ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ದಾಳಿ ಹೆಚ್ಚಾಗಿದ್ದು, ದಿನನಿತ್ಯ ಮಾನವ ಪ್ರಾಣಿ ಸಂಘರ್ಷದಿಂದ ಜನ ಜೀವನಕ್ಕೆ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಕಾಡುಪ್ರಾಣಿಗಳ ಅದರಲ್ಲೂ ಆನೆ ದಾಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕಾಡಾನೆ ದಾಳಿಯಿಂದ ಜನರು ಸಾವನಪ್ಪುತ್ತಿದ್ದಾರೆ. ಆನೆಗಳ ಸಂತತಿ ವೇಗವಾಗಿ ಬೆಳೆಯುತ್ತಿದ್ದು, ಕಾಡಾನೆಗಳು ರೈತಾಪಿ ವರ್ಗದ ಬೆಳೆ ಮಾತ್ರವಲ್ಲ, ಕೃಷಿ ಕಾರ್ಯದಲ್ಲಿ ನಿರತರಾದ ರೈತರನ್ನು ಹತ್ಯೆ ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಒಟ್ಟಾಗಿ ಆನೆಗಳ ನಿಯಂತ್ರಣ ಮತ್ತು ಆನೆ ದೊಡ್ಡಿಗಳ ನಿರ್ಮಾಣದ ಶಾಶ್ವತ ಪರಿಹಾರದ ಯೋಜನೆ ರೂಪಿಸಬೇಕೆಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ
ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿಯವರಿಗೆ ಸಲಹೆ ನೀಡಿ ಸೂಕ್ತ ವರದಿ ಪಡೆದು ಜಂಟಿ ಕಾರ್ಯಯೋಜನೆ ಯಾರಿಸಿ, ಕಾಡಾನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