ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂದು PM,FM ಹೊರತಾಗಿ ಎಲ್ಲರಿಗೂ ಗೊತ್ತಿದೆ: ರಾಹುಲ್ ಗಾಂಧಿ

Date:

Advertisements

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಹೊರತುಪಡಿಸಿ ಉಳಿದೆಲ್ಲರಿಗೂ ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂಬುದು ಮನವರಿಕೆಯಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಆರ್ಥಿಕತೆ, ರಕ್ಷಣಾ ವಲಯ ಮತ್ತು ವಿದೇಶಾಂಗ ನೀತಿಗಳನ್ನು ನಾಶಗೊಳಿಸಿದೆ ಎಂದು ಅವರು ಆರೋಪಿಸಿದರು.

ಸಂಸತ್ ಭವನದ ಆವರಣದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ‘ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಯಸಿದಂತೆ ವ್ಯಾಪಾರ ಒಪ್ಪಂದ ಏರ್ಪಡಲಿದೆ. ಟ್ರಂಪ್ ಹೇಳಿದನ್ನೆಲ್ಲ ಪ್ರಧಾನಿ ಮೋದಿ ಮಾಡಲಿದ್ದಾರೆ’ ಎಂದು ಹೇಳಿದ್ದಾರೆ.

Advertisements

ಭಾರತದಿಂದ ಅಮೆರಿಕಕ್ಕೆ ಆಮದಾಗುವ ಎಲ್ಲ ಸರಕುಗಳ ಮೇಲೆ ಆಗಸ್ಟ್‌ 1ರಿಂದ ಶೇಕಡ 25ರಷ್ಟು ಸುಂಕ ವಿಧಿಸಲಾಗುತ್ತದೆ ಎಂದು ಘೋಷಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬಳಿಕ ಭಾರತದ ಆರ್ಥಿಕತೆ ನೆಲಕಚ್ಚಿದೆ ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ‘ಅವರು (ಟ್ರಂಪ್) ಸರಿಯಾಗಿಯೇ ಹೇಳಿದ್ದಾರೆ. ಭಾರತದ ಪ್ರಧಾನಿ, ಹಣಕಾಸು ಸಚಿವರನ್ನು ಹೊರತುಪಡಿಸಿ ಎಲ್ಲರಿಗೂ ಈ ವಿಚಾರ ತಿಳಿದಿದೆ. ಅಮೆರಿಕ ಅಧ್ಯಕ್ಷರು ಸತ್ಯವನ್ನು ಹೇಳಿದ್ದಕ್ಕಾಗಿ ನನಗೆ ಸಂತೋಷವಾಗಿದೆ’ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಇರಾನ್‌ನಿಂದ ತೈಲ ಆಮದು ಆರೋಪ: ಭಾರತದ ಆರು ಕಂಪನಿಗಳ ಸೇರಿ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ

‘ಕೋಟ್ಯಧಿಪತಿ ಗೌತಮ್ ಅದಾನಿ ಅವರಿಗೆ ಸಹಾಯ ಮಾಡುವುದಕ್ಕಾಗಿ ದೇಶದ ಆರ್ಥಿಕತೆಯನ್ನು ಬಿಜೆಪಿ ನಾಶಗೊಳಿಸಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಭಾರತದ ವಿದೇಶಾಂಗ ನೀತಿ ಅದ್ಭುತ ಎಂದು ವಿದೇಶಾಂಗ ಸಚಿವರು ಭಾಷಣ ಮಾಡುತ್ತಾರೆ. ಆದರೆ ಒಂದೆಡೆ ಅಮೆರಿಕ ನಿಂದಿಸುತ್ತಿದ್ದು, ಮತ್ತೊಂದೆಡೆ ಚೀನಾ ಸಹ ಬೆನ್ನಟ್ಟುತ್ತಿದೆ. ಮೂರನೇಯದಾಗಿ ವಿದೇಶಗಳಿಗೆ ನಿಯೋಗಗಳನ್ನು ಕಳುಹಿಸಿದಾಗ ಯಾವುದೇ ರಾಷ್ಟ್ರವು ಪಾಕಿಸ್ತಾನವನ್ನು ಖಂಡಿಸಿಲ್ಲ. ಅವರಿಗೆ ದೇಶವನ್ನು ಮುನ್ನಡೆಸಲು ಗೊತ್ತಿಲ್ಲ’ ಎಂದು ರಾಹುಲ್ ಉಲ್ಲೇಖಿಸಿದ್ದಾರೆ.

‘ಭಾರತ ಹಾಗೂ ಪಾಕಿಸ್ತಾನ ನಡುವೆ ಕದನ ವಿರಾಮ ಮಾಡಿದ್ದೇನೆ ಎಂದು ಟ್ರಂಪ್ 20 ಸಲ ಹೇಳಿದ್ದಾರೆ. ಭಾರತಕ್ಕೆ ಐದು ಯುದ್ಧ ವಿಮಾನ ನಷ್ಟವಾಗಿದೆ ಎಂದೂ ಹೇಳಿದ್ದಾರೆ. ಈಗ ಭಾರತದ ಮೇಲೆ ಶೇ 25ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ. ಇವೆಲ್ಲದಕ್ಕೂ ಪ್ರಧಾನಿ ಮೋದಿ ಏಕೆ ಉತ್ತರ ನೀಡುತ್ತಿಲ್ಲ? ಅವರಿಗೆ ಭಯ ಏಕೆ ಕಾಡುತ್ತಿದೆ’ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X