ರಾಯಚೂರು | ಗ್ಯಾರಂಟಿಗಳಿಗೆ ಪರಿಶಿಷ್ಟರ ಅನುದಾನ ಬಳಕೆ ಬೇಡ

Date:

Advertisements

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ದುರ್ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯ. ಯಾವುದೇ ಕಾರಣಕ್ಕೂ ಎಸ್‌ಸಿ.ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಬಾರದು ಎಂದು ಮೂಲ ನಿವಾಸಿಗಳ ಅಂಬೇಡ್ಕರ್ ಸಂಘ ಆಗ್ರಹಿಸಿದೆ.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಜ್ಯ ಕಾಂಗ್ರೆಸ್ ಸರ್ಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸಲು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ 11,000 ಕೋಟಿ ಮೊತ್ತವನ್ನು ಬಳಸಿಕೊಳ್ಳಲು ಮುಂದಾಗಿರುವುದು ದುರಂತ” ಎಂದಿದ್ದಾರೆ.

“ಕಳೆದ ತಿಂಗಳಲ್ಲಿ ಸರ್ಕಾರವೇ ಎಲ್ಲ ಸಚಿವರ ಸಭೆ ಕರೆದು ಎಸ್‌ಸಿ/ಎಸ್‌ಟಿ ಸಮುದಾಯದ ಅಭಿವ್ರದ್ದಿಗಾಗಿ ಮೀಸಲಿರುವ ಗಿರಿಜನ ಉಪಯೋಜನೆಯ ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನ ಕೇವಲ ದಲಿತ ಜನಾಂಗದ ಅಭಿವ್ರದ್ದಿಗೆ ಮಾತ್ರ ಮೀಸಲಾಗಬೇಕು. ಬೇರೆ ಯೋಜನೆಗಳಿಗೆ ಬಳಕೆಯಾಗಬಾರದೆಂದು 7ಡಿ ಕಾಯ್ದೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಆದರೆ, ಆದೇಶ ಹೊರಡಿಸಿದ ತಿಂಗಳಲ್ಲಿಯೇ ತನ್ನದೇ ಆದೇಶವನ್ನು ಗಾಳಿಗೆ ತೂರಿ ದಲಿತರ ಹಣವನ್ನು ದುರುಪಯೋಗಕ್ಕೆ ಸರ್ಕಾರ ಮುಂದಾಗಿರುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

Advertisements

“ಕಳೆದ 2018ರಲ್ಲಿಯೂ ಕೂಡಾ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಲು ಎಸ್‌ಇಎಸ್‌ಪಿ/ಟಿಎಸ್‌ಪಿ ಅನುದಾನದಲ್ಲಿ ಒಟ್ಟು 929.41 ಕೋಟಿ ರೂ. ಬಳಕೆ ಮಾಡಿಕೊಂಡಿದೆ. ಅದಲ್ಲದೇ, ಅದೇ 2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ರಾಜ್ಯಕೀಯ ಪರಸ್ಥಿತಿಗಳ ಬಗ್ಗೆ ಮಾಹಿತಿ ಕಲೆ ಹಾಕಲು ಪೂರಕ ಅಂದಾಜಿನಲ್ಲಿ 10 ಕೋಟಿ ಅನುದಾನವನ್ನು ಪೋಲೀಸ್ ಇಲಾಖೆಗೆ ವರ್ಗಾಯಿಸಿ ದಲಿತರ ಮೀಸಲು ಹಣವನ್ನ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಕರ್ತವ್ಯಕ್ಕೆ ಪೋಲೀಸರನ್ನು ನಿಯೋಜಿಸುವದಕ್ಕಾಗಿ 10 ಕೋಟಿ ದಲಿತರ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ವಂಚಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೂಡಲೇ ರಾಜ್ಯ ಸರ್ಕಾರ ದಲಿತರ ಅನುದಾನವನ್ನು ಬೇರೆ ಯೋಜನೆಗಳಿಗೆ ಬಳಸುವದನ್ನು ನಿಲ್ಲಿಸಬೇಕು. ದಲಿತರ ಅಭಿವ್ರದ್ದಿಗೆ ಆಧ್ಯತೆ ನೀಡಬೇಕು. ಇಲ್ಲದೇ ಹೋದಲ್ಲಿ ಸರ್ಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಭರತಕುಮಾರ, ಮುಖಂಡ ಬಸವರಾಜ ತಳವಾರ, ಹನುಮೇಶ, ಬಸವರಾಜ, ಶಿವಶಂಕರ, ಅಂಜಿನಯ್ಯ, ಮಲ್ಲೇಶ ಇದ್ದರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X