ಚಿಕ್ಕಮಗಳೂರು | ಹೋರಾಟದ ದನಿ ‘ಗದ್ದರ್’ಗೆ ನುಡಿನಮನ

Date:

Advertisements

ಕ್ರಾಂತಿಕಾರಿ ಕವಿ, ಹೋರಾಟಗಾರ ಗದ್ದರ್ ಅವರ ಜೀವನ ಇಂದಿನ ಯುವಜನತೆಗೆ ಮಾದರಿಯಾಗಿದೆ. ಕಾಫಿನಾಡಿನ ಯುವಜನರಲ್ಲೂ ಹೋರಾಟದ ಕಿಚ್ಚು ಹಚ್ಚಿಸುವಲ್ಲಿ ಅವರು ಸಫಲರಾಗಿದ್ದರು. ಅವರ ಅಗಲಿಕೆಯಿಂದ ಜನಪರ ಹೋರಾಟಗಳಿಗೆ ತುಂಬಲಾರದ ನಷ್ಟವಾಗಿದೆ ಎಂದು ಕರ್ನಾಟಕ ಕೋಮು ಸೌಹಾರ್ದ ವೇದಿಕೆ ರಾಜ್ಯ ಸಂಚಾಲಕ ಗೌಸ್‌ ಮೊಹಿದ್ದೀನ್ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಬುಧವಾರ ಆಯೋಜಿಸಲಾಗಿದ್ದ ಗದ್ದರ್‌ ನುಡಿನಮನ ಸಂತಾಪ ಸಭೆಯಲ್ಲಿ ಅವರು ಮಾತನಾಡಿದರು. “ದೇಶದ ಬಡಜನರು, ಕಾರ್ಮಿಕರು, ಮಹಿಳೆಯರು, ಆದಿವಾಸಿಗಳ ಹಕ್ಕುಗಳಿಗಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದ ಕ್ರಾಂತಿಕಾರಿ ಗದ್ದರ್ ಅವರ ನಿಧನದಿಂದಾಗಿ ಜನಪರ ಹೋರಾಟಗಳಿಗೆ ತುಂಬಲಾರದ ನಷ್ಟ ಉಂಟಾಗಿದೆ” ಎಂದರು.

“80ರ ದಶಕದಲ್ಲಿ ಕ್ರಾಂತಿಕಾರಿ ಚಳವಳಿಗಳಲ್ಲಿ ಭಾಗವಹಿಸಿ ಜನನಾಟ್ಯ ಮಂಡಳಿ ಮೂಲಕ ಆಂಧ್ರ, ತೆಲಂಗಾಣ, ಛತ್ತೀಸ್‌ ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ ಕರ್ನಾಟಕ, ಒಡಿಶಾ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಜನಪರ ಹೋರಾಟಗಳನ್ನು ಗದ್ದರ್ ಕಟ್ಟಿದ್ದರು. ಬಡವರ ನೋವು, ಸಂಕಟ, ಸಮಸ್ಯೆ, ಆಡಳಿತ ಶಾಹಿ ವ್ಯವಸ್ಥೆಯನ್ನು ಕ್ರಾಂತಿಕಾರಿ ಹಾಡುಗಳ ಮೂಲಕ ವಿವರಿಸುತ್ತಿದ್ದರು. ಯುವಜನರಲ್ಲಿ ಹೋರಾಟದ ಕಿಚ್ಚು ಮೂಡಿಸುವಲ್ಲಿ ಯಶಸ್ವಿಯಾಗಿದ್ದರು” ಎಂದು ಸ್ಮರಿಸಿದರು.

Advertisements

“ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಘಪರಿವಾರದ ಷಡ್ಯಂತ್ರಗಳ ವಿರುದ್ಧ ಕೋಮುಸೌಹಾರ್ದ ವೇದಿಕೆ ಹೋರಾಟ ರೂಪಿಸಿದ್ದ ಸಂದರ್ಭದಲ್ಲಿ ಕವಿ ಗದ್ದರ್ ಅವರನ್ನು ಆಹ್ವಾನಿಸಲಾಗಿತ್ತು. ಆ ಹೋರಾಟದಲ್ಲಿ ಭಾಗವಹಿಸಿದ್ದ ಅವರು ಕಾಫಿನಾಡಿನ ಜನರಲ್ಲಿ ಸಂಚಲನ ಮೂಡಿಸಿದ್ದರು. ಜಿಲ್ಲೆಯ ಯುವಜನರು ಅವರ ಕ್ರಾಂತಿಗೀತೆಗಳು, ಮಾತುಗಳಿಂದ ಪ್ರೇರಿತರಾಗಿ ಜನಪರ ಹೋರಾಟಗಳಿಗೆ ಧುಮುಕಿದ್ದರು. ಜಿಲ್ಲೆಯ ಚಳವಳಿಗೆ ಗದ್ದ‌ರ್ ಅವರು ನೀಡಿರುವ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ” ಎಂದರು.

“ಕೋಮುವಾದ, ಅಧಿಕಾರಶಾಹಿ, ಬಂಡವಾಳಶಾಹಿ ವ್ಯವಸ್ಥೆಯಿಂದಾಗಿ ಬಡವರು, ಕಾರ್ಮಿಕರು, ಆದಿವಾಸಿಗಳು, ಮಹಿಳೆಯರ ಬದುಕು ಬೀದಿಪಾಲಾಗುತ್ತಿದೆ. ಅರಣ್ಯವಾಸಿಗಳ ಬದುಕು ಅತಂತ್ರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕವಿ ಗದ್ದರ್ ಅವರ ಚಿಂತನೆಗಳ ಪಾಲನೆಯಿಂದ ಭ್ರಷ್ಟ ವ್ಯವಸ್ಥೆ ವಿರುದ್ಧ ಹೋರಾಡಲು ಸಾಧ್ಯವಿದೆ. ಗದ್ದರ್ ಅವರ ಜೀವನ ಇಂದಿನ ಯುವಜನತೆಗೆ ಮಾದರಿಯಾಗಿದೆ” ಎಂದು ತಿಳಿಸಿದರು.

ಸಭೆಯಲ್ಲಿ ಮರ್ಲೆ ಅಣ್ಣಯ್ಯ, ಹುಣಸೇಮಕ್ಕಿ ಲಕ್ಷಣ್ ವೆಂಕಟೇಶ್ ಶೋಯಬ್, ಗೋಪಾಲಗೌಡ, ಹೊನಪ್ಪ ಗೌಡ, ಮಂಜು, ಹಸನಬ್ಬ ಅರುಣಾಕ್ಷಿ ,ವೆಂಕಟೇಶ್ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X