ಚಿಂತಾಮಣಿ | ಬ್ಯಾಂಕ್‌ಗಳಲ್ಲಿ ಗೃಹಲಕ್ಷ್ಮಿ ಹಣಕ್ಕೆ ಕತ್ತರಿ; ರೈತ ಸಂಘದಿಂದ ಘೇರಾವು ಎಚ್ಚರಿಕೆ

Date:

Advertisements

ರಾಜ್ಯ ಸರ್ಕಾರ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರೈತ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಎರಡು ಸಾವಿರಾ ರೂ.ಹಣ ಜಮಾವಣೆ ಮಾಡುತ್ತದೆ. ಆದರೆ, ಬ್ಯಾಂಕಿನವರು ಆ ಹಣವನ್ನು ಹಿಡಿಯುತ್ತಿರುವುದನ್ನು ನಿಲ್ಲಿಸದಿದ್ದರೆ ಪ್ರತಿ ಬ್ಯಾಂಕಿಗೆ ಘೇರಾವು ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಚಿಂತಾಮಣಿ ನಗರದ ತಾಲೂಕು ಪಂಚಾಯತಿ ಕಚೇರಿಯಲ್ಲಿರುವ ಸಿ ಡಿ ಪಿ ಒ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ನಂತರ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ಕದಿರೇ ಗೌಡ, “ಸ್ಥಳೀಯ ಸಿ ಡಿ ಪಿ ಒ ಅಧಿಕಾರಿಗಳಿಗೆ ಗೃಹಲಕ್ಷ್ಮಿ ಹಣವನ್ನು ಬ್ಯಾಂಕಿನವರು ಪ್ರತಿ ತಿಂಗಳು ರೈತರ ಖಾತೆಯಿಂದ ಕತ್ತರಿಸುತ್ತಿರುವ ಬಗ್ಗೆ ಬಹಳಷ್ಟು ಬಾರಿ ಹೇಳಿದ್ದರೂ ಇಲ್ಲಿವರೆಗೆ ಯಾವುದೇ ರೀತಿ ಕ್ರಮ ವಹಿಸಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬ್ಯಾಂಕುಗಳ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಿ ಗೃಹಲಕ್ಷ್ಮಿ ಹಣ ಕತ್ತರಿಸದಂತೆ ಸೂಚನೆ ನೀಡದೆ ನಿರ್ಲಕ್ಷ ವಹಿಸಿದ್ದಾರೆ. ರೈತರು ಬ್ಯಾಂಕುಗಳಲ್ಲಿ ಕೃಷಿ ಸಾಲ ಹಾಗೂ ಇತರೆ ಸಾಲಗಳು ಪಡೆಯಲಾಗಿದೆ. ಆದರೆ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಬಿದ್ದ ತಕ್ಷಣ ಬ್ಯಾಂಕಿನವರು ಅದನ್ನು ಕತ್ತರಿಸಿ ರೈತರಿಗೆ ಬಹಳಷ್ಟು ತೊಂದರೆ ನೀಡುತ್ತಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಚಿಂತಾಮಣಿ | ನಿಮಿಷಾ ಪ್ರಿಯಾ ಪ್ರಕರಣ: ತಲಾಲ್ ಕುಟುಂಬದೊಂದಿಗೆ ಡಾ. ಸಿ ಕೆ ಮೌಲಾ ಶರೀಫ್ ಮಾತುಕತೆ

Advertisements

ಈ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸದಿದ್ದರೆ ಸಿ ಡಿ ಪಿ ಒ ಕಚೇರಿಗೂ ಸಹ ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡಲಾಗುವುದು ಎಂದು ವಿವರಿಸಿದರು.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ ರಘುನಾಥರೆಡ್ಡಿ ರಾಜ್ಯ ವಲಯ ಸದ್ಯಸ್ಯ ಯಲ್ಲಪ್ಪ, ಎಸ್ ವಿ ಗಂಗುಲಪ್ಪ ನಾಗರಾಜ್, ತಿಮ್ಮೇಗೌಡ, ಆನಂದರೆಡ್ಡಿ, ಜಿ ಎಂ ಕೊನಪ್ಪ, ನರಸಿಂಹ, ಮುನಿಯಪ್ಪ, ವೆಂಕಟರವಣಪ್ಪ, ವಿ ನಾಗರಾಜ್, ಕೆ ವಿ ರಾಮಪ್ಪ, ಕೆ ಎಂ ಶ್ರೀನಿವಾಸಪ್ಪ, ನಾರಾಯಣಸ್ವಾಮಿ, ಪಿ ನಾಗರಾಜ್, ಅಂಜಪ್ಪ, ಸೀತಾರಾಮ್ ರೆಡ್ಡಿ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X