ಧರ್ಮಸ್ಥಳ ಪ್ರಕರಣ: ಇಂದು ಅನಾಮಿಕ ವ್ಯಕ್ತಿ ಗುರುತಿಸಿದ 11ನೇ ಸ್ಥಳ ಶೋಧ

Date:

Advertisements

ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕ ಗುರುತಿಸಿದ 11ನೇ ಸ್ಥಳದಲ್ಲಿ ಆ. 4ರಂದು ಕಳೇಬರಕ್ಕಾಗಿ ಶೋಧ ಕಾರ್ಯ ನಡೆಯಲಿದೆ.

ಅನಾಮಿಕ ವ್ಯಕ್ತಿ ತಿಳಿಸಿರುವಂತೆ ಜು. 28ರಿಂದ ಸ್ಥಳ ಮಹಜರು ಪ್ರಕ್ರಿಯೆಯಿಂದ ಆರಂಭವಾಗಿತ್ತು. ಎಸ್‌ಐಟಿಯ ಕಾರ್ಯಾಚರಣೆ ಆ. 4ಕ್ಕೆ 8ನೇ ದಿನಕ್ಕೆ ತಲುಪಿದೆ. ಭಾನುವಾರ ರಜಾ ದಿನ ಅದ್ದರಿಂದ ಯಾವುದೇ ಕಾರ್ಯಾಚರಣೆ ನಡೆದಿಲ್ಲ. ಈಗಾಗಲೇ ಶೋಧ ಕಾರ್ಯ ನಡೆದ ಸ್ಥಳ ಹಾಗೂ ಮುಂದೆ ಶೋಧ ನಡೆಸಲಿರುವ 11, 12 ಮತ್ತು 13ನೇ ಸ್ಥಳಕ್ಕೆ ಯಾರೂ ತೆರಳದಂತೆ ಪೊಲೀಸ್ ಹಾಗೂ ನಕ್ಸಲ್ ನಿಗ್ರಹ ಪಡೆ ಈ ಪ್ರದೇಶಗಳಲ್ಲಿ ಕಾವಲು ಕಾಯುತ್ತಿದ್ದಾರೆ.

ಇದನ್ನೂ ಓದಿ:  ಮಂಗಳೂರು | ಅಕ್ರಮ ಕೆಂಪು ಕಲ್ಲು ಸಾಗಾಟ; ಲಾರಿ, ಇಬ್ಬರು ಚಾಲಕರು ವಶಕ್ಕೆ

Advertisements

ಅನಾಮಿಕ ವ್ಯಕ್ತಿಯು ಪ್ರತೀದಿನ ಬೆಳಿಗ್ಗೆ ಎಸ್‌ಐಟಿ ಕಚೇರಿಗೆ ಹಾಜರಾಗಿ ಮತ್ತೆ ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ವಕೀಲರ ಜತೆ ಆತನನ್ನು ಕಳುಹಿಸಲಾಗುತ್ತಿದೆ. ಈ ಮಧ್ಯೆ ತನಿಖಾಧಿಕಾರಿ ಮಂಜುನಾಥ್ ಗೌಡ ಅವರ ಮೇಲೆಯೇ ಅನಾಮಿಕ ದೂರು ನೀಡಿದ್ದರಿಂದ ಅವರು ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗವಹಿಸದೆ ಕಚೇರಿಯಲ್ಲಿಯೇ ಇರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಮತ್ತೊಂದು ದೂರು ಇಂದು ಪರಿಗಣನೆ ಸಾಧ್ಯತೆ

ಧರ್ಮಸ್ಥಳ ಗ್ರಾಮದಲ್ಲಿ ಸುಮಾರು 15 ವರ್ಷಗಳ ಹಿಂದೆ ಕೊಲೆ ನಡೆದಿರುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ನೀತಿ ಸಂಘಟನೆಯ ಮುಖ್ಯಸ್ಥ ಜಯಂತ್ ಟಿ ಎಂಬವರು ಆ. 2ರಂದು ಎಸ್‌ಐಟಿ ಕಚೇರಿಗೆ ದೂರು ನೀಡಲು ಆಗಮಿಸಿದ್ದರು. ಆ. 4ರಂದು ಅವರ ಪ್ರಕರಣ ಸ್ವೀಕರಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X