ತೇಜಸ್ವಿ ಯಾದವ್‌ಗೆ ಎರಡು ಮತದಾರರ ಗುರುತಿನ ಚೀಟಿ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Date:

Advertisements

ಆರ್‌ಜೆಡಿ ನಾಯಕ, ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರಿಗೆ ಎರಡು ಮತದಾರರ ಗುರುತಿನ ಚೀಟಿ ನೀಡಿದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಬಿಹಾರದ ಪಟನಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಚುನಾವಣಾ ಆಯೋಗವು ಯಾದವ್ ಅವರಿಗೆ ‘ಅಧಿಕೃತವಾಗಿ ನೀಡಿಲ್ಲ’ ಎಂದು ಹೇಳಲಾದ ಮತದಾರರ ಗುರುತಿನ ಚೀಟಿಯನ್ನು ‘ತನಿಖೆಗೆ ಹಸ್ತಾಂತರಿಸುವಂತೆ’ ಯಾದವ್ ಅವರಿಗೆ ಚುನಾವಣಾ ಆಯೋಗ ತಿಳಿಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ.

ಇನ್ನು ವಿರೋಧ ಪಕ್ಷದ ನಾಯಕ ಯಾದವ್ ಅವರ ಎಪಿಕ್(EPIC) ಕಾರ್ಡ್ ಸಂಖ್ಯೆಯನ್ನು ಬದಲಾಯಿಸಲಾಗಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ. ಎರಡು ಮತದಾರರ ಗುರುತಿನ ಚೀಟಿ ಸಂಬಂಧ ದಿಘಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: 64 ಲಕ್ಷಕ್ಕೂ ಅಧಿಕ ಮತದಾರರ ಹೆಸರು ‘ಡಿಲೀಟ್’

Advertisements

“ನಾವು ದೂರನ್ನು ಜಿಲ್ಲಾ ಚುನಾವಣಾ ಕಚೇರಿಗೆ ರವಾನಿಸಿದ್ದೇವೆ. ಇಂತಹ ವಿಷಯಗಳ ಬಗ್ಗೆ ನಿರ್ಧರಿಸುವ ಅಧಿಕಾರವನ್ನ ಚುನಾವಣಾ ಕಚೇರಿ ಹೊಂದಿದೆ. ಚುನಾವಣಾ ಅಧಿಕಾರಿಗಳಿಂದ ನಿರ್ದೇಶನ ಬಂದರೆ ಎಫ್‌ಐಆರ್ ದಾಖಲಿಸಬಹುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ನಡೆಸಿದೆ. ಬಳಿಕ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಚುನಾವಣಾ ಆಯೋಗ ತಮ್ಮ EPIC ಸಂಖ್ಯೆಯನ್ನು ‘ಬದಲಾಯಿಸಿದೆ’ ಎಂದು ಯಾದವ್ ಆರೋಪಿಸಿದ್ದಾರೆ. ವಿಶೇಷ ತೀವ್ರ ಪರಿಷ್ಕರಣೆ (SIR) ಭಾಗವಾಗಿ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಕಾಣೆಯಾಗಿದೆ ಎಂದು ಯಾದವ್ ಹೇಳಿದ್ದರು. ಆದರೆ ಈ ಆರೋಪವನ್ನು ಚುನಾವಣಾ ಆಯೋಗ ತಿರಸ್ಕರಿಸಿದ ಬಳಿಕ ತಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಬದಲಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

2020ರ ವಿಧಾನಸಭಾ ಚುನಾವಣೆಗೆ ಯಾದವ್ ಅವರು ತಮ್ಮ ಅಫಿಡವಿಟ್‌ನಲ್ಲಿ ಹೇಳಿದಂತೆ EPIC ಸಂಖ್ಯೆ ಒಂದೇ ಆಗಿರುತ್ತದೆ ಎಂದು ಹೇಳುವ ಮೂಲಕ ಚುನಾವಣಾ ಆಯೋಗ ಈ ಆರೋಪವನ್ನು ತಿರಸ್ಕರಿಸಿದೆ.

ಇನ್ನು ಒಬ್ಬ ವ್ಯಕ್ತಿಯ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಎರಡು ಬಾರಿ ಕಾಣಿಸಿಕೊಂಡ ಕಾರಣ ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ಬೇಗುಸರಾಯ್ ಜಿಲ್ಲೆಯ ಬೂತ್ ಮಟ್ಟದ ಅಧಿಕಾರಿಯನ್ನು (BLO) ಅಮಾನತುಗೊಳಿಸಲಾಗಿದೆ. ಇನ್ನು ಈ ಘಟನೆ ಸಾಹೇಬ್‌ಪುರ್ ಕಮಲ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ಈ ಕ್ಷೇತ್ರದಲ್ಲೇ ಎಸ್‌ಐಆರ್‌ನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ವರದಿ ಮಾಡಿದ್ದ ಪತ್ರಕರ್ತರೊಬ್ಬರ ಮೇಲೆ ಎಫ್‌ಐಆರ್ ದಾಖಲಿಸಲಾಗಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X