ಬೀದರ್‌ | ಸ್ಥಳಾಂತರಗೊಂಡ ಜಿಲ್ಲಾಧಿಕಾರಿ ಕಚೇರಿಗೆ ಬಸ್‌ ಓಡಿಸಿ

Date:

Advertisements

ಸ್ಥಳಾಂತರಗೊಂಡ ಜಿಲ್ಲಾಧಿಕಾರಿಗಳ ಕಚೇರಿಗೆ ನೂತನ ಬಸ್‌ ನಿಲ್ದಾಣದಿಂದ ಬಸ್‌ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗುಲಾಮ್‌ ದಸ್ತಗೀರ್‌ ಅವರು ಅಪರ ಜಿಲ್ಲಾಧಿಕಾರಿ ಸುರೇಖಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಟ್ಟಡ ಶಿಥಿಲಗೊಂಡಿರುವ ಹಿನ್ನೆಲೆ ನೂತನ ಪ್ರಜಾ ಸೌಧ ಕಟ್ಟಡ ನಿರ್ಮಾಣ ಕಾರ್ಯ ಮುಕ್ತಾಯ ಆಗುವವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿರುವ ವಿವಿಧ ಇಲಾಖೆಗಳ ಕಚೇರಿಗಳು ಬೇರೆ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯು ಚಿಕ್ಕಪೇಟ ರಸ್ತೆಯ ಗಾಂಧಿ ಭವನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸ್ಥಳಾಂತರಗೊಂಡ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಇತರೆ ಕಚೇರಿಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಹೊಸ ಬಸ್‌ ನಿಲ್ದಾಣದಿಂದ ಎರಡು ಬಸ್‌ಗಳನ್ನು ಹಳೆ ನಿಲ್ದಾಣ, ಅಂಬೇಡ್ಕರ್‌ ವೃತ್ತ, ಜನವಾಡ ರಸ್ತೆ ಮಾರ್ಗವಾಗಿ ಚಿಕಪೇಟ್‌ ರಿಂಗ್‌ ರಸ್ತೆ, ಗುರುನಾನಕ್‌ ಝೀರಾ ಮುಖಾಂತರ ಹೊಸ ಬಸ್‌ ನಿಲ್ದಾಣಕ್ಕೆ ಚಲಿಸಬೇಕುʼ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Advertisements

ʼಸಾರಿಗೆ ಇಲಾಖೆ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಬಸ್‌ ವ್ಯವಸ್ಥೆ ಕಲ್ಪಿಸಿದರೆ ವಿವಿಧ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿಗಳಿಗೆ ಹಾಗೂ ನಗರ ಸೇರಿದಂತೆ ಬೇರೆ ತಾಲೂಕುಗಳಿಂದ ಬರುವ ಜನಸಾಮಾನ್ಯರಿಗೆ ಇದರಿಂದ ತುಂಬಾ ಅನುಕೂಲ ಆಗಲಿದೆʼ ಎಂದು ಗಮನ ಸೆಳೆದರು.

ಇದನ್ನೂ ಓದಿ : ಬೀದರ್‌ ಜಿಲ್ಲಾಡಳಿತ ಭವನ ನಿರ್ಮಾಣ : ಜಿಲ್ಲಾ ಕಚೇರಿಗಳ ಸ್ಥಳಾಂತರ : ಡಿಸಿ ಶಿಲ್ಪಾ ಶರ್ಮಾ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X