಲ ಮಾತನಾಡಲಿದ್ದಾರೆ” ಎಂದು ವಿವರಿಸಿದ್ದಾರೆ.

“ಮೂರನೇ ಗೋಷ್ಠಿಯಲ್ಲಿ ‘ರಾಜಕೀಯ ಮತ್ತು ಸಾಮಾಜಿಕ ಸಂಘಟಿಸುವಿಕೆ’ ಕುರಿತ ಚರ್ಚೆಗಳು ನಡೆಯಲಿವೆ. ಈ ಸಂವಾದದಲ್ಲಿ ಜಯನಗರ ಮಾಜಿ ಶಾಸಕಿ ಸೌಮ್ಯ ರೆಡ್ಡಿ, ರಾಜರಾಜೇಶ್ವರಿ ನಗರದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಕುಸುಮ ಹನುಮಂತರಾಯಪ್ಪ ಭಾಗಿಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X