ಚಿಂತಾಮಣಿ | ಅಂತ್ಯಕ್ರಿಯೆಗೆ ಅಡ್ಡಿ: ಮುಖ್ಯ ರಸ್ತೆಯಲ್ಲಿ ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

Date:

Advertisements

ಪುರಾತನ ಕಾಲದಿಂದಲೂ ಸ್ಮಶಾನವಿದೆಯಾದರೂ ಶವಗಳ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡದಿರುವ ಕಾರಣಕ್ಕೆ ಬೇಸತ್ತ ಗ್ರಾಮಸ್ಥರು ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಚಿಂತಾಮಣಿ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಂಗೇನಹಳ್ಳಿ ಗ್ರಾಮದ ಸರ್ವೆ ನಂ.8ರಲ್ಲಿ ಪುರಾತನ ಕಾಲದಿಂದಲೂ ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಅಲ್ಲಿಯೇ ಶವ ಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಕೆಲ ದಿನಗಳಿಂದ ಆ ಜಮೀನಿನಲ್ಲಿ ಬೇರೆ ವ್ಯಕ್ತಿಗಳು ಸ್ಮಶಾನವನ್ನು ಒತ್ತುವರಿ ಮಾಡಿಕೊಂಡಿದ್ದರು. ಇಂದು ಗ್ರಾಮದ ಕೊಂಡಪ್ಪ(60 ವರ್ಷ) ಎಂಬುವವರು ಮೃತಪಟ್ಟಿದ್ದು, ಅವರನ್ನು ಸದರಿ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುವ ಸಲುವಾಗಿ ಗುಂಡಿ ತೆಗೆಯಲು ಮುಂದಾದಾಗ ಕೆಲ ವ್ಯಕ್ತಿಗಳು ಅಡ್ಡಿಪಡಿಸಿದರು. ‌

ಸ್ಮಶಾನಕ್ಕಾಗಿ ಸರ್ವೆ

ಬಳಿಕ ಕಂದಾಯ ಇಲಾಖೆಯ ಅಧಿಕಾರಿಗಳು, ಪೊಲೀಸರ ಸೂಕ್ತ ಬಂದೋಬಸ್ತುನಲ್ಲಿ ಭೂ ಮಾಪನ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ್ದು, ಸ್ಮಶಾನ ಜಾಗ ಗುರುತಿಸಿ ಕೊಡುವುದಾಗಿ ಸರ್ವೆ ಕಾರ್ಯ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಚಿಂತಕರ ಆಗ್ರಹ

ಕಂದಾಯ ಇಲಾಖೆಯ ಅಧಿಕಾರಿ ರವೀಶ್, ನರಸಿಂಹಮೂರ್ತಿ ಸ್ಥಳಕ್ಕೆ ಬಂದು ಕಾನೂನು ರೀತಿಯಲ್ಲಿ ಸ್ಮಶಾನ ಜಾಗ ಎಲ್ಲಿ ಬರುತ್ತದೆ ಅಲ್ಲಿ ಗುರುತಿಸಿ ಕೊಡುತ್ತೇವೆಂದು ಹೇಳಿದರು, ಇದಕ್ಕೊಪ್ಪದ ಗ್ರಾಮಸ್ಥರು, ʼಸೂಕ್ತ ರೀತಿಯಲ್ಲಿ ಸರ್ವೆ ಕಾರ್ಯ ನಡೆದಿಲ್ಲ ಹಾಗೂ ಸ್ಮಶಾನದ ಜಮೀನು ಸರ್ವೆ ನಂ.08ರಲ್ಲಿ ಬರುತ್ತದೆ. ಹಾಗಾಗಿ ಅದೇ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಲು ಅನುಕೂಲ ಮಾಡಿಕೊಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ಮುಖ್ಯ ರಸ್ತೆಯಲ್ಲಿ ಶವವನ್ನು ಇಟ್ಟು ಪ್ರತಿಭಟನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X