ಶಿವಮೊಗ್ಗ | ನಿರ್ಮಿತಿ ಕೇಂದ್ರದ ನಿರ್ಲಕ್ಷ್ಯ; ಕ್ರಮ ಕೈಗೊಳ್ಳಲು ಮನವಿ

Date:

Advertisements

ಶಿವಮೊಗ್ಗದ ನಿರ್ಮಿತಿ ಕೇಂದ್ರಗಳು ಸಾರ್ವಜನಿಕ ಅನುದಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯ ತೋರುತ್ತಿರುವುದನ್ನು ಈದಿನ ನಿನ್ನೆ (ಜು.31) “ಶಿವಮೊಗ್ಗ | ನಿರ್ಮಿತಿ ಕೇಂದ್ರವನ್ನು ಸ್ವಂತ ಉದ್ದಿಮೆ ಮಾಡಿಕೊಂಡರೇ ಅಧಿಕಾರಿಗಳು?” ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಈ ವರದಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರತಿಕ್ರಿಯಿಸಿದ್ದಾರೆ.

“ಆರ್‌ಟಿಐ ಕಾಯ್ದೆಯಡಿಯಲ್ಲಿ ಮಾಹಿತಿಯನ್ನು ಯಾವಾಗಲೂ ಒದಗಿಸಲಾಗುತ್ತದೆ. ಇದರ ಬಗ್ಗೆ ಯಾವುದೇ ದೂರುಗಳಿದ್ದರೆ, ಮೇಲ್ಮನವಿ ಪ್ರಾಧಿಕಾರವು ಮೊದಲ ಪ್ರತಿವಾದಿಯು ಮಾಹಿತಿಯನ್ನು ನೀಡುವಂತೆ ಆದೇಶಿಸಬಹುದು. ಅರ್ಜಿದಾರರೂ ಕೂಡ ಆರ್‌ಟಿಐ ಕಾಯ್ದೆಯಡಿಯಲ್ಲಿ ಅಪ್ರಸ್ತುತ/ಅಸ್ಪಷ್ಟ ಮಾಹಿತಿ ಅಥವಾ ಯಾವುದೇ ವೈಯಕ್ತಿಕ ಮಾಹಿತಿಯನ್ನು ಕೇಳದಿರುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಈ ಲೇಖನದ ಶೀರ್ಷಿಕೆ ಮತ್ತು ವಿಷಯವು ದಾರಿತಪ್ಪಿಸುವಂತಿದೆ ಮತ್ತು ಯಾವುದೇ ವಿಷಯ ಅಥವಾ ಪುರಾವೆಗಳಿಲ್ಲದೆ ಅಧಿಕಾರಿಗಳನ್ನು ಆರೋಪಿಸುತ್ತದೆ” ಎಂದು ಆರೋಪಿಸಿದ್ದರು.

ಆದರೆ ಅರ್ಜಿದಾರರು ಆರ್‌ಟಿಐ ಕಾಯ್ದೆಯಡಿಯಲ್ಲಿ ಕೇಳಿರುವ ಮಾಹಿತಿಯ ದಾಖಲೆಗಳನ್ನು ಒದಗಿಸಿರುತ್ತದೆ. ಕಾಯ್ದೆಯಡಿಯಲ್ಲಿ ಕೇಳಬಹುದಾದ ಮಾಹಿತಿಗಳನ್ನೇ ಕೇಳಿದ್ದರೂ ನಿರ್ಮಿತಿ ಕೇಂದ್ರವು ಕುಂಟು ನೆಪ ಹೇಳಿಕೊಂಡು ಮಾಹಿತಿ ಒದಗಿಸಲು ನಿರ್ಲಕ್ಷ್ಯ ತೋರುತ್ತಿದೆ ಎಂದು ಅವರು ಆರೋಪಿಸಿದೆ. ಅದರ ದಾಖಲೆಗಳನ್ನೂ ಒದಗಿಸಿದೆ.

Advertisements

“ಇತ್ತೀಚೆಗೆ ಮಾಹಿತಿ ಆಯೋಗ ರುದ್ರಣ್ಣ ಹರ್ತಿಕೋಟಿ ಪೀಠವು ನಿರ್ಮಿತಿ ಕೇಂದ್ರದ ಶಿವಮೊಗ್ಗ ಇದರ ಪ್ರಕರಣವೊಂದರ ತೀರ್ಪಿನಲ್ಲಿ ಕಲಂ ೪ ರಡಿ ಎಲ್ಲ ದಸ್ತಾವೇಜುಗಳನ್ನು ಅಂದರೆ ಸೆಕ್ಷನ್ 4(1)(a) 4(1)(b) ರಡಿ ಅರವತ್ತು ದಿವಸಗಳೊಳಗೆ ಪ್ರಕಟಿಸಬೇಕೆಂದು ಆದೇಶಿಸಿತು. ಇದೀಗ ಅರವತ್ತು ದಿವಸಗಳು ಕಳೆದಿದ್ದು ನಿರ್ಮಿತಿ ಕೇಂದ್ರ ಪ್ರಕಟಣೆಯ ನಿರೀಕ್ಷೆಯಲ್ಲಿ ಅರ್ಜಿದಾರರಿದ್ದು. ಒಂದು ವೇಳೆ ಪ್ರಕಟಿಸದಿದ್ದರೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಾರೆ. ಮುಂದುವರೆದು ಕಲಂ ೪ ಅನ್ನು ಅನುಸರಿಸದೆ ಇದ್ದರೆ ಕಾನೂನು ಹೋರಾಟ ಮಾಡುವುದಾಗಿ ಅರ್ಜಿದಾರರು ತಿಳಿಸಿರುತ್ತಾರೆ”

ಈ ದಾಖಲೆಗಳನ್ನು ಪರಿಶೀಲಿಸಿ ಕಾನೂನು ಉಲ್ಲಂಘನೆ ಮಾಡುತ್ತಿರುವ ನಿರ್ಮಿತಿ ಕೇಂದ್ರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

raghavendra 1
+ posts

ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ರಾಘವೇಂದ್ರ
ರಾಘವೇಂದ್ರ
ರಾಘವೇಂದ್ರ ರವರು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಉಂಡಿಗನಾಳು ಗ್ರಾಮದವರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಬಿಎಸ್ಸಿ ಪದವಿ ಪಡೆದಿರುವ ಇವರು ಈದಿನ ಡಾಟ್ ಕಾಮ್ ಮಾಧ್ಯಮ ಸಂಸ್ಥೆಯಲ್ಲಿ ಕಳೆದ 2023 ರಿಂದ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆ, ರಾಜಕೀಯ ವಿಶ್ಲೇಷಣೆ,Anchoring, (ನಿರೂಪಣೆ) ವಿಶೇಷ ಸ್ಟೋರಿ ಹಾಗೂ ತನಿಖಾ ವರದಿಗಾರಿಕೆ ಮಾಡುವುದು ಇವರ ಅಚ್ಚು ಮೆಚ್ಚಿನ ಕ್ಷೇತ್ರ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X