ಕಾಂಗ್ರೆಸ್‌ನಿಂದ ಎರಡನೇ ಹಂತದ ಭಾರತ್‌ ಜೋಡೋ: ಈ ಬಾರಿ ಗುಜರಾತ್‌ನಿಂದ ಆರಂಭ

Date:

Advertisements

ಎರಡನೇ ಹಂತದ ಭಾರತ್‌ ಜೋಡೋ ಯಾತ್ರೆ ಹಮ್ಮಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ರಾಹುಲ್‌ ಗಾಂಧಿಯ ನಾಯಕತ್ವದಲ್ಲಿ ನಡೆಯಲಿರುವ ಈ ಬಾರಿಯ ಯಾತ್ರೆ ಗುಜರಾತ್‌ನಿಂದ ಆರಂಭಗೊಂಡು ಮೇಘಾಲಯದಲ್ಲಿ ಅಂತ್ಯಗೊಳ್ಳಲಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಎರಡನೇ ಹಂತದ ಭಾರತ್‌ ಜೋಡೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಪಶ್ಚಿಮ ರಾಜ್ಯದ ವಿವಿಧ ಭಾಗಗಳಲ್ಲಿ ಮೆರವಣಿಗೆಯನ್ನು ಮುನ್ನಡೆಸಲಿದ್ದಾರೆ. ಯಾತ್ರೆ ಕೈಗೊಳ್ಳುವ ಬಗ್ಗೆ ಎಐಸಿಸಿ ನಾಯಕರು ಮಾಹಿತಿ ನೀಡಿದ್ದಾರೆ. ವಿವರಗಳನ್ನು ಅಂತಿಮಗೊಳಿಸಲು ಸಮಿತಿಯನ್ನು ರಚಿಸಲಾಗಿದೆ. ಮೆರವಣಿಗೆಯ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ‘ಕೇರಳ’ವನ್ನು ‘ಕೇರಳಂ’ ಎಂದು ಹೆಸರು ಬದಲಾಯಿಸಲು ಕೇಂದ್ರಕ್ಕೆ ಒತ್ತಾಯಿಸುವ ನಿರ್ಣಯ ಅಂಗೀಕಾರ

Advertisements

ಈ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ರಾಹುಲ್‌ ಗಾಂಧಿ ಅವರ ಪಾದಯಾತ್ರೆ ಗುಜರಾತ್‌ನ ಪೋರ್‌ಬಂದರ್‌ನಿಂದ ಅರುಣಾಚಲ ಪ್ರದೇಶದ ಪಾಸಿಘಾಟ್‌ ತನಕ ನವೆಂಬರ್‌ ತಿಂಗಳ ಮೊದಲು ಆರಂಭವಾಗಲಿದೆ” ಎಂದು ಹೇಳಿದ್ದರು.

ಮೊದಲ ಹಂತದ ಭಾರತ್‌ ಜೋಡೋ ಯಾತ್ರೆ 2022ರ ಸೆಪ್ಟೆಂಬರ್‌ನಲ್ಲಿ ದಕ್ಷಿಣ ಭಾರತದ ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಉತ್ತರದ ಕಾಶ್ಮೀರದಲ್ಲಿ ಕೊನೆಯಾಗಿತ್ತು. 130 ದಿನಗಳ ಯಾತ್ರೆಯು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡು 4 ಸಾವಿರ ಕಿ.ಮೀವರೆಗೂ ಸಾಗಿತ್ತು. ಈ ಅಭೂತಪೂರ್ವ ಯಾತ್ರೆಯಲ್ಲಿ ದೇಶದ ವಿವಿಧ ಕ್ಷೇತ್ರದ ಸಾವಿರಾರು ಗಣ್ಯರು ರಾಹುಲ್‌ ಗಾಂಧಿ ಜೊತೆ ಹೆಜ್ಜೆ ಹಾಕಿದ್ದರು.

ಲೋಕಸಭೆಯಲ್ಲಿ ಇಂದು(ಆಗಸ್ಟ್ 09) ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಭಾರತ ಒಗ್ಗೂಡಿಸುವ ಯಾತ್ರೆ ಇನ್ನೂ ಮುಗಿದಿಲ್ಲ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X