ಶಿವಮೊಗ್ಗ | ಹೂವಿನಕೋಣೆ ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣ ; ವಿದ್ಯಾರ್ಥಿ ಹುಡುಗಾಟದಿಂದ ಘಟನೆ

Date:

Advertisements

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತಾಲೂಕಿನ ಕೇಶವಪುರ ಮಾರುತಿ ಪುರದ ಸಮೀಪದ ಹೂವಿನ ಕೋಣೆ ಎಂಬ ಊರು ಈಗ ಸುದ್ದಿಯಲ್ಲಿದೆ ಬಹುತೇಕ ಗಂಗಾಮತಸ್ಥರೇ ಇರುವ ಊರಿನಲ್ಲಿ ಸುಮಾರು 45 ಮನೆಗಳಿವೆ ಮಟ್ಟಿ ಮನೆ ದೊಡ್ಡೇರಿ ಎನ್ನುವ ಎರಡು ಕುಟುಂಬಗಳು ಇರುವ ಊರಿನಲ್ಲಿ ಒಂದರಿಂದ ಐದನೇ ತರಗತಿಯ ಸರ್ಕಾರಿ ಶಾಲೆ ಇದೆ ಸುಮಾರು 18 ಜನ ಮಕ್ಕಳು ಇಲ್ಲಿ ಓದುತ್ತಿದ್ದಾರೆ.

ಹೂವಿನಕೋಣೆ ಸರ್ಕಾರಿ ಶಾಲೆಗೆ ತನ್ನದೇ ಆದ ಹಿಂದೆ ಅಲ್ತಾಫ್ ಹಾಗೂ ತೀರ್ಥ್ ಕುಮಾರ್ ಎನ್ನುವ ಶಿಕ್ಷಕರು ಇದ್ದಾಗ ಈ ಶಾಲೆ ಉತ್ತುಂಗ ಸ್ಥಿತಿಯಲ್ಲಿತ್ತು ಆಗ ಸುಮಾರು 35 ಜನ ಮಕ್ಕಳಿದ್ದರು ಈಗ ಅದು 18 ಜನಕ್ಕೆ ಇಳಿದಿದೆ. ಈಗ ಅಲ್ತಾಫ್ ಹಾಗೂ ತೀರ್ಥ್ ಕುಮಾರ್ ಇಬ್ಬರ ಟೀಚರ್ ಗಳು ಇಲ್ಲ ಈಗ ಅತಿಥಿ ಶಿಕ್ಷಕರುಗಳು ಇದ್ದಾರೆ ಒಬ್ಬರು ಶಿವಮೊಗ್ಗದಿಂದ ಬಂದರೆ ಇನ್ನೊಬ್ಬರು ಸ್ಥಳೀಯ ವಿಜಯಪುರದಿಂದ ಬರುತ್ತಾರೆ

ಸ್ಥಳೀಯವಾಗಿ ಬರುವ ಅತಿಥಿ ಟೀಚರ್ ಮಹಿಳೆ ಆಗಿದ್ದಾರೆ. ಇವರ ಜೊತೆಗೆ ಅಡುಗೆ ಮಾಡುವ ಸಿಬ್ಬಂದಿ ಒಬ್ಬರು ಇದ್ದಾರೆ ಒಟ್ಟಾರೆ ನಾಲ್ಕು ಜನ ಇದ್ದಾರೆ. ಈ ಶಾಲೆ ಈಗ ಸುದ್ದಿಯಲ್ಲಿದೆ ಏಕೆಂದರೆ ಈ ಶಾಲೆಯ ನೀರಿನ ಟ್ಯಾಂಕಿಗೆ ವಿಷ ಹಾಕಲಾಗಿದೆ. ಇದು ದೊಡ್ಡ ಮಟ್ಟದ ಸುದ್ದಿಯಾಗಿದ್ದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣ ತನಿಖೆ ನಡೆಸುವಂತೆ ಎಸ್ ಪಿ ಅವರಿಗೆ ಸೂಚಿಸಿದ್ದರು.

Advertisements

ಎಸ್ ಪಿ ಮಿಥುನ್ ಕುಮಾರ್ ಅವರು ಸಹ ಸ್ಥಳಕ್ಕೆ ಭೇಟಿ ನೀಡಿ ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಿ ನಾಲ್ಕು ತಂಡಗಳನ್ನು ರಚನೆ ಮಾಡಿ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದರು.

