ಮಂಡ್ಯ | 20ನೇ ಶತಮಾನದ ಚಳವಳಿಗಳು ಮರುಕಳಿಸಬೇಕಿದೆ: ಡಾ. ಹೆಚ್ ವಿ ವಾಸು

Date:

Advertisements

ಇತ್ತೀಚಿನ ದಿನಗಳಲ್ಲಿ ಮತ್ತೊಬ್ಬರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಾವೇಕೆ ಭಾಗಿಯಾಗಬೇಕು ಎಂಬ ಮನಸ್ಥಿತಿ ಹೆಚ್ಚಾಗಿದೆ. 20ನೇ ಶತಮಾನದಲ್ಲಿ ನಡೆಯುತ್ತಿದ್ದ ಸಂಘಟನೆ, ಚಳವಳಿ ಹಾಗೂ ಹೋರಾಟದ ಸ್ವರೂಪ ಇತ್ತೀಚಿನ ದಿನಗಳಲ್ಲಿ ಬದಲಾಗಿದೆ. ಆ ಚಳವಳಿಗಳು ಮರುಕಳಿಸಬೇಕಿದೆ ಎಂದು ಜಾಗೃತ ಕರ್ನಾಟಕದ ರಾಜ್ಯ ಸಂಚಾಲಕ ಡಾ. ಹೆಚ್‌ ವಿ ವಾಸು ಹೇಳಿದರು.

ಮಂಡ್ಯದ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಭತ್ತ ವೈವಿಧ್ಯ ಕೇಂದ್ರದಲ್ಲಿ ನಡೆದ ಗೋಷ್ಠಿಯಲ್ಲಿ ವಿಚಾರ ಮಂಡಿಸಿದ ಅವರು, ಗ್ರಾಮ ಮತ್ತು ಕೃಷಿ ಪ್ರಧಾನವಾದ ಮಂಡ್ಯದ ಅಭಿವೃದ್ಧಿ ಹೇಗೆ ಸಾಧ್ಯ ಎಂಬ ವಿಚಾರಗೋಷ್ಠಿಯ ಭಾಗವಾಗಿ ಸಂಘಟನೆ ಮತ್ತು ಅಭಿವೃದ್ಧಿಗೆ ರಾಜಕೀಯದ ಹೊಸ ದಾರಿಗಳು ಎಂಬ ವಿಚಾರ ಮಂಡಿಸಿದರು.

WhatsApp Image 2025 07 31 at 8.03.55 PM

“ಇನ್ನು ಧರಣಿ, ಪ್ರತಿಭಟನೆಗಳ ಬಗ್ಗೆ ಇತರ ಸಾರ್ವಜನಿಕರು ತಲೆಕೆಡಿಸಿಕೊಳ್ಳುವ ಸ್ಥಿತಿ ಈಗಿಲ್ಲ. ರಾಜಕೀಯ ಪಕ್ಷಗಳು, ಅಧಿಕಾರದಲ್ಲಿರುವವರು, ಧರಣಿ ಪ್ರತಿಭಟನೆಗಳು ನಡೆಯದಂತೆ ಸಮಸ್ಯೆಗಳನ್ನು ಬಗೆಹರಿಸಬೇಕಾದವರೇ ಧರಣಿ-ಪ್ರತಿಭಟನೆಗಳಿಗೆ ಅನುಮತಿ ನೀಡುವುದು, ಟೆಂಟ್ ಹಾಕಿಸಿಕೊಡುವುದೂ ಮಾಡಿಕೊಂಡು ಬರುತ್ತಿದ್ದಾರೆ. ಧರಣಿ, ಪ್ರತಿಭಟನೆಗಳು ಸಿದ್ದ ಪಡಿಸಿದ ರೀತಿಯಲ್ಲಿ ನಡೆಯುತ್ತಿದ್ದು, ಈ ರೀತಿಯ ಮನಸ್ಥಿತಿ ಬದಲಾಗಬೇಕಿದೆ. ಗುರಿ ಮತ್ತು ಉದ್ದೇಶ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹೋರಾಟಗಳು ಹೊಸಬರೊಂದಿಗೆ ಪ್ರಾರಂಭವಾಗಬೇಕಿದೆ” ಎಂದರು.

Advertisements

“ದೆಹಲಿಯಲ್ಲಿ ರೈತರು ಕೃಷಿ ಕಾಯ್ದೆಗಳ ವಿರುದ್ಧವಾಗಿ ನಡೆಸಿದ ಹೋರಾಟದ ರೀತಿಯಲ್ಲಿ ರೈತರ ಪರವಾಗಿ ಹೋರಾಟಗಳು ಸಜ್ಜುಗೊಳ್ಳಬೇಕಿದೆ. ಅಲ್ಲದೆ ರೈತರ ಸಮಸ್ಯೆಗಳಿಗೆ ಪರಿಹಾರ ನೀಡದಿದ್ದರೆ ಮುಂದಿನ ದಿನಗಳಲ್ಲಿ ಶಾಸನಗಳನ್ನು ಬದಲಿಸುವ, ಬರೆಯುವ ಸ್ಥಾನದಲ್ಲಿರುವ ರಾಜಕಾರಣಿಗಳು ಅಧಿಕಾರ ಕಳೆದುಕೊಳ್ಳುತ್ತೇವೆ ಎಂಬ ಅಂಶವನ್ನು ಮನದಟ್ಟು ಮಾಡಿಸುವ ಕೆಲಸ ರೈತರಿಂದಲೇ ಆಗಬೇಕಿದೆ” ಎಂದರು.

