ರಾಯಚೂರು | ಕ್ಯಾಥೋಲಿಕ್ ಕನ್ಯಾಸ್ತ್ರೀಯರ ಬಂಧನ ಖಂಡಿಸಿ ಪ್ರತಿಭಟನೆ

Date:

Advertisements

ಛತ್ತೀಸಗಡದಲ್ಲಿ ಕ್ಯಾಥೋಲಿಕ್ ಕನ್ಯಾಸ್ತ್ರೀಯರ ಮೇಲೆ ನಡೆದ ಹಲ್ಲೆ ಹಾಗೂ ಕಾನೂನು ಬಾಹಿರವಾಗಿ ನಡೆಸಲಾದ ಬಂಧನ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಮಸ್ಕಿ ನಗರದಲ್ಲಿ ಸೋಮವಾರ ಕ್ರೈಸ್ತ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿದರು.

ನಗರದ ಕೋರ್ಟ್ ಸರ್ಕಲ್‌ನಿಂದ ಆರಂಭಗೊಂಡ ಮೆರವಣಿಗೆ ನಡೆಸಿ ತಹಶೀಲ್ದಾರ್ ಕಚೇರಿಯವರೆಗೆ ಕೈಯಲ್ಲಿ ಬಿತ್ತಿ ಪತ್ರಗಳನ್ನು ಹಿಡಿದು ಮೌನವಾಗಿ ಮರೆವಣಿಗೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಾಲಸ್ವಾಮಿ ಅವರು, ಕ್ಯಾಥೋಲಿಕ್ ಧರ್ಮಸಭೆಯ ಕನ್ಯಾಸ್ತ್ರೀಯರನ್ನು ಮಕ್ಕಳ ಸಾಗಾಟ ಮತ್ತು ಮತಾಂತರದಲ್ಲಿ ತೊಡಗಿರುವ ಧರ್ಮ ಪ್ರಚಾರಕರೆಂದು ಸುಳ್ಳು ಆರೋಪ ಹೊರಿಸಿ ಪೊಲೀಸ್ ಠಾಣೆಗೆ ದೂರು ನೀಡಿ ಬಂಧಿಸಿರುವುದು ಖಂಡನೀಯ ಎಂದರು.

ಪ್ರತಿಯೊಬ್ಬ ಪ್ರಜೆಗೂ ತಾನು ಇಚ್ಛಿಸಿದ ಧರ್ಮವನ್ನು ಆಚರಿಸಲು ಸಂವಿಧಾನ ಹಕ್ಕಿದೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಯವರು ಶಾಂತಿ, ಪ್ರೀತಿ ಮತ್ತು ಸಹಬಾಳ್ವೆಯ ಸಂದೇಶವನ್ನು ಸಹಿಸದೆ, ಮನುವಾದಿ ನಿಲುವಿನಿಂದ ಉದ್ದೇಶಪೂರ್ವಕವಾಗಿ ಸಂಚು ರೂಪಿಸಿ ದಮನಕ್ಕೆ ಮುಂದಾಗುತ್ತಿದ್ದಾರೆ,” ಎಂದು ಆರೋಪಿಸಿದರು.

1000163981

ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಅಹಿತಕರ ಘಟನೆಗಳು ನಡೆಯುತ್ತಿವೆ. ತಕ್ಷಣ ಆಯಾ ರಾಜ್ಯದ ಸರ್ಕಾರಗಳು ಸೂಕ್ತ ರಕ್ಷಣೆ ನೀಡಬೇಕು ಇಲ್ಲದಿದ್ದರೆ ರಾಜ್ಯದ ಸರ್ಕಾರವೇ ನೇರ ಹೊಣೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೈಕ್ – ಟಾಟಾಏಸಿ ಡಿಕ್ಕಿ : ಓರ್ವ ಸಾವು ,ನಾಲ್ವರಿಗೆ ಗಾಯ

Advertisements

ಈ ವೇಳೆ ರಾಜ್ಯ ಮಹಿಳಾ ಒಕ್ಕೂಟ ಮೌಕ್ಷಮ್ಮ, ಫಾದರ್ ಕ್ಸೇವಿಯರ, ಸುರೇಶ್ ಅಂತರಗಂಗಿ, ರಾಯಪ್ಪ, ಶಾಂಭವಿ, ಮರಿಯಮ್ಮ ಹೊಸಳ್ಳಿ, ಇನ್ನಿತರರು ಉಪಸ್ಥಿತರಿದ್ದರು.


ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X