ಅಂಬೇಡ್ಕರ್, ಸಂವಿಧಾನದ ಬಗ್ಗೆ ಅವಹೇಳನ ಆರೋಪ: ನಟ ಪ್ರಥಮ್ ಮುಖಕ್ಕೆ ಮಸಿ ಬಳಿದು ಆಕ್ರೋಶ

Date:

Advertisements

ನಟ ದರ್ಶನ್ ಅಭಿಮಾನಿಗಳು ಹಾಗೂ ಆತನ ಸಹಚರರು ಜೈ ಡಿ ಬಾಸ್ ಎಂದು ಕೂಗುತ್ತಾ ತನಗೆ ಚಾಕು ಚುಚ್ಚಲು ಬಂದಿದ್ದರು ಎಂದು ಆರೋಪಿಸಿ ದೂರು ಕೊಟ್ಟ ಬಗ್ಗೆ ಹೇಳಿಕೆ ದಾಖಲಿಸಲು ಹೋಗಿದ್ದ ನಟ ಪ್ರಥಮ್ ಮುಖಕ್ಕೆ ದಲಿತ ಸಂಘಟನೆಯ ಹೋರಾಟಗಾರರು ಮಸಿ ಬಳಿದಿರುವ ಘಟನೆ ಗುರುವಾರ ಸಂಜೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಪೊಲೀಸ್ ಠಾಣೆ ಮುಂದೆಯೇ, ಹಲವು ಪೊಲೀಸರ ಎದುರಿನಲ್ಲಿಯೇ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ.

1001588332

ಪೊಲೀಸ್ ಠಾಣೆಯ ಮುಂದೆ ಬಂದಿದ್ದ ಪ್ರಥಮ್, ಒಂದು ನಿಮಿಷ ಮಾತನಾಡುತ್ತೇನೆ ಎನ್ನುತ್ತಿರುವಾಗಲೇ ಕರ್ನಾಟಕ ಭೀಮ್ ಸೇನೆ ಸಂಘಟನೆಯ ರಾಜ್ಯ ಕಾರ್ಯದರ್ಶಿ ಮಂಜು ರಾವಣ್, ಕೈಯಲ್ಲಿದ್ದ ಮಸಿಯನ್ನು ಮುಖಕ್ಕೆ ಬಳಿದಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಸ್ಥಳದಲ್ಲಿಯೇ ಇದ್ದ ಪೊಲೀಸರು, ಇನ್ನಷ್ಟು ದಾಳಿಯಾಗುವುದನ್ನು ತಡೆದಿದ್ದಾರೆ.

Advertisements

‘ಅಂಬೇಡ್ಕರ್ ಅವರನ್ನು ಅವಮಾನ ಮಾಡುವವರನ್ನು ಬಿಡುವುದಿಲ್ಲ. ಮಸಿ ಬಳಿದಿದ್ದಕ್ಕೆ ನಮ್ಮ ಮೇಲೆ ದೂರು ದಾಖಲಿಸಿದರೂ ಹೆದರುವುದಿಲ್ಲ. ನಟ ಪ್ರಥಮ್ ವಿರುದ್ಧ ಕೂಡ ಎಫ್‌ಐಆರ್ ದಾಖಲಿಸಿಬೇಕು’ ಎಂದು ಮಸಿ ಬಳಿದ ಮಂಜು ಪೊಲೀಸರೆದರು ತಿಳಿಸಿದ್ದಾರೆ.

“ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ ಸಣ್ಣ ಪುಟ್ಟ ತಪ್ಪುಗಳಿವೆ. ನಾನು ಸತ್ತು ಸ್ವರ್ಗ ಸೇರಿದ ಬಳಿಕ ಈ ಬಗ್ಗೆ ಬಾಬಾ ಸಾಹೇಬರ ಜೊತೆ ಚರ್ಚೆ ಮಾಡಬೇಕು” ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಟ ಪ್ರಥಮ್ ಹೇಳಿಕೆ ನೀಡಿರುವುದಾಗಿ ದಲಿತ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.

ಈ ಹೇಳಿಕೆಯು ಸಂವಿಧಾನದ ಬಗ್ಗೆ ಹಾಗೂ ಅಂಬೇಡ್ಕರ್ ಅವರ ಬಗ್ಗೆ ಮಾಡಿರುವ ಅವಮಾನ ಎಂದು ಆರೋಪಿಸಿದ ದಲಿತ ಸಂಘಟನೆಯ ಮುಖಂಡರು, ಪ್ರಥಮ್ ವಿರುದ್ಧ ದೂರು ದಾಖಲಿಸಿ, ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X