ದಾವಣಗೆರೆ | ಗೃಹಜ್ಯೋತಿ ಕಾರ್ಯಕ್ರಮ ಚಾಲನೆ ವೇಳೆ ಪ್ರಧಾನಿ ನಿಂದನೆ ಸರಿಯಲ್ಲ: ಬಿಜೆಪಿ ಶಾಸಕ

Date:

Advertisements

ದಾವಣಗೆರೆಯಲ್ಲಿ ಇತ್ತೀಚೆಗೆ ನಡೆದ ಗೃಹಜ್ಯೋತಿ ಯೋಜನೆಯ ಚಾಲನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನಡೆದುಕೊಂಡ ರೀತಿ ಸರಿಯಲ್ಲ. ಪ್ರಧಾನಿಯವರು ಜನರ ಖಾತೆಗೆ 15 ಲಕ್ಷ ಹಾಕುತ್ತೇನೆ ಎಂದು ಹೇಳಿಯೇ ಇಲ್ಲ ಎಂದು ಹರಿಹರ ಶಾಸಕ ಬಿ.ಪಿ ಹರೀಶ್ ಅಸಮಾಧಾನ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ನ ಮುಖಂಡರು ಅಧಿಕಾರಕ್ಕೆ ಬರುವ ಮುನ್ನ ಕರೆಂಟ್ ‘ನಿಮಗೂ ಉಚಿತ – ನಮಗೂ ಉಚಿತ’ ಎಂದು ಹೇಳಿದ್ದರು. ಇದೀಗ ಕಂಡಿಷನ್‌ ಜೊತೆಗೆ ಯೋಜನೆ ಜಾರಿ ಮಾಡಿದ್ದಾರೆ. ಆದರೆ, ಕಾರ್ಯಕ್ರಮದಲ್ಲಿ ‘ಪ್ರಧಾನಿಯವರು 15 ಲಕ್ಷ ಹಾಕಲಿಲ್ಲ’ ಎಂದು ಸಚಿವರು ಪದೇ ಪದೇ ಹೇಳುವುದು ಸರಿಯಲ್ಲ. ಪ್ರಧಾನಿಯವರು 15 ಲಕ್ಷ ರೂಪಾಯಿಯ ಭರವಸೆ ನೀಡಿರುವ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ” ಎಂದು ಹೇಳಿದ್ದಾರೆ.

“ಗೃಹಜ್ಯೋತಿ ಯೋಜನೆ ಚಾಲನಾ ಕಾರ್ಯಕ್ರಮದಲ್ಲಿ ಒಬ್ಬ ಐಎಎಸ್ ಅಧಿಕಾರಿ ಕಾಂಗ್ರೆಸ್‌ ವಕ್ತಾರರಂತೆ ವರ್ತಿಸಿರುವುದು ಸರಿಯಲ್ಲ. ಅಧಿಕಾರಿಯೊಬ್ಬರು ಕಾಂಗ್ರೆಸ್‌ಗೆ ಮತ ಹಾಕಿದ್ದೀರಾ, ನಿಮಗೆ ಶೂನ್ಯ ಬಿಲ್ ಬಂದಿದೆ ನೋಡಿ ಎಂದು ಹೇಳಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಅಧಿಕಾರಿಗಳು ಹೀಗೆ ಮಾತನಾಡುವುದು ಉತ್ತಮ ನಡೆಯಲ್ಲ” ಎಂದು ಹೇಳಿದ್ದಾರೆ.

Advertisements

“ಇಂದಿರಾಗಾಂಧಿ ಕಾಲದಿಂದಲೂ ಗರೀಬಿ ಹಠಾವೋ ಎನ್ನುವ ಕಾಂಗ್ರೆಸ್‌ನವರಿಗೆ ದೇಶ ಬಡತನದಲ್ಲಿರುವುದೇ ಬೇಕು ಎನಿಸುತ್ತದೆ. ಕೋವಿಡ್ ಅವಧಿಯಲ್ಲಿ ಹಗರಣವಾಗಿದ್ದರೆ ತನಿಖೆ ಮಾಡಲಿ. ಹರಿವೆ ಹಾವು ಬಿಡುವುದು ಬೇಡ” ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ ಮಾತನಾಡಿ, “ಗೃಹಜ್ಯೋತಿ ಯೋಜನೆಯ ಸರ್ಕಾರಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಪಿ ಹರೀಶ್ ಭಾಗವಹಿಸಿದ್ದರು. ಈ ವೇಳೆ ಪ್ರಧಾನಿಯವರು ಅನ್ನಭಾಗ್ಯ ಯೋಜನೆಗೆ ಸ್ಪಂದಿಸಲಿಲ್ಲ ಎಂದು ಕಾಂಗ್ರೆಸ್‌ನವರು ಹೇಳಿದ್ದನ್ನು ಖಂಡಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಗೂಂಡಾ ವರ್ತನೆ ತೋರಿದ್ದಾರೆ. ಶಾಸಕರು ಎಂದು ನೋಡದೆ ಅವಾಚ್ಯವಾಗಿ ನಿಂದಿಸಿದ್ದಾರೆ” ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಜಗದೀಶ್, ಶ್ರೀನಿವಾಸ್ ದಾಸಕರಿಯಪ್ಪ, ಲಿಂಗರಾಜ್, ಮಂಜಾನಾಯಕ್ ಇದ್ದರು….

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ದಾವಣಗೆರೆ | ಕೆರೆ ನೀರು ಪೋಲು, ನೀರಾವರಿ ಇಲಾಖೆ ನಿರ್ಲಕ್ಷ್ಯ; ದುರಸ್ತಿಗೆ ರೈತಸಂಘದ ಮುಖಂಡರ ಆಗ್ರಹ

"ಜಗಳೂರು ತಾಲೂಕಿನ ಭರಮ ಸಮುದ್ರ ಕೆರೆಯಲ್ಲಿ ಟ್ಯೂಬ್ ಗಳಲ್ಲಿ ನೀರು ಪೋಲಾಗುತ್ತಿದೆ....

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X