ರಾಣೇಬೆನ್ನೂರು | ಸೇವಾ ನಿವೃತ್ತಿ: ಎಂ ಎಚ್ ಬಜ್ಜಿ ಗುರುಗಳಿಗೆ ಗೌರವಪೂರ್ವಕ ಸನ್ಮಾನ

Date:

Advertisements

ರಾಣೇಬೆನ್ನೂರು ತಾಲೂಕಿನ ಹುಲಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟು ವರ್ಷಗಳ ಕಾಲ ಸೇವೆಸಲ್ಲಿಸಿ ನಿವೃತ್ತಿಯಾಗುತ್ತಿರುವ ಎಂ ಎಚ್ ಬಜ್ಜಿ ಗುರುಗಳಿಗೆ ಎಸ್‌ಡಿಎಂಸಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಸದಸ್ಯರು ಶಿಕ್ಷಕರ ಗುರುಬಳಗದೊಂದಿಗೆ ಹಾಗೂ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಸಮಸ್ತ ಪದಾಧಿಕಾರಿಗಳು ಗ್ರಾಮಸ್ಥರು ಸೇರಿ ಸನ್ಮಾನಿಸಿ ಗೌರವಿಸಿ ಅಭಿನಂದನಾ ಪತ್ರ ನೀಡಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯರು ಭೀಮಪ್ಪ ಕುಡಪಲಿ ಮಾತನಾಡಿ, “ಎಂ ಎಚ್ ಬಜ್ಜಿ ಗುರುಗಳು ನಮ್ಮ ಹುಲಿಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8 ವರ್ಷ ನಮ್ಮ ಶಾಲೆಯ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ನಮ್ಮ ಶಾಲೆಯ ಹೆಮ್ಮೆಯ ಗುರುಗಳಾಗಿದ್ದಾರೆ. ಇವತ್ತಿನ ದಿನ ನಮ್ಮ ಶಾಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ಅವರಿಗೆ ಗ್ರಾಮ ಪಂಚಾಯಿತಿ ಸದಸ್ಯರಿಂದ, ಎಸ್‌ಡಿಎಂಸಿ ಸದಸ್ಯರಿಂದ ಹಾಗೂ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯಿಂದ, ಶಾಲಾ ಶಿಕ್ಷಕರ ವತಿಯಿಂದ ಸನ್ಮಾನಿಸಿ ಗೌರವಿಸಿ ಅಭಿನಂದನೆ ಪತ್ರ ಹಾಗೂ ಸವಿನೆನಪಿನ ಉಡುಗುರೆ ಕೊಟ್ಟು ಬೀಳ್ಕೊಡುತ್ತಿದ್ದೇವೆ. ಮುಂದೆ ಅವರು ನಮ್ಮ ಶಾಲೆಯನ್ನು ಮರೆಯದೆ ಶಾಲೆಯ ಶುಭ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಾಗೂ ನಮ್ಮ ಊರಿನ ಜಾತ್ರೆ ಹಬ್ಬಗಳಲ್ಲಿ ಭಾಗವಹಿಸಬೇಕು. ಗುರುಗಳು ಶಾಲೆಗೆ ಬಂದಾಗ ಮಕ್ಕಳು, ಗ್ರಾಮಸ್ಥರು ಗುರುಗಳಿಗೆ ಗೌರವಗಳೊಂದಿಗೆ ನಮಸ್ಕರಿಸುವಂತಹ ಮನೋಭಾವನೆ ಬಂದಾಗ ಮಾತ್ರ ಸುದೀರ್ಘವಾಗಿ ಸೇವೆಸಲ್ಲಿಸಿದ್ದಕ್ಕೂ ಸಾರ್ಥಕವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಡಿವೈಎಫ್ಐ ಮನವಿಗೆ ಬಿಇಒ ಸ್ಪಂದನೆ: ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ ಸರಿಪಡಿಸುವ ಭರವಸೆ

Advertisements

ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಹನಗೋಡಿಮಠ, ಮುಖ್ಯೋಪಾಧ್ಯಾಯ ಕಾಳಿಂಗಪ್ಪ ಆಲದಗೇರಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ ಬಣಕಾರ, ಸ್ವಾಕರವೇ ತಾಲೂಕ ಅಧ್ಯಕ್ಷ ಚಂದ್ರಪ್ಪ ಬಣಕಾರ, ಚಂದ್ರುಗೌಡ, ಕೆಂಚನಗೌಡ್ರು, ಸಾಕಮ್ಮ, ಸುಮಾ ಕೋಲಕಾರ ಸೇರಿದಂತೆ ಶಾಲೆಯ ಸಹ ಶಿಕ್ಷಕರು, ಸುತ್ತಮುತ್ತಲಿನ ಶಾಲೆಯ ಸಹ ಶಿಕ್ಷಕರು, ಗ್ರಾಮಸ್ಥರು ಶಾಲೆಯ ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X