ಎದುರಾಳಿಗೆ ನನಗಿಂತ ಅಧಿಕ ಮತ ಸಿಕ್ಕಿದೆ: ಕೋರ್ಟ್‌ ಮೆಟ್ಟಿಲೇರಿದ ಪಂಚಾಯತ್ ಚುನಾವಣೆಯ ಘೋಷಿತ ವಿಜೇತೆ!

Date:

Advertisements

ಚುನಾವಣಾ ಅಧಿಕಾರಿಯಿಂದ ವಿಜಯ ಪ್ರಮಾಣಪತ್ರವನ್ನು ಪಡೆದ ಉತ್ತರಾಖಂಡ ತರ್ಕುಲಿ ಗ್ರಾಮ ಪಂಚಾಯತ್‌ನ ಘೋಷಿತ ವಿಜೇತೆಯೊಬ್ಬರು “ನನ್ನ ಎದುರಾಳಿಯೇ ನಿಜವಾದ ವಿಜೇತ” ಎಂದು ಘೋಷಿಸುವಂತೆ ಒತ್ತಾಯಿಸಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ವಿಧಾನಸಭಾ ಕ್ಷೇತ್ರದ ಭಾಗವಾಗಿರುವ ತರ್ಕುಲಿ ಗ್ರಾಮ ಪಂಚಾಯತ್‌ನ ಮುಖ್ಯಸ್ಥ ಹುದ್ದೆಗೆ ಚುನಾವಣೆ ನಡೆದಿದ್ದು ಫಲಿತಾಂಶ ಪ್ರಕಟವಾಗಿದೆ. ಕಾಜಲ್ ಬಿಶ್ಟ್ ಅವರನ್ನು ವಿಜೇತೆ ಎಂದು ಚುನಾವಣಾ ಅಧಿಕಾರಿಗಳು ಘೋಷಿಸಿದ್ದು ಅವರಿಗೆ ವಿಜಯ ಪ್ರಮಾಣಪತ್ರವನ್ನೂ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರಾಖಂಡ | ಖಾಸಗಿ ಹೆಲಿಕಾಪ್ಟರ್ ಪತನ; ಐವರು ಸಾವು

Advertisements

ಕಾಜಲ್ ಬಿಶ್ಟ್ 103 ಮತಗಳನ್ನು ಪಡೆದರೆ, ಅವರ ಎದುರಾಳಿ ಸುಮಿತ್ ಕುಮಾರ್ 106 ಮತಗಳನ್ನು ಪಡೆದಿದ್ದಾರೆ. ಆದರೆ ಬಿಶ್ಟ್ ಅವರನ್ನು ವಿಜೇತೆ ಎಂದು ಘೋಷಿಸಲಾಗಿದ್ದು ಗೊಂದಲ ಉಂಟಾಗಿತ್ತು. ಆದರೆ ಚುನಾವಣಾ ಅಧಿಕಾರಿಗಳ ತಪ್ಪನ್ನು ಕಾಜಲ್ ಬಿಶ್ಟ್ ಅವರೇ ತಿದ್ದಿದ್ದಾರೆ. ಅಷ್ಟು ಮಾತ್ರವಲ್ಲದೇ ಈ ವಿಚಾರದಲ್ಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.

“ನಾನು ಚುನಾವಣೆಯಲ್ಲಿ ಗೆಲ್ಲಲಿಲ್ಲ, ನಾನು ಸೋತಿದ್ದೇನೆ ಎಂದು ನಾನು ಚುನಾವಣಾ ಅಧಿಕಾರಿಗೆ ಹೇಳಿದೆ. ನನ್ನ ಎದುರಾಳಿಗೆ ನನಗಿಂತ ಹೆಚ್ಚುವರಿ ಮೂರು ಅಧಿಕ ಮತಗಳು ಲಭಿಸಿದೆ. ಆದ್ದರಿಂದ ಪ್ರಮಾಣಪತ್ರವನ್ನು ನಿಜವಾದ ವಿಜೇತರಿಗೆ ನೀಡಬೇಕು”ಎಂದು ಬಿಶ್ಟ್ ಹೇಳಿದ್ದಾರೆ.

ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ವಿಷಯ ಬಗೆಹರಿಯದ ಕಾರಣ ಬಿಶ್ಟ್ ಕೋರ್ಟ್ ಕದ ತಟ್ಟಿದ್ದಾರೆ. ಬಿಶ್ಟ್ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಅನುರಾಗ್ ಆರ್ಯ ಅವರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಿಶ್ಟ್ ಅರ್ಜಿಯನ್ನು ವಿಚಾರಣೆ ಸ್ವೀಕರಿಸಿದ ಎಸ್‌ಡಿಎಂ, 30 ದಿನಗಳಲ್ಲಿ ಮತಗಳನ್ನು ಮರುಎಣಿಕೆ ಮಾಡುವಂತೆ ಚುನಾವಣಾ ಅಧಿಕಾರಿಗೆ ಆದೇಶಿಸಿದೆ. ಮರುಎಣಿಕೆಯ ದಿನಾಂಕವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X