ಉಡುಪಿ | ಸಾಹಿತಿ ಮರವಂತೆ ಪ್ರಕಾಶ್ ಪಡಿಯಾರ್ ನಿಧನ

Date:

Advertisements

ಸಾಹಿತಿ, ಪತ್ರಕರ್ತ, ಅಂಕಣ ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ ಇಂದು ಆಶ್ರಯ ಪಡೆದಿರುವ ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ನಿಧನರಾದರು. ಮೃತರು ಪತ್ನಿ, ಇರ್ವರು ಪುತ್ರಿಯರನ್ನು ಅಗಲಿದ್ದಾರೆ. ಸಾಹಿತ್ಯ,‌ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿದ್ದ ಪಡಿಯಾರರು, ಗ್ರಾಮೀಣ ಭಾಗದ ಸಮಸ್ಯೆಯ ಕುರಿತು ಬರೆದ ವರದಿಗಳು, ಆಡಳಿತ ವ್ಯವಸ್ಥೆಯ ಗಮನ ಸೆಳೆದು ಫಲಶ್ರುತಿ ಪಡೆಯುತ್ತಿದ್ದವು. ಅವರ ಅನನ್ಯ ಸಾಧನೆಗೆ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿದ್ದವು. ಕೆಲವು ವರ್ಷ ಜೀವಾ ವಿಮೆ ಎಜೆಂಟರಾಗಿದ್ದರು. ಮಾಧ್ಯಮಗಳಿಗೆ ಜಾಹೀರಾತು ಸಂಗ್ರಹಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಅನಾರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ನೊಂದಿದ್ದ‌ ಪಡಿಯಾರರು, ಜೀವನ ನಿರ್ವಹಣೆ ಎದುರಿಸಲು ಅಸಹಾಯಕರಾಗಿ ಉಡುಪಿಯಲ್ಲಿ ದಿನಗಳನ್ನು ಕಳೆಯುತ್ತಿದ್ದರು. ಕಳೆದ ವರ್ಷದ ಮೇ 18‌ ರಂದು, ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ರಕ್ಷಿಸಿ, ಕಾರ್ಕಳದ ಹೊಸಬೆಳಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಿದ್ದರು.‌ ಆಶ್ರಮದ ಸಂಚಾಲಕಿ ತನುಲಾ ತರುಣ್ ಅವರು ಆಹಾರ, ಔಷಧೋಪಚಾರ ಒದಗಿಸಿ ಅಕ್ಕರೆಯಿಂದ ಪೋಷಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X