BIG BREAKING: ಧರ್ಮಸ್ಥಳ ಕೇಸ್‌ನಲ್ಲಿ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರು; ಮಹತ್ವದ ತಿರುವು

Date:

Advertisements

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಅನ್ವಯ ಆಗುತ್ತಿರುವ ತನಿಖೆಯ ಬೆನ್ನಲ್ಲೇ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ದೂರು ದಾಖಲಿಸಲು ಮತ್ತು ಮಹತ್ವದ ಸಾಕ್ಷ್ಯಗಳನ್ನು ಸಲ್ಲಿಸಲು ಹೊಸ ಸಾಕ್ಷಿಯೊಬ್ಬರು ಬೆಳ್ತಂಗಡಿಯಲ್ಲಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಗೆ ಬಂದಿದ್ದಾರೆ. ಸಂಜೆ ಏಳು ಗಂಟೆಗೆ ಅವರು ಬರುವುದು ನಿಶ್ಚಿತವಾಗಿತ್ತು.

ಸರಿಸುಮಾರು 20 ವರ್ಷಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದ ಈ ಹೊಸ ಸಾಕ್ಷ್ಯವು ನಡೆಯುತ್ತಿರುವ ತನಿಖೆಯಲ್ಲಿ ಮಹತ್ವದ ತಿರುವು ನೀಡಬಹುದು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಾಕ್ಷಿದಾರ, “ನನ್ನ ಹೆಸರು ಜಯಂತ್ ಟಿ. ನಾನು ಇಂದು ದೂರು ಕೊಡಲು ಬಂದಿದ್ದೇನೆ. ಹಲವು ವರ್ಷಗಳ ಹಿಂದೆ ಈ ಧರ್ಮಸ್ಥಳ ಗ್ರಾಮದಲ್ಲಿ ಹಲವು ಕೊಲೆಗಳಾಗಿವೆ ಎಂದು ಹೇಳುತ್ತಿದ್ದೆ. ಹಲವು ವೇದಿಕೆಗಳಲ್ಲೂ ಇದನ್ನೇ ಹೇಳಿದ್ದೇನೆ. ಈ ವಿಷಯಗಳನ್ನು ಎಲ್ಲವನ್ನೂ ಪ್ರಸ್ತಾಪಿಸಿದ್ದೇನೆ” ಎಂದು ಹೇಳಿದರು.

“ದೇಶದಲ್ಲೇ ಉತ್ತಮವಾದ ಎಸ್‌ಐಟಿ ರಚನೆಯಾಗಿದೆ. ಇದು ಒಳ್ಳೆಯ ಬೆಳವಣಿಗೆ. ಅದಕ್ಕಾಗಿ ದೂರು ನೀಡಲು ಬಂದಿದ್ದೇನೆ. ಆದರೆ ಸೋಮವಾರ ಬರಲು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ನಾಳೆ ರಜೆ ಇದೆ. ಸೋಮವಾರ ಎಲ್ಲ ಮಾಹಿತಿಯನ್ನು ಅವರಿಗೆ ನೀಡುತ್ತೇನೆ. ಮುಂದಿನ ತನಿಖೆ ಏನಾಗುತ್ತದೆ ಎಂದು ನೋಡೋಣ. ಕೊಲೆಗಳನ್ನು ಯಾರೋ ಮಧ್ಯದ ವ್ಯಕ್ತಿ ನಿಂತು ಮುಚ್ಚಿ ಹಾಕಿದ್ದಾನೆ. ಧರ್ಮಸ್ಥಳದಲ್ಲಿ ಕೊಲೆಗಳು ಎಲ್ಲರಿಗೂ ಗೊತ್ತಿರುವ ವಿಚಾರ. ಭಯದಿಂದ ಯಾರೂ ಹೇಳುತ್ತಿರಲಿಲ್ಲ. ಇಂದು ರಾಜ್ಯ ಸರ್ಕಾರದ ಎಸ್‌ಐಟಿ ತಂಡ ಆ ಭಯವನ್ನೂ ದೂರ ಮಾಡಿದೆ. ಅದನ್ನು ನೋಡಿ ನಾನು ಮುಂದೆ ಬಂದಿದ್ದೇನೆ. ಇನ್ನೂ ಐದಾರು ಜನ ಸಾಕ್ಷಿಗಳು ಬರುವುದಾಗಿ ಹೇಳುತ್ತಿದ್ದಾರೆ. ತಮ್ಮ ನೋವುಗಳನ್ನು ಹಂಚಿಕೊಳ್ಳಲು ಸಿದ್ಧವಿದ್ದಾರೆ” ಎಂದು ವಿವರಿಸಿದರು.

“ನಾವು ಮೃತದೇಹಗಳನ್ನು ನೋಡಿದ್ದೇನೆ. ಯಾವುದೇ ಡೆಡ್‌ ಬಾಡಿ ಸಿಕ್ಕರೆ, ಅದನ್ನು ಆಸ್ಪತ್ರೆಗೆ ಸಾಗಿಸಬೇಕು, ಮರಣೋತ್ತರ ಪರೀಕ್ಷೆ ನಡೆಸಬೇಕು. ನಂತರ ಹೂತುಹಾಕಬೇಕು. ಆದರೆ ಯಾವುದೇ ಕಾರಣಕ್ಕೂ ಎಫ್‌ಐಆರ್ ಆಗಿಲ್ಲ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿಲ್ಲ. ಒಂದು ವಾರ ಕಾಲ ಹಾಗೆಯೇ ಬಿದ್ದಿದ್ದ ಬಾಲಕಿಯ ಮೃತದೇಹವನ್ನು ಪೊಲೀಸರಿಗೆ ತಿಳಿಸದೆ ಹೂತು ಹಾಕಿದ್ದನ್ನು ಕಣ್ಣಾರೆ ಕಂಡಿದ್ದೇನೆ. ನಾವು ಅಂದು ಬಾಯಿಬಿಡಲು ಆಗುತ್ತಿರಲಿಲ್ಲ. ಇಂದು ಇಷ್ಟೆಲ್ಲ ಇದ್ದರೂ ಹೇಳಲು ಆಗುತ್ತಿಲ್ಲ. ಇದನ್ನೆಲ್ಲ ಅಂದು ಕೂಡ ಹೇಳಲು ಆಗುತ್ತಿರಲಿಲ್ಲ” ಎಂದಿದ್ದಾರೆ.

‘ಅಂದು ಯಾಕೆ ಇದನ್ನೆಲ್ಲ ಪ್ರಶ್ನಿಸಲಿಲ್ಲ’ ಎಂದು ಮಾಧ್ಯಮಗಳು ಪದೇಪದೇ ಕೇಳಿದಾಗ, “ನನ್ನ ಕುಟುಂಬದ ಹೆಣ್ಣುಮಗಳ ಹೆಸರು ಪದ್ಮಲತಾ. ಆಕೆಗೆ ಏನಾಯಿತು? ಆ ಪ್ರಕರಣ ಏನಾಯಿತು? ಎಂಬುದನ್ನೆಲ್ಲ ಎಸ್‌ಐಟಿಗೆ ತಿಳಿಸುವವರೂ ಇದ್ದಾರೆ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X