ಇದನ್ನೂ ಓದಿ: ಮಂಡ್ಯ | ಲಂಚ ಪಡೆವಾಗ ಲೋಕಾಯುಕ್ತ ಬಲೆಗೆ ಮೂವರು ನೌಕರರು

“ಕೃಷಿಯಲ್ಲಿ ತೊಡಗಿಸಿಕೊಂಡಿರುವವರು ಎಂದಿಗೂ ಲಾಭ ಪಡೆಯಬಾರದು ಎಂಬ ಕಾಣದ ನಿಲುವುಗಳು ಕೃಷಿಗೆ ವಿರುದ್ಧವಾಗಿಯೇ ನಡೆದುಕೊಂಡು ಬರುತ್ತಿವೆ. ಕೃಷಿ ಸಾಲವನ್ನು ಕನಿಷ್ಠ 2 ರಿಂದ 3ವರ್ಷಗಳಿಗೊಮ್ಮೆ ಮನ್ನ ಮಾಡಬೇಕು ಎಂಬ ಮಾತುಗಳು ಈ ಹಿಂದೆ ಕೇಳಿಬರುತ್ತಿದ್ದ ಉದ್ದೇಶ, ಮುಂದಿನ ದಿನಗಳಲ್ಲಿಯೂ ಸಹ ಕೆಲವರು ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂಬುದಾಗಿತ್ತು. ಆದರೆ, ಕೃಷಿ ಎಂಬುದು ಅಧಿಕಾರ ಶಾಹಿಗಳಿಂದ ಕಡೆಗಣಿಸಲ್ಪಟ್ಟಿದ್ದು, ಈ ನಿಟ್ಟಿನಲ್ಲಿ ಹೋರಾಟಗಳು ನಡೆಯಬೇಕಿದೆ. ರಾಜಕೀಯ ಅಧಿಕಾರ ಎಂಬುದು ಮೇಲ್ನೋಟಕ್ಕೆ ಸಾಮಾಜಿಕ ಕಳಕಳಿ ಇರುವಂತೆ ಕಂಡರೂ ವ್ಯವಹಾರಿಕ ಹಾಗೂ ವೈಯಕ್ತಿಕ ಹಿತಾಸಕ್ತಿಯ ಹಿನ್ನಲೆಯಿಂದಲೇ ನಡೆದುಕೊಂಡು ಬರುತ್ತಿದೆ. ಈ ಬಗ್ಗೆ ಜನರು ಜಾಗೃತರಾಗಿ ಹೊಸ ರಾಜಕೀಯ ಸ್ವರೂಪವನ್ನು, ಸಂಘಟನೆಗಳ ಪಾಲ್ಗೊಳ್ಳುವಿಕೆಯನ್ನು ವಿಭಿನ್ನವಾಗಿ ಮಾಡಬೇಕಿದೆ. ಯಾವುದೇ ಒಂದು ವಿಚಾರವನ್ನು ಚುನಾವಣಾ ರಾಜಕಾರಣಕ್ಕೆ ಹೊಂದಿಕೊಳ್ಳುವಂತೆ ಹೋರಾಟಗಳು, ಚಳವಳಿಗಳು ನಡೆಯಬೇಕಿದ್ದು, ಇವುಗಳ ಪರಿಣಾಮ ನೇರವಾಗಿ ರಾಜಕಾರಣದ ಮೇಲೆ ಬೀರುವಂತೆ ನೋಡಿಕೊಳ್ಳಬೇಕು. ರಾಜಕಾರಣವನ್ನು ವಿಭಿನ್ನವಾಗಿ ಕಲ್ಪಿಸಿಕೊಳ್ಳುವ ಪ್ರಯತ್ನ ಆಗಬೇಕು” ಎಂದು ಹೇಳಿದರು.

“ಇನ್ನು ಹೋರಾಟಗಳು ಲೆಕ್ಕಕ್ಕೆ ಇಲ್ಲ ಎಂಬಂತೆ ಜಾತಿ ವೈರುಧ್ಯ, ಕೋಮು ಸಂಬಂಧಿತ ವಿಚಾರಗಳನ್ನು ಜನರ ಮೇಲೇರಿ ಅಧಿಕಾರ ಪಡೆಯುವ ಕೆಲಸ ಮಾಡುತ್ತಿರುವ ಆರ್.ಎಸ್.ಎಸ್ ಮತ್ತು ಬಿಜೆಪಿಯನ್ನು ಸಮಾಜದ ಮುಖ್ಯವಾಹಿನಿಯಿಂದ ದೂರವಿಡುವ ಕೆಲಸವನ್ನು ರಾಜಕಾರಣವನ್ನು ಅರ್ಥಪೂರ್ಣವಾಗಿ ಮಾಡುವ ಹಾಗೂ ಬದಲಿಸುವ ಕೆಲಸವನ್ನು ಪ್ರಸ್ತುತ ಉದ್ದೇಶದಿಂದ ನಾವೆಲ್ಲರೂ ಜಾಗೃತರಾಗಿ ಸಂಘಟನೆ ಮಾಡಬೇಕಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X