ಹೊಸನಗರ | ರಿಪ್ಪನ್ ಪೇಟೆ ಸೀನಿಯರ್ ಚೇಂಬರ್ ಜೆಸಿಐನಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಛತ್ರಿ ವಿತರಣೆ

Date:

Advertisements

ಹೊಸನಗರದ ರಿಪ್ಪನ್ ಪೇಟೆ ಪಟ್ಟಣದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಅರಸಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳು ಮತ್ತು ಛತ್ರಿಗಳನ್ನು ವಿತರಿಸುವ ಮೂಲಕ ನೂತನ ಶಿಕ್ಷಣೋತ್ಸಾಹಕ್ಕೆ ಪ್ರೇರಣೆಯಾದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತೀರ್ಥಹಳ್ಳಿ ಸೀನಿಯರ್ ಚೇಂಬರ್ ಜೆಸಿಐ ನಿಕಟಪೂರ್ವ ಅಧ್ಯಕ್ಷ ಹೆಚ್ ಎನ್. ಸೂರ್ಯನಾರಾಯಣ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶಿಕ್ಷಣದ ಮಹತ್ವವನ್ನು ತಿಳಿಸಿದರು, ಮತ್ತು ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಸಿಕೊಂಡು ಭವಿಷ್ಯ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ತಿಳಿ ಹೇಳಿದರು.

1001994718

ಸೀನಿಯರ್ ಚೇಂಬರ್ ರಿಪ್ಪನ್ ಪೇಟೆಯ ಅಧ್ಯಕ್ಷ ಪಿಯೂಸ್ ರೋಡ್ರಿಗಸ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪಾತ್ರರಾಗಬಹುದೆಂಬ ಸಂದೇಶ ನೀಡಿದರು.

Advertisements

ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಪಿಯೂಸ್ ರೋಡ್ರಿಗಸ್, ಕಾರ್ಯದರ್ಶಿ ಶ್ರೀಧರ್, ಖಜಾಂಚಿ ಅಜೇಶ್, ಉಪಾಧ್ಯಕ್ಷೆ ಲೇಖನ ಚಂದ್ರನಾಯಕ್ ಹಾಗೂ ಪದಾಧಿಕಾರಿಗಳಾದ ರಫಿ, ವಿನಾಯಕ, ಗುಂಡಣ್ಣ, ನೇಮಣ್ಣ, ಪ್ರಭಾಕರ್ ಆಚಾರ್, ಅನೂಪ್ ಬಟ್ಟೆ ಮಲ್ಲಪ್ಪ, , ದಾನಪ್ಪ, ರಾಮಚಂದ್ರಬಂಡಿ, ಅಶ್ವಕ್, ಸಂಗೀತ ಶಾಜಿ ಮತ್ತು ಶಾಜಿ ಭಾಗವಹಿಸಿದ್ದರು.

1001994719

ಕಾರ್ಯಕ್ರಮವನ್ನು ಕಾರ್ಯದರ್ಶಿ ಶ್ರೀಧರ್ ನಿರೂಪಿಸಿ ಸಬಾಸ್ಟಿನ್ ಮ್ಯಾಥ್ಯೂಸ್‌ ಸ್ವಾಗತಿಸಿ ಶಿಕ್ಷಕರಾದ ನಾಗರಾಜ್ ವಂದಿಸಿದರು

ಶಾಲೆಯ ಮುಖ್ಯ ಶಿಕ್ಷಕಿ ಪವಿತ್ರ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೋಜಿರಾವ್, ಸಹ ಶಿಕ್ಷಕರು, ಪೋಷಕರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X