1002005507

ಇವರ ಆದೇಶದ ಮೇರೆಗೆ ವಿವಿಧ ಹಂತಗಳಲ್ಲಿ ತನಿಖೆ ನಡೆಯುತ್ತಿದೆ ಆಡಳಿತ ಮಂಡಳಿ, ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ಪೋಷಕರು, ಊರಿನ ಜನರು, ಇವೆಲ್ಲದರ ಜೊತೆಗೆ ಶಾಲೆಯ ಮಕ್ಕಳನ್ನು ಪೊಲೀಸ್ ಇಲಾಖೆ ವಿಚಾರಣೆಗೆ ಒಳಪಡಿಸಿದ್ದರು.

ಹೂವಿನಕೋಣೆ ಶಾಲೆಯಲ್ಲಿ ನೀರಿನ ತೊಟ್ಟಿಗೆ ವಿಷ ಬೆರೆಸಿದ ಪ್ರಕರಣದಿಂದ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ನಾಲ್ಕು ದಿನಗಳ ಹಿಂದೆ ದಾಖಲಾಗಿದ್ದರು. ಬಹಳ ಗಂಭೀರವಾಗಿದ್ದ ವಿಷಯ ಮಕ್ಕಳಾಟಿಕೆಯಲ್ಲಿ ಕೊನೆಯಾಗಿದೆ. ಮಕ್ಕಳ ಹುಡುಗಾಟಿಕೆಯಲ್ಲಿ ನೀರಿಗೆ ವಿಷ ಬೆರೆಸಿದ್ದಾಗಿ ತನಿಖೆಯಿಂದ ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರವರು ಸಹ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ ಭಯೋತ್ಪಾದನೆಗಿಂತ ಗಂಭೀರ ವಿಷಯ ಎಂದು ತಿಳಿಸಿದ್ದರು.

ಸಿಎಂ ಅವರ ಅದೇಶ ಬೆನ್ನಲ್ಲೇ ತನಿಖೆ ಚುರುಕುಗೊಂಡಿತ್ತು. ಪೊಲೀಸರು ಫುಲ್ ಅಲರ್ಟ್ ಆಗಿದ್ದು ವಿವಿಧ ರೀತಿಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಕರಣ ಭೇದಿಸಲು ಮೂರು ತಂಡಗಳ ರಚನೆಯನ್ನು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾಡಿದ್ದರು. ತನಿಖೆಗಾಗಿ ಒಟ್ಟು 18 ಪೊಲೀಸರ ನಿಯೋಜಿಸಿದ್ದರು.

ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ನೇತೃತ್ವದಲ್ಲಿ ತಂಡ ರಚನೆ ಆಗಿತ್ತು. ಟೆಕ್ನಿಕಲ್ ಎವಿಡೆನ್ಸ್ ಕಲೆಹಾಲು ಪೊಲೀಸರು ಮುಂದಾಗಿದ್ದಾರೆ. ಟವರ್ ಡಂಪ್ ಮೂಲಕ ತನಿಖೆ ಆರಂಭ ಮಾಡಿದ್ದರು.

1002005506

ಐದನೇ ತರಗತಿಯ ಬಾಲಕನೇ ಈ ಕೃತ್ಯ ನಡೆಸಿರುವುದಾಗಿ ತನಿಖೆಯಿಂದ ಬೆಳಕಿಗೆ ಬಂದಿದೆ.ಈ ಘಟನೆ ನಡೆಯುವ 15 ದಿನಗಳ ಹಿಂದೆ ಈತನ ಸ್ನೇಹಿತ ಫಿನಾಯಿಲ್ ಹಾಕಿದ್ದನ್ನ ಗಮನಿಸಿದ ಬಾಲಕ ನೀರಿಗೆ ವಿಷ ಬೆರೆಸಿದ್ದಾನೆ ಎಂದು ತಿಳಿದು ಬಂದಿದೆ. ಮಕ್ಕಳ ಈ ಹುಡುಗಾಟಿಕೆ ಇತರರ ಪ್ರಾಣಕ್ಕೆ ಆಪತ್ತು ತಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X