ಟ್ರಂಪ್ ಬೆದರಿಕೆಗಳ ಹೊರತಾಗಿಯೂ ರಷ್ಯಾದಿಂದ ತೈಲ ಆಮದು ಮುಂದುವರೆಸಲಿರುವ ಭಾರತ: ವರದಿ

Date:

Advertisements

ಅಮೆರಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಡ ಹೇರುವ ಬೆದರಿಕೆ ಹಾಕಿದರೂ ಭಾರತವು ರಷ್ಯಾದಿಂದ ತೈಲವನ್ನು ಖರೀದಿಸುವುದನ್ನು ಮುಂದುವರಿಸುತ್ತದೆ ಎಂದು ಭಾರತೀಯ ಸರ್ಕಾರದ ಎರಡು ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

ಭಾರತವು ಅಮೆರಿಕಕ್ಕೆ ಮಾಡುವ ರಫ್ತಿನ ಮೇಲೆ ಹೊಸದಾಗಿ ಶೇಕಡ 25ರಷ್ಟು ಸುಂಕವನ್ನು ವಿಧಿಸಿರುವ ಟ್ರಪ್, “ರಷ್ಯಾದ ಶಸ್ತ್ರಾಸ್ತ್ರ ಮತ್ತು ತೈಲ ಖರೀದಿಸುವ ಭಾರತವು ಹೆಚ್ಚುವರಿ ದಂಡವನ್ನು ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದರು. ಹಾಗೆಯೇ ತನ್ನ ಈ ಬೆದರಿಕೆ ಬಳಿಕ ಭಾರತ ರಷ್ಯಾದಿಂದ ತೈಲ ಖರೀದಿಸುವುದು ನಿಲ್ಲಿಸುವ ನಿರ್ಧಾರ ಮಾಡಿದೆ ಎಂಬ ಮಾಹಿತಿ ಲಭಿಸಿದೆ ಎಂದೂ ಹೇಳಿದ್ದರು.

ಇದನ್ನು ಓದಿದ್ದೀರಾ? ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲಿದೆ ಎನ್ನಲಾಗುತ್ತಿದೆ: ಡೊನಾಲ್ಡ್ ಟ್ರಂಪ್

Advertisements

ಆದರೆ ರಷ್ಯಾದಿಂದ ತೈಲ ಆಮದು ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ರಾತ್ರೋರಾತ್ರಿ ಖರೀದಿಯನ್ನು ನಿಲ್ಲಿಸುವುದು ಅಷ್ಟು ಸುಲಭವಲ್ಲ. ದೀರ್ಘಾವಧಿಯ ತೈಲ ಒಪ್ಪಂದಗಳಿವು ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

“ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎನ್ನಲಾಗುತ್ತಿದೆ. ಇದು ಉತ್ತಮ ನಿರ್ಧಾರ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ. ಹಾಗೆಯೇ ಇದು ಖಚಿತವಿಲ್ಲ ಎಂಬುದನ್ನೂ ಟ್ರಂಪ್ ಒಪ್ಪಿಕೊಂಡಿದ್ದಾರೆ.

“ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ನನಗೆ ಅರ್ಥವಾಗಿದೆ. ಇದು ನನಗೆ ಕೇಳಿ ಬಂದಿರುವ ಮಾಹಿತಿ, ಇದು ಸರಿಯೋ ಇಲ್ಲವೋ ನನಗೆ ತಿಳಿದಿಲ್ಲ. ಆದರೆ ಇದು ಉತ್ತಮ ನಿರ್ಧಾರ. ಏನಾಗುತ್ತದೆ ಎಂದು ನಾವು ನೋಡುತ್ತೇವೆ” ಎಂದು ಡೊನಾಲ್ಡ್ ಟ್ರಂಪ್ ವರದಿಗಾರರಿಗೆ ತಿಳಿಸಿದರು.

ಟ್ರಂಪ್ ಇದೇ ರೀತಿ ಸುಳ್ಳು ಹೇಳಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಟ್ರಂಪ್ ಹೇಳಿಕೆಗಳನ್ನು ನೇರವಾಗಿ ಖಂಡಿಸದಿರುವುದು ಟೀಕೆಗೆ ಗ್ರಾಸವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X