ಕಲಬುರಗಿ | ರಸ್ತೆ ಗುಂಡಿ ಮುಚ್ಚಲು ಜಯ ಕರ್ನಾಟಕ ಸಂಘಟನೆ ಆಗ್ರಹ

Date:

Advertisements

ಜೀವರ್ಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಬಿದ್ದಿರುವ ತಗ್ಗು, ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಪದಾಧಿಕಾರಿಗಳು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಗಾಯ್ ಶಾಲೆಯ ಮುಂದಿನ ರಸ್ತೆ, ಎಚ್‌ಡಿಎಫ್‌ಸಿ ಬ್ಯಾಂಕ್ ಎದುರುಗಡೆ ಹಾಗೂ ಅಂಬೇಡ್ಕರ್ ಪ್ರತಿಮೆ ಸೇರಿದಂತೆ ಮುಖ್ಯ ರಸ್ತೆಯ ನಾನಾ ಕಡೆ ತಗ್ಗು, ಗುಂಡಿ ಬಿದ್ದಿದ್ದು ವಾಹನ ಸವಾರರು ಓಡಾಡಲು ಪರದಾಡುವಂತಾಗಿದೆ. ಕೂಡಲೇ ರಸ್ತೆ ಗುಂಡಿ ಮುಚ್ಚಬೇಕೆಂದು ಒತ್ತಾಯಿಸಿದರು.

ತಗ್ಗು, ಗುಂಡಿಗಳಿಂದ ಹೆಚ್ಚಿನ ಅಪಘಾತಗಳಾಗುವ ಸಾಧ್ಯತೆಯಿದೆ. ಏನಾದರೂ ಅನಾಹುತ ಜರುಗಿದರೆ ಅದಕ್ಕೆ ಇಲಾಖೆಯೇ ನೇರ ಹೊಣೆಯಾಗುತ್ತದೆ. ನಿರ್ಲಕ್ಷಿಸದೆ ಕೂಡಲೇ ರಸ್ತೆ ದುರಸ್ತಿ ಮಾಡಬೇಕು. ಇಲ್ಲದಿದ್ದರೆ ಇಲಾಖೆ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದುʼ ಎಂದರು.

Advertisements

ಇದನ್ನೂ ಓದಿ : ಬೀದರ್‌ | ಜನರ ಸಮಸ್ಯೆಗಳಿಗೆ ಧ್ವನಿಯಾದ ಪತ್ರಿಕೆಗಳು : ಡಾ.ಭೀಮಾಶಂಕರ ಬಿರಾದಾರ

ಸಂಘಟನೆಯ ಭೀಮಶಂಕರ್ ಎಮ್. ಬಿಲ್ಲಾಡ, ನಾಟೀಕರ್, ವೀರೇಶ ನಾಯಕ, ಮಹಾಂತೇಶ ಹಾದಿಮನಿ, ಪರಮೇಶ್ವರ ನಾಯಕ ಬಿರಾಳ, ಆನಂದ ಗಾಜರೆ, ಆಕಾಶ ಬಿಲ್ಲಾಡ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X